Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...