Homeಮುಖಪುಟದೆಹಲಿ: ಹಾಸ್ಯನಟ ಮುನಾವರ್ ಫಾರೂಕಿ ಕಾರ್ಯಕ್ರಮ ರದ್ದುಗೊಳಿಸಲು ಪೊಲೀಸರಿಗೆ ಪತ್ರ ಬರೆದ BJP ಬೆಂಬಲಿತ ಸಂಘಟನೆ

ದೆಹಲಿ: ಹಾಸ್ಯನಟ ಮುನಾವರ್ ಫಾರೂಕಿ ಕಾರ್ಯಕ್ರಮ ರದ್ದುಗೊಳಿಸಲು ಪೊಲೀಸರಿಗೆ ಪತ್ರ ಬರೆದ BJP ಬೆಂಬಲಿತ ಸಂಘಟನೆ

- Advertisement -
- Advertisement -

ಆಗಸ್ಟ್ 28 ರಂದು ದೆಹಲಿಯಲ್ಲಿ ನಡೆಯಲಿದ್ದ ಹಾಸ್ಯನಟ ಮುನಾವರ್ ಫಾರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಬಿಜೆಪಿ ಬೆಂಬಲಿತ ಸಂಘಟನೆ ವಿಹೆಚ್‌ಪಿ ಗುರುವಾರ ದೆಹಲಿ ಪೊಲೀಸರಿಗೆ ಪತ್ರ ಬರೆದಿದೆ ಎಂದು ಎಎನ್‌ಐ ವರದಿ ಮಾಡಿದೆ. ಪೊಲೀಸರು ಕಾರ್ಯಕ್ರಮವನ್ನು ರದ್ದುಪಡಿಸಲು ವಿಫಲವಾದರೆ ಬಿಜೆಪಿ ಬೆಂಬಲಿತ ಮತ್ತೊಂದು ಸಂಘಟನೆಯಾದ ಬಜರಂಗದಳದೊಂದಿಗೆ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯು ಎಚ್ಚರಿಕೆ ನೀಡಿದೆ.

ವಿಹೆಚ್‌ಪಿ ದೆಹಲಿ ಅಧ್ಯಕ್ಷ ಸುರೇಂದ್ರ ಕುಮಾರ್ ಗುಪ್ತಾ ಅವರ ಸಹಿ ಇರುವ ಪತ್ರದಲ್ಲಿ “ಈ ವ್ಯಕ್ತಿಯು ತನ್ನ ಪ್ರದರ್ಶನದಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ಅಪಹಾಸ್ಯ ಮಾಡುತ್ತಾನೆ. ಇದರ ಪರಿಣಾಮವಾಗಿ ಹೈದರಾಬಾದ್‌ ಕೋಮು ಉದ್ವಿಗ್ನತೆಗೊಂಡಿತ್ತು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಅಮಾನತುಗೊಂಡಿರುವ ಬಿಜೆಪಿ ನಾಯಕ ಟಿ.ರಾಜಾ ಸಿಂಗ್ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ನೀಡಿದ್ದ ಅವಹೇಳನಕಾರಿ ಹೇಳಿಕೆಗಳನ್ನೆ ಪುನರಾವರ್ತಿಸಿ ಆ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ನಂತರ ಹೈದರಾಬಾದ್‌ನಲ್ಲಿ ಸೋಮವಾರದಂದು ದೊಡ್ಡ ಪ್ರಮಾಣದ ಪ್ರತಿಭಟನೆಗಳು ಭುಗಿಲೆದ್ದವು.

