Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...