Homeಮುಖಪುಟಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

ಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

- Advertisement -
- Advertisement -

ಬಿಜೆಪಿ ಸಂಸದ ಜನಾರ್ದನ್‌ ಮಿಶ್ರಾ ಅವರು ಮಧ್ಯಪ್ರದೇಶದ ಖಟ್ಖಾರಿಯ ಬಾಲಕಿಯರ ಶಾಲೆಯ ಶೌಚಾಲಯವನ್ನು ತಮ್ಮ ಬರಿ ಕೈಗಳಿಂದ ಸ್ವಚ್ಛಗೊಳಿಸಿದ್ದಾರೆ. ರೇವಾ ಕ್ಷೇತ್ರದ ಸಂಸದರಾಗಿರುವ ಅವರು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಮಿಶ್ರಾ ಅವರು ಯಾವುದೇ ಇತರ ಉಪಕರಣಗಳು ಅಥವಾ ನೈರ್ಮಲ್ಯ ಉತ್ಪನ್ನಗಳನ್ನು ಬಳಸದೆ ತನ್ನ ಬರಿ ಕೈಗಳಿಂದ ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು. ಇಷ್ಟೆ ಅಲ್ಲದೆ ಈ ವಿಡಿಯೊವನ್ನು ತಮ್ಮ ಟ್ವಿಟರ್‌ ಹ್ಯಾಂಡಲ್‌ನಲ್ಲೂ ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಕ್ಷದಿಂದ ನಡೆಸುತ್ತಿರುವ ಸೇವಾ ಪಖ್ವಾಡದ ಅಡಿಯಲ್ಲಿ, ಯುವ ಮೋರ್ಚಾ ಖಟ್ಖಾರಿಯ ಬಾಲಕಿಯರ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮದ ನಂತರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದು ಕೊಂಡಿದ್ದಾರೆ. ಈ ಟ್ವೀಟನ್ನು ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇತರರಿಗೂ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK

ಪಕ್ಷದ ವತಿಯಿಂದ ನಡೆಯುತ್ತಿರುವ ಸೇವಾ ಪಖವಾಡದ ಅಡಿಯಲ್ಲಿ ಯುವ ಮೋರ್ಚಾ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಿಶ್ರಾ ಬಾಲಕಿಯರ ಶಾಲೆಗೆ ತೆರಳಿದ್ದರು. ಅಲ್ಲಿ ಗಿಡ ನೆಟ್ಟ ನಂತರ ಶಾಲೆಯಲ್ಲಿ ಶೌಚಾಲಯ ತುಂಬಾ ಕೊಳಕಾಗಿದ್ದು, ಅದನ್ನು ಬಳಸಲು ತುಂಬಾ ಕಷ್ಟವಾಗಿದೆ ಎಂದು ತಿಳಿದ ಅವರು ಬಕೆಟ್‌ನಲ್ಲಿದ್ದ ನೀರನ್ನು ತೆಗೆದು ಕೈಯಿಂದ ಉಜ್ಜಿ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿಯವರ ‘ಸ್ವಚ್ಛ ಭಾರತ್ ಅಭಿಯಾನ’ದ ಕಟ್ಟಾ ಬೆಂಬಲಿಗರಾದ ಅವರು ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದು ಇದೇ ಮೊದಲ ಬಾರಿಯಲ್ಲ. ಫೆಬ್ರವರಿ 2018 ರಲ್ಲಿ, ಅವರು ತಮ್ಮ ಕ್ಷೇತ್ರದ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಅಲ್ಲದೆ 2021 ರಲ್ಲೂ ಅವರು ಕೊರೊನಾ ಸೆಂಟರ್‌‌ನ ಶೌಚಾಲಯವನ್ನು ಕೈಯಿಗಳಿಂದ ಸ್ವಚ್ಛಗೊಳಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ – ಪೊಲೀಸ್ ವಾಹನಕ್ಕೆ ಬೆಂಕಿ

ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ಸಾಮಾಜಿಕ ಕಾರ್ಯಕರ್ತರೊಬ್ಬರು ಇದನ್ನು ‘ನಾಟಕ’ ಎಂದು ಕರೆದಿದ್ದಾರೆ. “ಇದು ತುಂಬಾ ಕೊಳಕು ನಡೆಯಾಗಿದೆ. ತಮ್ಮ ನಾಯಕರನ್ನು ಸೆಳೆಯಲು ಬೇಕಾಗಿ ಹೀಗೆ ಮಾಡುತ್ತಿದ್ದಾರೆ. ಶೌಚಾಲಯ ತೊಳೆಯಲು ಕನಿಷ್ಠ ಪಕ್ಷ ಸ್ವಚ್ಛತಾ ಉಪಕರಣಗಳನ್ನು ಬಳಸಿಕೊಳ್ಳಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ಸಂಸದರ ಕೆಲಸವೇನು? ಶೌಚಾಲಯ ಸ್ವಚ್ಛ ಮಾಡುವುದೆ? ಅವರು ತಮ್ಮ ಕ್ಷೇತ್ರದಲ್ಲಿ ಇರುವ ಎಲ್ಲಾ ಶಾಲೆಗಳ ಶೌಚಾಲಯವನ್ನೂ ಹೀಗೆ ಸ್ವಚ್ಛ ಮಾಡುತ್ತಾರೆಯೆ? ಶಾಲೆಗಳಿಗೆ ಬೇಕಾದ ಮೂಲಭೂತ ಸೌಲಭ್ಯ ಕೊಟ್ಟು ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಿದರೆ ಸಾಕಿತ್ತು. ಇಷ್ಟು ನಾಟಕ ಮಾಡುವ ಸಂದಂರ್ಭ ಇರುತ್ತಿರಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...