Homeಸಾಹಿತ್ಯ-ಸಂಸ್ಕೃತಿಪುಸ್ತಕ ವಿಮರ್ಶೆಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

ಜನರಿಗೆ ಸುಖವನ್ನುಂಟುಮಾಡುವ ಸಮಸ್ತ ವಿಷಯಗಳ ಪುಸ್ತಕ

- Advertisement -
- Advertisement -

ಷಿಕಾರಿಪುರದಲ್ಲಿದ್ದಿರಬಹುದಾದ ಚಾವುಂಡರಾಯನ ಕಾಲ ಪ್ರಾಯಶಃ ಶಕ 969 ಕ್ರಿ. ಶ. 1042. ಈತ ರಚಿಸಿರುವ ಗ್ರಂಥದ ಹೆಸರೇ ಲೋಕೋಪಕಾರಂ. ಶ್ರವಣ ಬೆಳಗೊಳದ ಗೊಮ್ಮಟೇಶ್ವರನ ಕೆತ್ತಿಸಿದ ಚಾವುಂಡರಾಯನಿಗೂ ಮತ್ತು ಲೋಕೋಪಕಾರಂ ಗ್ರಂಥದ ಕರ್ತೃವಿಗೂ ಏನೂ ಸಂಬಂಧವಿಲ್ಲ. ಈತನ ಹೆಸರನ್ನು ಕೇಳಿ ಬಹುಶಃ ಜೈನ ಮತಸ್ಥನಿರಬೇಕೆಂದುಕೊಂಡರೆ ಅದೂ ಅಲ್ಲ. ಈತ ಸಕಲ ವಿದ್ಯಾ ಸಂಪನ್ನ ಬ್ರಾಹ್ಮಣ.

ಇನ್ನು ಈ ಶೀರ್ಷಿಕೆಯ ಪ್ರಕಾರ ಲೋಕ ಎಂದರೆ ಭೌತಿಕವಾದ ಜಗತ್ತಲ್ಲ. ಜನರೆಂದು ಅರ್ಥ. ಜನೋಪಕಾರ ಎನ್ನುವುದನ್ನೇ ಲೋಕೋಪಕಾರ ಎನ್ನುತ್ತಿದ್ದಾರೆ ಈ ಕರ್ತೃ.

ಈ ಭೂಮಂಡಲದಲ್ಲಿ ಜನ್ಮಿಸಿದ ಸಮಸ್ತ ಪ್ರಾಣಿಗಳಿಗೂ ಸುಖವು ಬೇಕು. ಹಾಗಾಗಿ ಜನರಿಗೆ ಸುಖವನ್ನು ಉಂಟುಮಾಡುವ ಸಮಸ್ತ ವಿಷಯಗಳನ್ನು ಈ ಪುಸ್ತಕವು ಒಳಗೊಂಡಿದೆ.

ಯಾವುದಪ್ಪಾ ಆ ವಿಷಯಗಳೆಂದರೆ, ವೃಕ್ಷಾರ್ಯುವೇದ, ಸೂಪಶಾಸ್ತ್ರ, ಪಶುಗಳಿಗೆ ವೈದ್ಯ, ಬಾಲ ವೈದ್ಯ, ಅಶ್ವ ವೈದ್ಯ, ಗಜವೈದ್ಯ, ನರಾದಿವೈದ್ಯ, ವಿಷವೈದ್ಯ, ಲೈಂಗಿಕ ಸಮಸ್ಯೆ, ಕೃಷಿ, ಪಶು ಸಾಕಣೆ, ಮನೆ ಮದ್ದು, ಜ್ಯೋತಿಷ್ಯ, ಶಕುನಗಳು; ಹೀಗೆ ಆ ಕಾಲಘಟ್ಟದಲ್ಲಿ ಜನರು ತಮ್ಮ ಸುಖಾನ್ವೇಷಣೆಯಲ್ಲಿ ಏನೇನಲ್ಲಾ ಅನುಸರಿಸುತ್ತಿದ್ದರೋ ಅಥವಾ ಅವಲಂಬಿಸುತ್ತಿದ್ದರೋ ಆ ವಿಷಯಗಳನ್ನೆಲ್ಲಾ ಈ ಪುಸ್ತಕವು ಒಳಗೊಂಡಿದೆ.

ಪುಸ್ತಕವು ಆಸಕ್ತಿಯಿಂದ ಕೂಡಿರುವುದೇಕೆಂದರೆ, ಆ ಕಾಲಘಟ್ಟದಲ್ಲಿ ಜನರು ಸಾಮಾನ್ಯವಾಗಿ ಪರಿಗಣಿಸುತ್ತಿದ್ದ ಮತ್ತು ಶ್ರದ್ಧೆಯನ್ನು ತೋರುತ್ತಿದ್ದ ವಿಷಯಗಳನ್ನೆಲ್ಲಾ ಬರಹಗಾರ ದಾಖಲು ಮಾಡಿದ್ದಾರೆ. ಆ ಜನರ ನಂಬಿಕೆಗಳು, ಆಸಕ್ತಿಗಳು, ಅಗತ್ಯಗಳು, ಅಭಿರುಚಿಗಳೆಲ್ಲಾ ಅನಾವರಣಗೊಳ್ಳುತ್ತಾ ಹೋಗುತ್ತವೆ.

