Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...