Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...