Homeಮುಖಪುಟದೆಹಲಿ: ಹಾಸ್ಯನಟ ಮುನಾವರ್ ಫಾರೂಕಿ ಕಾರ್ಯಕ್ರಮ ರದ್ದುಗೊಳಿಸಲು ಪೊಲೀಸರಿಗೆ ಪತ್ರ ಬರೆದ BJP ಬೆಂಬಲಿತ ಸಂಘಟನೆ

ದೆಹಲಿ: ಹಾಸ್ಯನಟ ಮುನಾವರ್ ಫಾರೂಕಿ ಕಾರ್ಯಕ್ರಮ ರದ್ದುಗೊಳಿಸಲು ಪೊಲೀಸರಿಗೆ ಪತ್ರ ಬರೆದ BJP ಬೆಂಬಲಿತ ಸಂಘಟನೆ

- Advertisement -
- Advertisement -

ಆಗಸ್ಟ್ 28 ರಂದು ದೆಹಲಿಯಲ್ಲಿ ನಡೆಯಲಿದ್ದ ಹಾಸ್ಯನಟ ಮುನಾವರ್ ಫಾರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಬಿಜೆಪಿ ಬೆಂಬಲಿತ ಸಂಘಟನೆ ವಿಹೆಚ್‌ಪಿ ಗುರುವಾರ ದೆಹಲಿ ಪೊಲೀಸರಿಗೆ ಪತ್ರ ಬರೆದಿದೆ ಎಂದು ಎಎನ್‌ಐ ವರದಿ ಮಾಡಿದೆ. ಪೊಲೀಸರು ಕಾರ್ಯಕ್ರಮವನ್ನು ರದ್ದುಪಡಿಸಲು ವಿಫಲವಾದರೆ ಬಿಜೆಪಿ ಬೆಂಬಲಿತ ಮತ್ತೊಂದು ಸಂಘಟನೆಯಾದ ಬಜರಂಗದಳದೊಂದಿಗೆ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯು ಎಚ್ಚರಿಕೆ ನೀಡಿದೆ.

ವಿಹೆಚ್‌ಪಿ ದೆಹಲಿ ಅಧ್ಯಕ್ಷ ಸುರೇಂದ್ರ ಕುಮಾರ್ ಗುಪ್ತಾ ಅವರ ಸಹಿ ಇರುವ ಪತ್ರದಲ್ಲಿ “ಈ ವ್ಯಕ್ತಿಯು ತನ್ನ ಪ್ರದರ್ಶನದಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ಅಪಹಾಸ್ಯ ಮಾಡುತ್ತಾನೆ. ಇದರ ಪರಿಣಾಮವಾಗಿ ಹೈದರಾಬಾದ್‌ ಕೋಮು ಉದ್ವಿಗ್ನತೆಗೊಂಡಿತ್ತು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಅಮಾನತುಗೊಂಡಿರುವ ಬಿಜೆಪಿ ನಾಯಕ ಟಿ.ರಾಜಾ ಸಿಂಗ್ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ನೀಡಿದ್ದ ಅವಹೇಳನಕಾರಿ ಹೇಳಿಕೆಗಳನ್ನೆ ಪುನರಾವರ್ತಿಸಿ ಆ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ನಂತರ ಹೈದರಾಬಾದ್‌ನಲ್ಲಿ ಸೋಮವಾರದಂದು ದೊಡ್ಡ ಪ್ರಮಾಣದ ಪ್ರತಿಭಟನೆಗಳು ಭುಗಿಲೆದ್ದವು.

