Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

ಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

- Advertisement -
- Advertisement -

ಷಿಕಾರಿಪುರದಲ್ಲಿದ್ದಿರಬಹುದಾದ ಚಾವುಂಡರಾಯನ ಕಾಲ ಪ್ರಾಯಶಃ ಶಕ 969 ಕ್ರಿ. ಶ. 1042. ಈತ ರಚಿಸಿರುವ ಗ್ರಂಥದ ಹೆಸರೇ ಲೋಕೋಪಕಾರಂ. ಶ್ರವಣ ಬೆಳಗೊಳದ ಗೊಮ್ಮಟೇಶ್ವರನ ಕೆತ್ತಿಸಿದ ಚಾವುಂಡರಾಯನಿಗೂ ಮತ್ತು ಲೋಕೋಪಕಾರಂ ಗ್ರಂಥದ ಕರ್ತೃವಿಗೂ ಏನೂ ಸಂಬಂಧವಿಲ್ಲ. ಈತನ ಹೆಸರನ್ನು ಕೇಳಿ ಬಹುಶಃ ಜೈನ ಮತಸ್ಥನಿರಬೇಕೆಂದುಕೊಂಡರೆ ಅದೂ ಅಲ್ಲ. ಈತ ಸಕಲ ವಿದ್ಯಾ ಸಂಪನ್ನ ಬ್ರಾಹ್ಮಣ.

ಇನ್ನು ಈ ಶೀರ್ಷಿಕೆಯ ಪ್ರಕಾರ ಲೋಕ ಎಂದರೆ ಭೌತಿಕವಾದ ಜಗತ್ತಲ್ಲ. ಜನರೆಂದು ಅರ್ಥ. ಜನೋಪಕಾರ ಎನ್ನುವುದನ್ನೇ ಲೋಕೋಪಕಾರ ಎನ್ನುತ್ತಿದ್ದಾರೆ ಈ ಕರ್ತೃ.

ಈ ಭೂಮಂಡಲದಲ್ಲಿ ಜನ್ಮಿಸಿದ ಸಮಸ್ತ ಪ್ರಾಣಿಗಳಿಗೂ ಸುಖವು ಬೇಕು. ಹಾಗಾಗಿ ಜನರಿಗೆ ಸುಖವನ್ನು ಉಂಟುಮಾಡುವ ಸಮಸ್ತ ವಿಷಯಗಳನ್ನು ಈ ಪುಸ್ತಕವು ಒಳಗೊಂಡಿದೆ.

ಯಾವುದಪ್ಪಾ ಆ ವಿಷಯಗಳೆಂದರೆ, ವೃಕ್ಷಾರ್ಯುವೇದ, ಸೂಪಶಾಸ್ತ್ರ, ಪಶುಗಳಿಗೆ ವೈದ್ಯ, ಬಾಲ ವೈದ್ಯ, ಅಶ್ವ ವೈದ್ಯ, ಗಜವೈದ್ಯ, ನರಾದಿವೈದ್ಯ, ವಿಷವೈದ್ಯ, ಲೈಂಗಿಕ ಸಮಸ್ಯೆ, ಕೃಷಿ, ಪಶು ಸಾಕಣೆ, ಮನೆ ಮದ್ದು, ಜ್ಯೋತಿಷ್ಯ, ಶಕುನಗಳು; ಹೀಗೆ ಆ ಕಾಲಘಟ್ಟದಲ್ಲಿ ಜನರು ತಮ್ಮ ಸುಖಾನ್ವೇಷಣೆಯಲ್ಲಿ ಏನೇನಲ್ಲಾ ಅನುಸರಿಸುತ್ತಿದ್ದರೋ ಅಥವಾ ಅವಲಂಬಿಸುತ್ತಿದ್ದರೋ ಆ ವಿಷಯಗಳನ್ನೆಲ್ಲಾ ಈ ಪುಸ್ತಕವು ಒಳಗೊಂಡಿದೆ.

ಪುಸ್ತಕವು ಆಸಕ್ತಿಯಿಂದ ಕೂಡಿರುವುದೇಕೆಂದರೆ, ಆ ಕಾಲಘಟ್ಟದಲ್ಲಿ ಜನರು ಸಾಮಾನ್ಯವಾಗಿ ಪರಿಗಣಿಸುತ್ತಿದ್ದ ಮತ್ತು ಶ್ರದ್ಧೆಯನ್ನು ತೋರುತ್ತಿದ್ದ ವಿಷಯಗಳನ್ನೆಲ್ಲಾ ಬರಹಗಾರ ದಾಖಲು ಮಾಡಿದ್ದಾರೆ. ಆ ಜನರ ನಂಬಿಕೆಗಳು, ಆಸಕ್ತಿಗಳು, ಅಗತ್ಯಗಳು, ಅಭಿರುಚಿಗಳೆಲ್ಲಾ ಅನಾವರಣಗೊಳ್ಳುತ್ತಾ ಹೋಗುತ್ತವೆ.

ಉದಾಹರಣೆಗೊಂದು ನೋಡಿ, “ಒಂದೆಲದ, ಹೊನಗನ್ನೆ, ಅಮರ್ದುವಳ್ಳಿ, ಕೊಳುಗುಳಿಕೆ ಈ ಔಷಧಿಗಳಲ್ಲಿ ದೊರಕಿದ ಒಂದೊಂದರ ರಸಮಂ ಕೊಂಡು ಸಕ್ಕರೆಯಂ ಬೆರಸಿ ಕುಡಿಸಿದಡೆ ಪಿತ್ತಂ ಕಿಡುವುದು.”

