Homeಮುಖಪುಟಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

ಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

- Advertisement -
- Advertisement -

ಬಿಜೆಪಿ ಸಂಸದ ಜನಾರ್ದನ್‌ ಮಿಶ್ರಾ ಅವರು ಮಧ್ಯಪ್ರದೇಶದ ಖಟ್ಖಾರಿಯ ಬಾಲಕಿಯರ ಶಾಲೆಯ ಶೌಚಾಲಯವನ್ನು ತಮ್ಮ ಬರಿ ಕೈಗಳಿಂದ ಸ್ವಚ್ಛಗೊಳಿಸಿದ್ದಾರೆ. ರೇವಾ ಕ್ಷೇತ್ರದ ಸಂಸದರಾಗಿರುವ ಅವರು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಮಿಶ್ರಾ ಅವರು ಯಾವುದೇ ಇತರ ಉಪಕರಣಗಳು ಅಥವಾ ನೈರ್ಮಲ್ಯ ಉತ್ಪನ್ನಗಳನ್ನು ಬಳಸದೆ ತನ್ನ ಬರಿ ಕೈಗಳಿಂದ ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು. ಇಷ್ಟೆ ಅಲ್ಲದೆ ಈ ವಿಡಿಯೊವನ್ನು ತಮ್ಮ ಟ್ವಿಟರ್‌ ಹ್ಯಾಂಡಲ್‌ನಲ್ಲೂ ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಕ್ಷದಿಂದ ನಡೆಸುತ್ತಿರುವ ಸೇವಾ ಪಖ್ವಾಡದ ಅಡಿಯಲ್ಲಿ, ಯುವ ಮೋರ್ಚಾ ಖಟ್ಖಾರಿಯ ಬಾಲಕಿಯರ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮದ ನಂತರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದು ಕೊಂಡಿದ್ದಾರೆ. ಈ ಟ್ವೀಟನ್ನು ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇತರರಿಗೂ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK

ಪಕ್ಷದ ವತಿಯಿಂದ ನಡೆಯುತ್ತಿರುವ ಸೇವಾ ಪಖವಾಡದ ಅಡಿಯಲ್ಲಿ ಯುವ ಮೋರ್ಚಾ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಿಶ್ರಾ ಬಾಲಕಿಯರ ಶಾಲೆಗೆ ತೆರಳಿದ್ದರು. ಅಲ್ಲಿ ಗಿಡ ನೆಟ್ಟ ನಂತರ ಶಾಲೆಯಲ್ಲಿ ಶೌಚಾಲಯ ತುಂಬಾ ಕೊಳಕಾಗಿದ್ದು, ಅದನ್ನು ಬಳಸಲು ತುಂಬಾ ಕಷ್ಟವಾಗಿದೆ ಎಂದು ತಿಳಿದ ಅವರು ಬಕೆಟ್‌ನಲ್ಲಿದ್ದ ನೀರನ್ನು ತೆಗೆದು ಕೈಯಿಂದ ಉಜ್ಜಿ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿಯವರ ‘ಸ್ವಚ್ಛ ಭಾರತ್ ಅಭಿಯಾನ’ದ ಕಟ್ಟಾ ಬೆಂಬಲಿಗರಾದ ಅವರು ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದು ಇದೇ ಮೊದಲ ಬಾರಿಯಲ್ಲ. ಫೆಬ್ರವರಿ 2018 ರಲ್ಲಿ, ಅವರು ತಮ್ಮ ಕ್ಷೇತ್ರದ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಅಲ್ಲದೆ 2021 ರಲ್ಲೂ ಅವರು ಕೊರೊನಾ ಸೆಂಟರ್‌‌ನ ಶೌಚಾಲಯವನ್ನು ಕೈಯಿಗಳಿಂದ ಸ್ವಚ್ಛಗೊಳಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ – ಪೊಲೀಸ್ ವಾಹನಕ್ಕೆ ಬೆಂಕಿ

ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ಸಾಮಾಜಿಕ ಕಾರ್ಯಕರ್ತರೊಬ್ಬರು ಇದನ್ನು ‘ನಾಟಕ’ ಎಂದು ಕರೆದಿದ್ದಾರೆ. “ಇದು ತುಂಬಾ ಕೊಳಕು ನಡೆಯಾಗಿದೆ. ತಮ್ಮ ನಾಯಕರನ್ನು ಸೆಳೆಯಲು ಬೇಕಾಗಿ ಹೀಗೆ ಮಾಡುತ್ತಿದ್ದಾರೆ. ಶೌಚಾಲಯ ತೊಳೆಯಲು ಕನಿಷ್ಠ ಪಕ್ಷ ಸ್ವಚ್ಛತಾ ಉಪಕರಣಗಳನ್ನು ಬಳಸಿಕೊಳ್ಳಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ಸಂಸದರ ಕೆಲಸವೇನು? ಶೌಚಾಲಯ ಸ್ವಚ್ಛ ಮಾಡುವುದೆ? ಅವರು ತಮ್ಮ ಕ್ಷೇತ್ರದಲ್ಲಿ ಇರುವ ಎಲ್ಲಾ ಶಾಲೆಗಳ ಶೌಚಾಲಯವನ್ನೂ ಹೀಗೆ ಸ್ವಚ್ಛ ಮಾಡುತ್ತಾರೆಯೆ? ಶಾಲೆಗಳಿಗೆ ಬೇಕಾದ ಮೂಲಭೂತ ಸೌಲಭ್ಯ ಕೊಟ್ಟು ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಿದರೆ ಸಾಕಿತ್ತು. ಇಷ್ಟು ನಾಟಕ ಮಾಡುವ ಸಂದಂರ್ಭ ಇರುತ್ತಿರಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...