Homeಮುಖಪುಟಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

ಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

- Advertisement -
- Advertisement -

ಬಿಜೆಪಿ ಸಂಸದ ಜನಾರ್ದನ್‌ ಮಿಶ್ರಾ ಅವರು ಮಧ್ಯಪ್ರದೇಶದ ಖಟ್ಖಾರಿಯ ಬಾಲಕಿಯರ ಶಾಲೆಯ ಶೌಚಾಲಯವನ್ನು ತಮ್ಮ ಬರಿ ಕೈಗಳಿಂದ ಸ್ವಚ್ಛಗೊಳಿಸಿದ್ದಾರೆ. ರೇವಾ ಕ್ಷೇತ್ರದ ಸಂಸದರಾಗಿರುವ ಅವರು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಮಿಶ್ರಾ ಅವರು ಯಾವುದೇ ಇತರ ಉಪಕರಣಗಳು ಅಥವಾ ನೈರ್ಮಲ್ಯ ಉತ್ಪನ್ನಗಳನ್ನು ಬಳಸದೆ ತನ್ನ ಬರಿ ಕೈಗಳಿಂದ ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು. ಇಷ್ಟೆ ಅಲ್ಲದೆ ಈ ವಿಡಿಯೊವನ್ನು ತಮ್ಮ ಟ್ವಿಟರ್‌ ಹ್ಯಾಂಡಲ್‌ನಲ್ಲೂ ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಕ್ಷದಿಂದ ನಡೆಸುತ್ತಿರುವ ಸೇವಾ ಪಖ್ವಾಡದ ಅಡಿಯಲ್ಲಿ, ಯುವ ಮೋರ್ಚಾ ಖಟ್ಖಾರಿಯ ಬಾಲಕಿಯರ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮದ ನಂತರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದು ಕೊಂಡಿದ್ದಾರೆ. ಈ ಟ್ವೀಟನ್ನು ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇತರರಿಗೂ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK

ಪಕ್ಷದ ವತಿಯಿಂದ ನಡೆಯುತ್ತಿರುವ ಸೇವಾ ಪಖವಾಡದ ಅಡಿಯಲ್ಲಿ ಯುವ ಮೋರ್ಚಾ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಿಶ್ರಾ ಬಾಲಕಿಯರ ಶಾಲೆಗೆ ತೆರಳಿದ್ದರು. ಅಲ್ಲಿ ಗಿಡ ನೆಟ್ಟ ನಂತರ ಶಾಲೆಯಲ್ಲಿ ಶೌಚಾಲಯ ತುಂಬಾ ಕೊಳಕಾಗಿದ್ದು, ಅದನ್ನು ಬಳಸಲು ತುಂಬಾ ಕಷ್ಟವಾಗಿದೆ ಎಂದು ತಿಳಿದ ಅವರು ಬಕೆಟ್‌ನಲ್ಲಿದ್ದ ನೀರನ್ನು ತೆಗೆದು ಕೈಯಿಂದ ಉಜ್ಜಿ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿಯವರ ‘ಸ್ವಚ್ಛ ಭಾರತ್ ಅಭಿಯಾನ’ದ ಕಟ್ಟಾ ಬೆಂಬಲಿಗರಾದ ಅವರು ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದು ಇದೇ ಮೊದಲ ಬಾರಿಯಲ್ಲ. ಫೆಬ್ರವರಿ 2018 ರಲ್ಲಿ, ಅವರು ತಮ್ಮ ಕ್ಷೇತ್ರದ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಅಲ್ಲದೆ 2021 ರಲ್ಲೂ ಅವರು ಕೊರೊನಾ ಸೆಂಟರ್‌‌ನ ಶೌಚಾಲಯವನ್ನು ಕೈಯಿಗಳಿಂದ ಸ್ವಚ್ಛಗೊಳಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ – ಪೊಲೀಸ್ ವಾಹನಕ್ಕೆ ಬೆಂಕಿ

ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ಸಾಮಾಜಿಕ ಕಾರ್ಯಕರ್ತರೊಬ್ಬರು ಇದನ್ನು ‘ನಾಟಕ’ ಎಂದು ಕರೆದಿದ್ದಾರೆ. “ಇದು ತುಂಬಾ ಕೊಳಕು ನಡೆಯಾಗಿದೆ. ತಮ್ಮ ನಾಯಕರನ್ನು ಸೆಳೆಯಲು ಬೇಕಾಗಿ ಹೀಗೆ ಮಾಡುತ್ತಿದ್ದಾರೆ. ಶೌಚಾಲಯ ತೊಳೆಯಲು ಕನಿಷ್ಠ ಪಕ್ಷ ಸ್ವಚ್ಛತಾ ಉಪಕರಣಗಳನ್ನು ಬಳಸಿಕೊಳ್ಳಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ಸಂಸದರ ಕೆಲಸವೇನು? ಶೌಚಾಲಯ ಸ್ವಚ್ಛ ಮಾಡುವುದೆ? ಅವರು ತಮ್ಮ ಕ್ಷೇತ್ರದಲ್ಲಿ ಇರುವ ಎಲ್ಲಾ ಶಾಲೆಗಳ ಶೌಚಾಲಯವನ್ನೂ ಹೀಗೆ ಸ್ವಚ್ಛ ಮಾಡುತ್ತಾರೆಯೆ? ಶಾಲೆಗಳಿಗೆ ಬೇಕಾದ ಮೂಲಭೂತ ಸೌಲಭ್ಯ ಕೊಟ್ಟು ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಿದರೆ ಸಾಕಿತ್ತು. ಇಷ್ಟು ನಾಟಕ ಮಾಡುವ ಸಂದಂರ್ಭ ಇರುತ್ತಿರಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...