Homeಮುಖಪುಟ'ಹಳೆಯ' ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

‘ಹಳೆಯ’ ಸಂಸತ್ ಭವನದ ಗತವೈಭವದ ಕುರಿತು ಒಂದಿಷ್ಟು

- Advertisement -
- Advertisement -

ನೂತನ ಸೆಂಟ್ರಲ್ ವಿಸ್ತಾ ನಿರ್ಮಾಣಗೊಂಡ ಬಳಿಕ 96 ವರ್ಷ ಇತಿಹಾಸವಿರುವ ಸಂಸತ್ ಭವನಕ್ಕೆ ‘ಹಳೆಯ’ ವಿಶೇಷಣ ಸೇರಿಕೊಂಡಿದೆ. ಅಷ್ಟು ಮಾತ್ರವಲ್ಲದೆ ವಿಶಿಷ್ಟ ವಾಸ್ತುಶಿಲ್ಪ ಮತ್ತು ಐತಿಹಾಸಿಕ ತೀರ್ಮಾನಗಳಿಗೆ ಸಾಕ್ಷಿಯಾದ ಅದು ಇತಿಹಾಸದ ಪುಟ ಸೇರುತ್ತಿದೆ. ಎಲ್ಲರ ಗಮನ ಸೆಂಟ್ರಲ್ ವಿಸ್ತಾದ ಉದ್ಘಾಟನೆಯ ಸುತ್ತ ನೆಟ್ಟಿರುವಾಗ ಹಿಂದಿನ ಸಂಸತ್ ಭವನದ ವಿಶೇಷತೆಗಳ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ.

ಬ್ರಿಟೀಷ್ ಆಳ್ವಿಕೆಯ ಕಾಲದಲ್ಲಿ ಜನವರಿ 18, 1927 ರಂದು ಅಂದಿನ ವೈಸರಾಯ್ ಲಾರ್ಡ್ ಇರ್ವಿನ್‌ರವರಿಂದ ಕೌನ್ಸಿಲ್ ಹೌಸ್ (ಸಂಸತ್ ಭವನ) ಉದ್ಘಾಟನೆಗೊಂಡಿತು. ಅದರ ಆಕರ್ಷಕ ವೃತ್ತಾಕಾರದ ವಿನ್ಯಾಸ ಮತ್ತು ಮೊದಲ ಮಹಡಿಯಲ್ಲಿ 144 ಕೆನೆ ಮರಳುಗಲ್ಲಿನ ಕಂಬಗಳ ಮೂಲಕ ಕಣ್ಮನ ಸೆಳೆಯಿತು. ಸುಮಾರು ಆರು ಎಕರೆ ವಿಸ್ತೀರ್ಣದಲ್ಲಿ 560 ಅಡಿ ವ್ಯಾಸ ಮತ್ತು ಒಂದು ಮೈಲಿನ ಮೂರನೇ ಒಂದು ಭಾಗದಷ್ಟು ಸುತ್ತಳತೆ ಹೊಂದಿರುವ ಈ ಕಟ್ಟಡವನ್ನು ಸರ್ ಹರ್ಬರ್ಟ್ ಬೇಕರ್ ಅವರು ಸರ್ ಎಡ್ವಿನ್ ಲುಟ್ಯೆನ್ಸ್ ಅವರೊಂದಿಗೆ ವಿನ್ಯಾಸಗೊಳಿಸಿದರು.

ಬ್ರಿಟಿಷರು ಕಲ್ಕತ್ತಾದಿಂದ ದೆಹಲಿಗೆ ಆಡಳಿತವನ್ನು ವರ್ಗಾವಣೆಗೊಳಿಸಿದ ನಂತರ 1920ರಲ್ಲಿ ಕೌನ್ಸಿಲ್ ಹೌಸ್ ಸ್ಥಾಪನೆಗೆ ಅಡಿಗಲ್ಲು ಹಾಕಿದ್ದರು. ವೈಸರಾಯ್ ಹೌಸ್ (ಈಗ ರಾಷ್ಟ್ರಪತಿ ಭವನ) ಮತ್ತು ನಾರ್ತ್ ಬ್ಲಾಕ್ ಮತ್ತು ಸೌತ್ ಬ್ಲಾಕ್ ‘ನವದೆಹಲಿ’ಯ ಕೇಂದ್ರಬಿಂದುವಾಗಿ ಈ ಸಂಸತ್ ಭವನ ಇರುವಂತೆ ಲುಟ್ಯೆನ್ಸ್ ಮತ್ತು ಬೇಕರ್ ವಿನ್ಯಾಸಗೊಳಿಸಿದ್ದರು.

