Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...