Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...