Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...