ಇದನ್ನೂ ಓದಿ: ಹೈದರಾಬಾದ್‌: ಮುನಾವರ್‌ ಫಾರೂಖಿ ಕಾರ್ಯಕ್ರಮ ನಡೆಯದಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಬಿಜೆಪಿ ಕರೆ

ಗುರುವಾರ ಬಂಧನಕ್ಕೊಳಗಾದ ರಾಜಾ ಸಿಂಗ್, ಆಗಸ್ಟ್ 20 ರಂದು ಹೈದರಾಬಾದ್‌ನಲ್ಲಿ ನಡೆದ ಮುನಾವರ್ ಫಾರೂಕಿ ಅವರ ಕಾರ್ಯಕ್ರಮಕ್ಕೆ ಪ್ರತಿಕ್ರಿಯೆಯಾಗಿ ಹಾಸ್ಯ ವೀಡಿಯೊವನ್ನು ಪೋಸ್ಟ್ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಆಗಸ್ಟ್ 19 ರಂದು, ಶ್ರೀ ರಾಮಸೇನೆ ಎಂಬ ಬಲಪಂಥೀಯ ಸಂಘಟನೆಯು ಹಾಸ್ಯನಟ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ದಾಖಲಿಸಿದ ನಂತರ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮುನಾವರ್ ಫಾರೂಕಿ ಅವರ ಪ್ರದರ್ಶನವನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಯಿತು.

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

ಆಯೋಜಕರು ಅನುಮತಿ ಕೇಳದ ಕಾರಣ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

ಗುರುವಾರದಂದು ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಅವರು ದೆಹಲಿಯಲ್ಲಿ ಮುನಾವರ್ ಫಾರೂಕಿ ಅವರ ‘ಹಿಂದೂ ವಿರೋಧಿ’ ಪ್ರದರ್ಶನವು ಕೋಮು ಉದ್ವಿಗ್ನತೆಯನ್ನು ಉಂಟುಮಾಡುತ್ತದೆ ಎಂದು ಆರೋಪಿಸಿದ್ದಾರೆ. “ನಾವು ನಗರದಲ್ಲಿ ಶಾಂತಿಯನ್ನು ಬಯಸುತ್ತೇವೆ. ಅವರು ನಮ್ಮ ಹಿಂದೂ ದೇವತೆಗಳನ್ನು ಅಪಹಾಸ್ಯ ಮಾಡುವುದು ನಮಗೆ ಇಷ್ಟವಿಲ್ಲ” ಎಂದು ತಿಳಿಸಿದ್ದಾರೆ.

ಈ ಮಧ್ಯೆ ಕಾರ್ಯಕ್ರಮದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರದರ್ಶನವನ್ನು ರದ್ದುಪಡಿಸುವ ಬಗ್ಗೆಗಿನ ಯಾವುದೆ ಸೂಚನೆ ನಮಗೆ ತಿಳಿದಿಲ್ಲ ಎಂದು ಮುನಾವರ್ ಫಾರೂಕಿ ಅವರ ತಂಡವು ಹೇಳಿದೆ.

ಕಳೆದ ವರ್ಷದಲ್ಲಿ, ಬೆಂಗಳೂರು, ಗುರುಗ್ರಾಮ್, ರಾಯ್‌ಪುರ, ಸೂರತ್, ಅಹಮದಾಬಾದ್, ವಡೋದರಾ, ಗೋವಾ ಮತ್ತು ಮುಂಬೈನಲ್ಲಿ ಫಾರುಕಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಕಳೆದ ವರ್ಷ ಜನವರಿಯಲ್ಲಿ, ಬಿಜೆಪಿ ನಾಯಕರೊಬ್ಬರ ಮಗ ಮುನಾವರ್ ಫಾರೂಕಿ ಅವರು ಕಾರ್ಯಕ್ರಮದಲ್ಲಿ ಹಿಂದೂ ದೇವರನ್ನು ಅವಹೇಳನ ‘ಮಾಡಲಿದ್ದಾರೆ’ ಎಂದು ದೂರು ನೀಡಿದ್ದರಿಂದ ಇಂದೋರ್‌ನ‌ಲ್ಲಿ ಅವರನ್ನು ಬಂಧಿಸಲಾಗಿತ್ತು. ದೂರಿನಲ್ಲಿ, ಮುನಾವರ್ ಫಾರೂಕಿ ತನ್ನ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ‘ನೀಡಲಿದ್ದಾರೆ’ ಎಂದು ಆರೋಪಿಸಿದ್ದರು. ಅವರ ಬಂಧನವಾಗಿ 37 ದಿನಗಳ ನಂತರ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...