Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...