ಇದನ್ನೂ ಓದಿ: ಹೈದರಾಬಾದ್‌: ಮುನಾವರ್‌ ಫಾರೂಖಿ ಕಾರ್ಯಕ್ರಮ ನಡೆಯದಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಬಿಜೆಪಿ ಕರೆ

ಗುರುವಾರ ಬಂಧನಕ್ಕೊಳಗಾದ ರಾಜಾ ಸಿಂಗ್, ಆಗಸ್ಟ್ 20 ರಂದು ಹೈದರಾಬಾದ್‌ನಲ್ಲಿ ನಡೆದ ಮುನಾವರ್ ಫಾರೂಕಿ ಅವರ ಕಾರ್ಯಕ್ರಮಕ್ಕೆ ಪ್ರತಿಕ್ರಿಯೆಯಾಗಿ ಹಾಸ್ಯ ವೀಡಿಯೊವನ್ನು ಪೋಸ್ಟ್ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಆಗಸ್ಟ್ 19 ರಂದು, ಶ್ರೀ ರಾಮಸೇನೆ ಎಂಬ ಬಲಪಂಥೀಯ ಸಂಘಟನೆಯು ಹಾಸ್ಯನಟ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ದಾಖಲಿಸಿದ ನಂತರ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮುನಾವರ್ ಫಾರೂಕಿ ಅವರ ಪ್ರದರ್ಶನವನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಯಿತು.

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

ಆಯೋಜಕರು ಅನುಮತಿ ಕೇಳದ ಕಾರಣ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

ಗುರುವಾರದಂದು ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಅವರು ದೆಹಲಿಯಲ್ಲಿ ಮುನಾವರ್ ಫಾರೂಕಿ ಅವರ ‘ಹಿಂದೂ ವಿರೋಧಿ’ ಪ್ರದರ್ಶನವು ಕೋಮು ಉದ್ವಿಗ್ನತೆಯನ್ನು ಉಂಟುಮಾಡುತ್ತದೆ ಎಂದು ಆರೋಪಿಸಿದ್ದಾರೆ. “ನಾವು ನಗರದಲ್ಲಿ ಶಾಂತಿಯನ್ನು ಬಯಸುತ್ತೇವೆ. ಅವರು ನಮ್ಮ ಹಿಂದೂ ದೇವತೆಗಳನ್ನು ಅಪಹಾಸ್ಯ ಮಾಡುವುದು ನಮಗೆ ಇಷ್ಟವಿಲ್ಲ” ಎಂದು ತಿಳಿಸಿದ್ದಾರೆ.

ಈ ಮಧ್ಯೆ ಕಾರ್ಯಕ್ರಮದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರದರ್ಶನವನ್ನು ರದ್ದುಪಡಿಸುವ ಬಗ್ಗೆಗಿನ ಯಾವುದೆ ಸೂಚನೆ ನಮಗೆ ತಿಳಿದಿಲ್ಲ ಎಂದು ಮುನಾವರ್ ಫಾರೂಕಿ ಅವರ ತಂಡವು ಹೇಳಿದೆ.

ಕಳೆದ ವರ್ಷದಲ್ಲಿ, ಬೆಂಗಳೂರು, ಗುರುಗ್ರಾಮ್, ರಾಯ್‌ಪುರ, ಸೂರತ್, ಅಹಮದಾಬಾದ್, ವಡೋದರಾ, ಗೋವಾ ಮತ್ತು ಮುಂಬೈನಲ್ಲಿ ಫಾರುಕಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಕಳೆದ ವರ್ಷ ಜನವರಿಯಲ್ಲಿ, ಬಿಜೆಪಿ ನಾಯಕರೊಬ್ಬರ ಮಗ ಮುನಾವರ್ ಫಾರೂಕಿ ಅವರು ಕಾರ್ಯಕ್ರಮದಲ್ಲಿ ಹಿಂದೂ ದೇವರನ್ನು ಅವಹೇಳನ ‘ಮಾಡಲಿದ್ದಾರೆ’ ಎಂದು ದೂರು ನೀಡಿದ್ದರಿಂದ ಇಂದೋರ್‌ನ‌ಲ್ಲಿ ಅವರನ್ನು ಬಂಧಿಸಲಾಗಿತ್ತು. ದೂರಿನಲ್ಲಿ, ಮುನಾವರ್ ಫಾರೂಕಿ ತನ್ನ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ‘ನೀಡಲಿದ್ದಾರೆ’ ಎಂದು ಆರೋಪಿಸಿದ್ದರು. ಅವರ ಬಂಧನವಾಗಿ 37 ದಿನಗಳ ನಂತರ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....