Homeಮುಖಪುಟದೆಹಲಿ: ಹಾಸ್ಯನಟ ಮುನಾವರ್ ಫಾರೂಕಿ ಕಾರ್ಯಕ್ರಮ ರದ್ದುಗೊಳಿಸಲು ಪೊಲೀಸರಿಗೆ ಪತ್ರ ಬರೆದ BJP ಬೆಂಬಲಿತ ಸಂಘಟನೆ

ದೆಹಲಿ: ಹಾಸ್ಯನಟ ಮುನಾವರ್ ಫಾರೂಕಿ ಕಾರ್ಯಕ್ರಮ ರದ್ದುಗೊಳಿಸಲು ಪೊಲೀಸರಿಗೆ ಪತ್ರ ಬರೆದ BJP ಬೆಂಬಲಿತ ಸಂಘಟನೆ

- Advertisement -
- Advertisement -

ಆಗಸ್ಟ್ 28 ರಂದು ದೆಹಲಿಯಲ್ಲಿ ನಡೆಯಲಿದ್ದ ಹಾಸ್ಯನಟ ಮುನಾವರ್ ಫಾರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಬಿಜೆಪಿ ಬೆಂಬಲಿತ ಸಂಘಟನೆ ವಿಹೆಚ್‌ಪಿ ಗುರುವಾರ ದೆಹಲಿ ಪೊಲೀಸರಿಗೆ ಪತ್ರ ಬರೆದಿದೆ ಎಂದು ಎಎನ್‌ಐ ವರದಿ ಮಾಡಿದೆ. ಪೊಲೀಸರು ಕಾರ್ಯಕ್ರಮವನ್ನು ರದ್ದುಪಡಿಸಲು ವಿಫಲವಾದರೆ ಬಿಜೆಪಿ ಬೆಂಬಲಿತ ಮತ್ತೊಂದು ಸಂಘಟನೆಯಾದ ಬಜರಂಗದಳದೊಂದಿಗೆ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯು ಎಚ್ಚರಿಕೆ ನೀಡಿದೆ.

ವಿಹೆಚ್‌ಪಿ ದೆಹಲಿ ಅಧ್ಯಕ್ಷ ಸುರೇಂದ್ರ ಕುಮಾರ್ ಗುಪ್ತಾ ಅವರ ಸಹಿ ಇರುವ ಪತ್ರದಲ್ಲಿ “ಈ ವ್ಯಕ್ತಿಯು ತನ್ನ ಪ್ರದರ್ಶನದಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ಅಪಹಾಸ್ಯ ಮಾಡುತ್ತಾನೆ. ಇದರ ಪರಿಣಾಮವಾಗಿ ಹೈದರಾಬಾದ್‌ ಕೋಮು ಉದ್ವಿಗ್ನತೆಗೊಂಡಿತ್ತು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದೀಗ ಅಮಾನತುಗೊಂಡಿರುವ ಬಿಜೆಪಿ ನಾಯಕ ಟಿ.ರಾಜಾ ಸಿಂಗ್ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಪಕ್ಷದ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ನೀಡಿದ್ದ ಅವಹೇಳನಕಾರಿ ಹೇಳಿಕೆಗಳನ್ನೆ ಪುನರಾವರ್ತಿಸಿ ಆ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ನಂತರ ಹೈದರಾಬಾದ್‌ನಲ್ಲಿ ಸೋಮವಾರದಂದು ದೊಡ್ಡ ಪ್ರಮಾಣದ ಪ್ರತಿಭಟನೆಗಳು ಭುಗಿಲೆದ್ದವು.

