Homeಕರ್ನಾಟಕನಗ್ನ ಮಹಿಳೆ ವಿಡಿಯೋ ಕಾಲ್ ಮಾಡಿದ್ದಾರೆಂದು ದೂರು ದಾಖಲಿಸಿದ ಚಿತ್ರದುರ್ಗದ ಬಿಜೆಪಿ ಶಾಸಕ

ನಗ್ನ ಮಹಿಳೆ ವಿಡಿಯೋ ಕಾಲ್ ಮಾಡಿದ್ದಾರೆಂದು ದೂರು ದಾಖಲಿಸಿದ ಚಿತ್ರದುರ್ಗದ ಬಿಜೆಪಿ ಶಾಸಕ

- Advertisement -
- Advertisement -

ನಗ್ನ ಮಹಿಳೆಯೊಬ್ಬರು ತನಗೆ ವಾಟ್ಸಾಪ್‌ನಲ್ಲಿ ವಿಡಿಯೋ ಕರೆ ಮಾಡಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗ ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಅಕ್ಟೋಬರ್ 31 ರಂದು ತನಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು ಎಂದು ಶಾಸಕರು ದೂರಿದ್ದಾರೆ.

“ಮೊದಲಿಗೆ ಸಾಮಾನ್ಯ ಕರೆಯ ಮೂಲಕ ಕರೆ ಪ್ರಾರಂಭವಾಯಿತು. ನಂತರ ಮಹಿಳೆಯು ವಾಟ್ಸಾಪ್‌ನಲ್ಲಿ ವೀಡಿಯೊ ಕರೆ ಮಾಡಲು ಶುರುಮಾಡಿದ್ದಾರೆ. ವಿಡಿಯೊದಲ್ಲಿ ಮಹಿಳೆ ತನ್ನ ಖಾಸಗಿ ಅಂಗಗಳನ್ನು ತೋರಿಸಲು ಪ್ರಾರಂಭಿಸಿದ್ದು, ಇದರ ನಂತರ ಶಾಸಕರು ತಕ್ಷಣವೇ ಕರೆಯನ್ನು ಕೊನೆಗೊಳಿಸಿದ್ದಾರೆ” ಎಂದು ದೂರಿನಲ್ಲಿ ಹೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದರ ನಂತರ ಅದೇ ನಂಬರ್‌ನಿಂದ ಹಲವು ಪೋರ್ನ್ ವಿಡಿಯೋಗಳು ಶಾಸಕರಿಗೆ ಬಂದಿವೆ ಎಂದು ಚಿತ್ರದುರ್ಗ ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ. ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಪೇದೆ ಅರೆಸ್ಟ್‌

‘ಸೆಕ್ಸ್‌ಟಾರ್ಶನ್‌‌’

ಇಂತಹ ಅಪರಾಧಗಳನ್ನು ‘ಸೆಕ್ಸ್‌ಟಾರ್ಶನ್‌‌’ ಎಂದು ಕರೆಯಲಾಗುತ್ತದೆ. ಸೆಕ್ಸ್‌ಟಾರ್ಶನ್‌‌ ಅಪರಾಧದಲ್ಲಿ ಬಲಿಪಶುವನ್ನು ಖಾಸಗಿ ಮತ್ತು ಎಡಿಟ್‌ ಮಾಡಲಾಗಿರುವ ಫಿಲ್ಮ್‌ಗಳು ಅಥವಾ ಚಿತ್ರಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತದೆ.

ಅಪರಿಚಿತರು ಅಥವಾ ಹೊಸದಾಗಿ ಪರಿಚಯವಾದವರು ಬಲಿಪಶುವಿಗೆ ವೀಡಿಯೊ ಕರೆ ಮಾಡುತ್ತಾರೆ. ಕರೆ ಸ್ವೀಕರಿಸುತ್ತಿದ್ದಂತೆ ತಕ್ಷಣ ತಮ್ಮ ಉಡುಪುಗಳನ್ನು ತೆಗೆದುಹಾಕುತ್ತಾರೆ. ನಂತರ ಈ ಕರೆಯ ಸ್ಕ್ರೀನ್ ರೆಕಾರ್ಡ್‌ ಅನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತದೆ. ಇದೇ ರೀತಿಯ ‘ಸೆಕ್ಸ್‌ಟಾರ್ಶನ್‌‌’ನ ಸಾಮಾನ್ಯ ವಿಧಾನಗಳನ್ನು ಅನೇಕ ರಾಜ್ಯಗಳ ಪೊಲೀಸರು ಗಮನಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಶಿವಮೂರ್ತಿ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯದ ದೂರು | ಕ್ರಮ ಕೈಗೊಳ್ಳದ ಜಿಲ್ಲಾಡಳಿತ

ಇಂತಹ ಪ್ರಕರಣದಲ್ಲಿ ಬಹುತೇಕ ಸಂತ್ರಸ್ತರು ಭಯ, ಮುಜುಗರ ಹಾಗೂ ಸ್ನೇಹಿತರು ಅಥವಾ ಕುಟುಂಬದವರಿಂದ ಅವಮಾನವಾಗುತ್ತದೆ ಎಂಬ ಭಾವನೆಯಿಂದ ದೂರು ದಾಖಲಿಸುವುದಿಲ್ಲ ಎಂದು ಪೊಲೀಸರು ಹೇಳಿದ್ದಾಗಿ ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...