Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...