ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ಮಧ್ಯಪ್ರದೇಶದ ಖಟ್ಖಾರಿಯ ಬಾಲಕಿಯರ ಶಾಲೆಯ ಶೌಚಾಲಯವನ್ನು ತಮ್ಮ ಬರಿ ಕೈಗಳಿಂದ ಸ್ವಚ್ಛಗೊಳಿಸಿದ್ದಾರೆ. ರೇವಾ ಕ್ಷೇತ್ರದ ಸಂಸದರಾಗಿರುವ ಅವರು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೀಡಿಯೋದಲ್ಲಿ ಮಿಶ್ರಾ ಅವರು ಯಾವುದೇ ಇತರ ಉಪಕರಣಗಳು ಅಥವಾ ನೈರ್ಮಲ್ಯ ಉತ್ಪನ್ನಗಳನ್ನು ಬಳಸದೆ ತನ್ನ ಬರಿ ಕೈಗಳಿಂದ ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು. ಇಷ್ಟೆ ಅಲ್ಲದೆ ಈ ವಿಡಿಯೊವನ್ನು ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲೂ ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಪಕ್ಷದಿಂದ ನಡೆಸುತ್ತಿರುವ ಸೇವಾ ಪಖ್ವಾಡದ ಅಡಿಯಲ್ಲಿ, ಯುವ ಮೋರ್ಚಾ ಖಟ್ಖಾರಿಯ ಬಾಲಕಿಯರ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮದ ನಂತರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದೆ” ಎಂದು ಅವರು ಟ್ವಿಟರ್ನಲ್ಲಿ ಬರೆದು ಕೊಂಡಿದ್ದಾರೆ. ಈ ಟ್ವೀಟನ್ನು ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇತರರಿಗೂ ಟ್ಯಾಗ್ ಮಾಡಿದ್ದಾರೆ.
ಇದನ್ನೂ ಓದಿ: ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK
ಪಕ್ಷದ ವತಿಯಿಂದ ನಡೆಯುತ್ತಿರುವ ಸೇವಾ ಪಖವಾಡದ ಅಡಿಯಲ್ಲಿ ಯುವ ಮೋರ್ಚಾ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಿಶ್ರಾ ಬಾಲಕಿಯರ ಶಾಲೆಗೆ ತೆರಳಿದ್ದರು. ಅಲ್ಲಿ ಗಿಡ ನೆಟ್ಟ ನಂತರ ಶಾಲೆಯಲ್ಲಿ ಶೌಚಾಲಯ ತುಂಬಾ ಕೊಳಕಾಗಿದ್ದು, ಅದನ್ನು ಬಳಸಲು ತುಂಬಾ ಕಷ್ಟವಾಗಿದೆ ಎಂದು ತಿಳಿದ ಅವರು ಬಕೆಟ್ನಲ್ಲಿದ್ದ ನೀರನ್ನು ತೆಗೆದು ಕೈಯಿಂದ ಉಜ್ಜಿ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ವರದಿಯಾಗಿದೆ.
पार्टी द्वारा चलाये जा रहे सेवा पखवाड़ा के तहत युवा मोर्चा के द्वारा बालिका विद्यालय खटखरी में वृक्षारोपण कार्यक्रम के उपरांत विद्यालय के शौचालय की सफाई की।@narendramodi @JPNadda @blsanthosh @ChouhanShivraj @vdsharmabjp @HitanandSharma pic.twitter.com/138VDOT0n0
— Janardan Mishra (@Janardan_BJP) September 22, 2022
ಪ್ರಧಾನಿ ಮೋದಿಯವರ ‘ಸ್ವಚ್ಛ ಭಾರತ್ ಅಭಿಯಾನ’ದ ಕಟ್ಟಾ ಬೆಂಬಲಿಗರಾದ ಅವರು ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದು ಇದೇ ಮೊದಲ ಬಾರಿಯಲ್ಲ. ಫೆಬ್ರವರಿ 2018 ರಲ್ಲಿ, ಅವರು ತಮ್ಮ ಕ್ಷೇತ್ರದ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಅಲ್ಲದೆ 2021 ರಲ್ಲೂ ಅವರು ಕೊರೊನಾ ಸೆಂಟರ್ನ ಶೌಚಾಲಯವನ್ನು ಕೈಯಿಗಳಿಂದ ಸ್ವಚ್ಛಗೊಳಿಸಿದ್ದರು.
ಇದನ್ನೂ ಓದಿ: ಪಶ್ಚಿಮ ಬಂಗಾಳ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ – ಪೊಲೀಸ್ ವಾಹನಕ್ಕೆ ಬೆಂಕಿ
ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ಸಾಮಾಜಿಕ ಕಾರ್ಯಕರ್ತರೊಬ್ಬರು ಇದನ್ನು ‘ನಾಟಕ’ ಎಂದು ಕರೆದಿದ್ದಾರೆ. “ಇದು ತುಂಬಾ ಕೊಳಕು ನಡೆಯಾಗಿದೆ. ತಮ್ಮ ನಾಯಕರನ್ನು ಸೆಳೆಯಲು ಬೇಕಾಗಿ ಹೀಗೆ ಮಾಡುತ್ತಿದ್ದಾರೆ. ಶೌಚಾಲಯ ತೊಳೆಯಲು ಕನಿಷ್ಠ ಪಕ್ಷ ಸ್ವಚ್ಛತಾ ಉಪಕರಣಗಳನ್ನು ಬಳಸಿಕೊಳ್ಳಬಹುದಿತ್ತು” ಎಂದು ಅವರು ಹೇಳಿದ್ದಾರೆ.
“ಸಂಸದರ ಕೆಲಸವೇನು? ಶೌಚಾಲಯ ಸ್ವಚ್ಛ ಮಾಡುವುದೆ? ಅವರು ತಮ್ಮ ಕ್ಷೇತ್ರದಲ್ಲಿ ಇರುವ ಎಲ್ಲಾ ಶಾಲೆಗಳ ಶೌಚಾಲಯವನ್ನೂ ಹೀಗೆ ಸ್ವಚ್ಛ ಮಾಡುತ್ತಾರೆಯೆ? ಶಾಲೆಗಳಿಗೆ ಬೇಕಾದ ಮೂಲಭೂತ ಸೌಲಭ್ಯ ಕೊಟ್ಟು ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಿದರೆ ಸಾಕಿತ್ತು. ಇಷ್ಟು ನಾಟಕ ಮಾಡುವ ಸಂದಂರ್ಭ ಇರುತ್ತಿರಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.