ಭಾರತದ ಭವಿಷ್ಯದ ಬಗ್ಗೆ ಸ್ಪಷ್ಟ ಮುನ್ನೋಟ ಹೊಂದಿದ್ದ ಕ್ರಾಂತಿಕಾರಿ ಹೋರಾಟಗಾರರಾದ ಭಗತ್ ಸಿಂಗ್ ಮತ್ತು ಬಟುಕೇಶ್ವರ್ ದತ್ ದೇಶದ ಗಮನ ಸೆಳೆಯಲು ಬಾಂಬ್ ಎಸೆದಿದ್ದು ಇದೇ ಭವನದಲ್ಲಿ. ಬ್ರಿಟಿಷರು ಜಾರಿಗೆ ತಂದಿದ್ದ ಪಬ್ಲಿಕ್ ಸೇಪ್ಟಿ ಬಿಲ್ ಮತ್ತು ಟ್ರೇಡ್ ಡಿಸ್ಪೂಟ್ ಬಿಲ್ ಎಂಬ ಕರಾಳ ಕಾನೂನುಗಳನ್ನು ವಿರೋಧಿಸಿ, ಕಿವುಡರಿಗೆ ಕೇಳಿಸುವಂತಾಗಬೇಕಾದರೆ ದೊಡ್ಡ ದನಿಯಲ್ಲಿಯೇ ಮಾತನಾಡಬೇಕು ಎಂಬ ಆಶಯದಿಂದ ಪಾರ್ಲಿಮೆಂಟಿನಲ್ಲಿ ಯಾವುದೇ ಸಾವು ನೋವು ಉಂಟಾಗದಂತೆ ಬಾಂಬ್ ಸ್ಪೋಟಿಸಿ ಬಂಧನಕ್ಕೆ ಒಳಗಾಗಿದ್ದರು. ಆನಂತರ ಕೋರ್ಟಿನ ವಿಚಾರಣೆಯ ವೇಳೆ ತಮ್ಮ ಹರಿತದ ಮಾತುಗಳ ದೇಶದ ಗಮನ ಸೆಳೆದಿದ್ದು ಇತಿಹಾಸ.

ಈ ಕಟ್ಟಡವು ಭಾರತದ ಸ್ವಾತಂತ್ರ್ಯದ ಅರುಣೋದಯವನ್ನು ಕಂಡಿದೆ. ಆಗಸ್ಟ್ 15, 1947 ರಂದು ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಾಡಿದ ಐತಿಹಾಸಿಕ ‘ಟ್ರಿಸ್ಟ್ ವಿತ್ ಡೆಸ್ಟಿನಿ’ ಭಾಷಣಕ್ಕೆ ಸಾಕ್ಷಿಯಾಗಿದೆ.

ಅಂದಿನಿಂದ ಇಂದಿನವರೆಗೂ ಸಂಸತ್ ಭವನ ವಿದ್ವತ್‌ಪೂರ್ಣ ಚರ್ಚೆಗಳಿಗೆ, ನೂರಾರು ಮಸೂದೆಗಳ ಮಂಡನೆಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಒಬ್ಬ ವ್ಯಕ್ತಿಯ ‘ಅಹಂ’ನಿಂದ ರಾಷ್ಟ್ರಪತಿಗಳ ಸಾಂವಿಧಾನಿಕ ಹಕ್ಕಿಗೆ ವಂಚನೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...