ಪಿತ್ತ ಕಳಕೊಂಡರಾ, ಇನ್ನು ನಿಮ್ಮ ಮುಖವು ಚಂದ್ರನ ಕಾಂತಿಯಲ್ಲಿ ಹೊಳೆಯಬೇಕಾದರೆ, “ಜವೆ, ಕೋಷ್ಠಂ, ಲೋಧ್ರಂ ಇವುರೊಳಗೆ ಆವುದೊಂದು ದ್ಕೊರಕಿದುದಂ ಕೊಂಡು ಉದಕದಲ್ಲರೆದು ಮುಸುಡಂ ಪೂಸಲ್ ಮುಸುಡು ಚಂದ್ರನ ಮರ್ಯಾದೆಯಲ್ಲಿ ಕಾಂತಿಯಪ್ಪುದು – ಬೇಗಮಪ್ಪುದು.”

ಫೇರ್ ಅಂಡ್ ಲೌವ್ಲೀ ಜಾಹಿರಾತಿನಂತೆ ಇಲ್ಲಿ ಚಾವುಂಡರಾಯರೂ ಆಶ್ವಾಸನೆ ಕೊಡುತ್ತಾರೆ “ಬೇಗಮಪ್ಪುದು” ಎಂದು.

ಅತ್ಯಂತ ಕುತೂಹಲಕರವಾದ ವಿಷಯಗಳೆಂದರೆ ಭೂಮಿಯ ಮೇಲ್ಭಾಗವನ್ನು ನೋಡಿ, ಅಲ್ಲಿರುವ ಗಿಡಗಳು, ಮರಗಳು ಯಾವುವು, ಹೇಗೆ ಬೆಳೆದಿವೆ ಎಂಬುದನ್ನೆಲ್ಲಾ ನೋಡಿ, ಬಾವಿ ತೋಡಲು ನೀರಿನ ನೆಲೆಯನ್ನು ಪತ್ತೆ ಹಚ್ಚುವುದು.

ತರಾವರಿ ಸುಗಂಧಗಳ ಗಟ್ಟಿಯಾದ ಮೊಸರು ಮಾಡುವುದು, ಕಡಿಮೆ ವಸ್ತುಗಳನ್ನು ಬಳಸಿ ಅಡಿಗೆಯನ್ನು ರುಚಿಕರವಾಗಿ ಮಾಡುವುದು, ತರಕಾರಿಗಳನ್ನು, ಹಣ್ಣುಗಳನು ಗುರುತಿಸುವ ಬಗೆ ಇತ್ಯಾದಿಗಳನ್ನೆಲ್ಲಾ ವಿವರಿಸಿದ್ದಾರೆ.

ಪ್ರಾಣಿಗಳ ಮೇಲಿನ ದಯೆ, ಗಿಡಗಳನ್ನು ಗುರುತಿಸುವುದು, ಕೃಷಿಗೆ ಅಗತ್ಯ ಸಲಹೆ; ಹೀಗೆ ಎಲ್ಲಾ ವಿಷಯಗಳಲ್ಲೂ ಪಾರಂಗತರಾಗದಿದ್ದರೂ ತಕ್ಷಣಕ್ಕೆ ಒಂದಿಷ್ಟುಮಾಹಿತಿಯನ್ನು ಪಡೆದುಕೊಂಡು ಕೆಲಸಕ್ಕೆ ತೊಡಗಲು ಸಾಧ್ಯವಾಗುವ ಹಾಗೆ ವಿಷಯಗಳು ಹೆಣೆಯಲ್ಪಟ್ಟಿವೆ. ಒಂದು ಮನೆ ಎಂದರೆ ತಕ್ಷಣಕ್ಕೆ ಏನಾದರೂ ಜ್ವರ, ಗಾಯ, ಅಥವಾ ವಿಷ ಸೇವನೆ ಎಂತಾದರೂ ಆಗಿಬಿಡಬಹುದು. ಅದಕ್ಕೆ ಈ ಪುಸ್ತಕ ಮನೆಗಳಲ್ಲಿರಬೇಕು ಎಂಬುದು ಗ್ರಂಥಕರ್ತನ ಆಶಯ.

ಗೃಹಸಂಗಾತಿ ಎಂಬ ಪುಸ್ತಕವೊಂದು ಆಧುನಿಕ, ಸರಳ ಕನ್ನಡದಲ್ಲಿದೆ. ಅದೂ ಕೂಡಾ ಹೀಗೆಯೇ. ಸಾವಿರ ವರ್ಷಗಳ ಹಿಂದೆ ಕನ್ನಡದಲ್ಲೊಬ್ಬರು ಈ ಆಲೋಚನೆ, ಆಶಯದಲ್ಲಿ ಒಂದು ಗ್ರಂಥ ರಚನೆ ಮಾಡಿರುವುದು ನಿಜಕ್ಕೂ ವಿಶೇಷ. ಪುಸ್ತಕವನ್ನು ಓದುತ್ತಿದ್ದರೆ ಆ ಜನರ ಆಸಕ್ತಿ, ಅಭಿರುಚಿ, ಚಾತುರ್ಯಗಳೆಲ್ಲಾ ತಿಳಿಯುತ್ತಾ ಹೋಗುತ್ತದೆ. ಖುಷಿಯಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ಹೊರತಂದಿರುವ ಈ ಪುಸ್ತಕದ ಸಂಪಾದಕರು ಹೆಚ್ ಶೇಷ ಅಯ್ಯಂಗಾರ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....