ಇದನ್ನೂ ಓದಿ: ಹೈದರಾಬಾದ್‌: ಮುನಾವರ್‌ ಫಾರೂಖಿ ಕಾರ್ಯಕ್ರಮ ನಡೆಯದಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಬಿಜೆಪಿ ಕರೆ

ಗುರುವಾರ ಬಂಧನಕ್ಕೊಳಗಾದ ರಾಜಾ ಸಿಂಗ್, ಆಗಸ್ಟ್ 20 ರಂದು ಹೈದರಾಬಾದ್‌ನಲ್ಲಿ ನಡೆದ ಮುನಾವರ್ ಫಾರೂಕಿ ಅವರ ಕಾರ್ಯಕ್ರಮಕ್ಕೆ ಪ್ರತಿಕ್ರಿಯೆಯಾಗಿ ಹಾಸ್ಯ ವೀಡಿಯೊವನ್ನು ಪೋಸ್ಟ್ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಆಗಸ್ಟ್ 19 ರಂದು, ಶ್ರೀ ರಾಮಸೇನೆ ಎಂಬ ಬಲಪಂಥೀಯ ಸಂಘಟನೆಯು ಹಾಸ್ಯನಟ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ದಾಖಲಿಸಿದ ನಂತರ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮುನಾವರ್ ಫಾರೂಕಿ ಅವರ ಪ್ರದರ್ಶನವನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಯಿತು.

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

ಆಯೋಜಕರು ಅನುಮತಿ ಕೇಳದ ಕಾರಣ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

ಗುರುವಾರದಂದು ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಅವರು ದೆಹಲಿಯಲ್ಲಿ ಮುನಾವರ್ ಫಾರೂಕಿ ಅವರ ‘ಹಿಂದೂ ವಿರೋಧಿ’ ಪ್ರದರ್ಶನವು ಕೋಮು ಉದ್ವಿಗ್ನತೆಯನ್ನು ಉಂಟುಮಾಡುತ್ತದೆ ಎಂದು ಆರೋಪಿಸಿದ್ದಾರೆ. “ನಾವು ನಗರದಲ್ಲಿ ಶಾಂತಿಯನ್ನು ಬಯಸುತ್ತೇವೆ. ಅವರು ನಮ್ಮ ಹಿಂದೂ ದೇವತೆಗಳನ್ನು ಅಪಹಾಸ್ಯ ಮಾಡುವುದು ನಮಗೆ ಇಷ್ಟವಿಲ್ಲ” ಎಂದು ತಿಳಿಸಿದ್ದಾರೆ.

ಈ ಮಧ್ಯೆ ಕಾರ್ಯಕ್ರಮದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರದರ್ಶನವನ್ನು ರದ್ದುಪಡಿಸುವ ಬಗ್ಗೆಗಿನ ಯಾವುದೆ ಸೂಚನೆ ನಮಗೆ ತಿಳಿದಿಲ್ಲ ಎಂದು ಮುನಾವರ್ ಫಾರೂಕಿ ಅವರ ತಂಡವು ಹೇಳಿದೆ.

ಕಳೆದ ವರ್ಷದಲ್ಲಿ, ಬೆಂಗಳೂರು, ಗುರುಗ್ರಾಮ್, ರಾಯ್‌ಪುರ, ಸೂರತ್, ಅಹಮದಾಬಾದ್, ವಡೋದರಾ, ಗೋವಾ ಮತ್ತು ಮುಂಬೈನಲ್ಲಿ ಫಾರುಕಿ ಅವರ ಪ್ರದರ್ಶನಗಳನ್ನು ರದ್ದುಗೊಳಿಸಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಕಳೆದ ವರ್ಷ ಜನವರಿಯಲ್ಲಿ, ಬಿಜೆಪಿ ನಾಯಕರೊಬ್ಬರ ಮಗ ಮುನಾವರ್ ಫಾರೂಕಿ ಅವರು ಕಾರ್ಯಕ್ರಮದಲ್ಲಿ ಹಿಂದೂ ದೇವರನ್ನು ಅವಹೇಳನ ‘ಮಾಡಲಿದ್ದಾರೆ’ ಎಂದು ದೂರು ನೀಡಿದ್ದರಿಂದ ಇಂದೋರ್‌ನ‌ಲ್ಲಿ ಅವರನ್ನು ಬಂಧಿಸಲಾಗಿತ್ತು. ದೂರಿನಲ್ಲಿ, ಮುನಾವರ್ ಫಾರೂಕಿ ತನ್ನ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ‘ನೀಡಲಿದ್ದಾರೆ’ ಎಂದು ಆರೋಪಿಸಿದ್ದರು. ಅವರ ಬಂಧನವಾಗಿ 37 ದಿನಗಳ ನಂತರ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...