ಉದಾಹರಣೆಗೊಂದು ನೋಡಿ, “ಒಂದೆಲದ, ಹೊನಗನ್ನೆ, ಅಮರ್ದುವಳ್ಳಿ, ಕೊಳುಗುಳಿಕೆ ಈ ಔಷಧಿಗಳಲ್ಲಿ ದೊರಕಿದ ಒಂದೊಂದರ ರಸಮಂ ಕೊಂಡು ಸಕ್ಕರೆಯಂ ಬೆರಸಿ ಕುಡಿಸಿದಡೆ ಪಿತ್ತಂ ಕಿಡುವುದು.”

ಪಿತ್ತ ಕಳಕೊಂಡರಾ, ಇನ್ನು ನಿಮ್ಮ ಮುಖವು ಚಂದ್ರನ ಕಾಂತಿಯಲ್ಲಿ ಹೊಳೆಯಬೇಕಾದರೆ, “ಜವೆ, ಕೋಷ್ಠಂ, ಲೋಧ್ರಂ ಇವುರೊಳಗೆ ಆವುದೊಂದು ದ್ಕೊರಕಿದುದಂ ಕೊಂಡು ಉದಕದಲ್ಲರೆದು ಮುಸುಡಂ ಪೂಸಲ್ ಮುಸುಡು ಚಂದ್ರನ ಮರ್ಯಾದೆಯಲ್ಲಿ ಕಾಂತಿಯಪ್ಪುದು – ಬೇಗಮಪ್ಪುದು.”

ಫೇರ್ ಅಂಡ್ ಲೌವ್ಲೀ ಜಾಹಿರಾತಿನಂತೆ ಇಲ್ಲಿ ಚಾವುಂಡರಾಯರೂ ಆಶ್ವಾಸನೆ ಕೊಡುತ್ತಾರೆ “ಬೇಗಮಪ್ಪುದು” ಎಂದು.

ಅತ್ಯಂತ ಕುತೂಹಲಕರವಾದ ವಿಷಯಗಳೆಂದರೆ ಭೂಮಿಯ ಮೇಲ್ಭಾಗವನ್ನು ನೋಡಿ, ಅಲ್ಲಿರುವ ಗಿಡಗಳು, ಮರಗಳು ಯಾವುವು, ಹೇಗೆ ಬೆಳೆದಿವೆ ಎಂಬುದನ್ನೆಲ್ಲಾ ನೋಡಿ, ಬಾವಿ ತೋಡಲು ನೀರಿನ ನೆಲೆಯನ್ನು ಪತ್ತೆ ಹಚ್ಚುವುದು.

ತರಾವರಿ ಸುಗಂಧಗಳ ಗಟ್ಟಿಯಾದ ಮೊಸರು ಮಾಡುವುದು, ಕಡಿಮೆ ವಸ್ತುಗಳನ್ನು ಬಳಸಿ ಅಡಿಗೆಯನ್ನು ರುಚಿಕರವಾಗಿ ಮಾಡುವುದು, ತರಕಾರಿಗಳನ್ನು, ಹಣ್ಣುಗಳನು ಗುರುತಿಸುವ ಬಗೆ ಇತ್ಯಾದಿಗಳನ್ನೆಲ್ಲಾ ವಿವರಿಸಿದ್ದಾರೆ.

ಪ್ರಾಣಿಗಳ ಮೇಲಿನ ದಯೆ, ಗಿಡಗಳನ್ನು ಗುರುತಿಸುವುದು, ಕೃಷಿಗೆ ಅಗತ್ಯ ಸಲಹೆ; ಹೀಗೆ ಎಲ್ಲಾ ವಿಷಯಗಳಲ್ಲೂ ಪಾರಂಗತರಾಗದಿದ್ದರೂ ತಕ್ಷಣಕ್ಕೆ ಒಂದಿಷ್ಟುಮಾಹಿತಿಯನ್ನು ಪಡೆದುಕೊಂಡು ಕೆಲಸಕ್ಕೆ ತೊಡಗಲು ಸಾಧ್ಯವಾಗುವ ಹಾಗೆ ವಿಷಯಗಳು ಹೆಣೆಯಲ್ಪಟ್ಟಿವೆ. ಒಂದು ಮನೆ ಎಂದರೆ ತಕ್ಷಣಕ್ಕೆ ಏನಾದರೂ ಜ್ವರ, ಗಾಯ, ಅಥವಾ ವಿಷ ಸೇವನೆ ಎಂತಾದರೂ ಆಗಿಬಿಡಬಹುದು. ಅದಕ್ಕೆ ಈ ಪುಸ್ತಕ ಮನೆಗಳಲ್ಲಿರಬೇಕು ಎಂಬುದು ಗ್ರಂಥಕರ್ತನ ಆಶಯ.

ಗೃಹಸಂಗಾತಿ ಎಂಬ ಪುಸ್ತಕವೊಂದು ಆಧುನಿಕ, ಸರಳ ಕನ್ನಡದಲ್ಲಿದೆ. ಅದೂ ಕೂಡಾ ಹೀಗೆಯೇ. ಸಾವಿರ ವರ್ಷಗಳ ಹಿಂದೆ ಕನ್ನಡದಲ್ಲೊಬ್ಬರು ಈ ಆಲೋಚನೆ, ಆಶಯದಲ್ಲಿ ಒಂದು ಗ್ರಂಥ ರಚನೆ ಮಾಡಿರುವುದು ನಿಜಕ್ಕೂ ವಿಶೇಷ. ಪುಸ್ತಕವನ್ನು ಓದುತ್ತಿದ್ದರೆ ಆ ಜನರ ಆಸಕ್ತಿ, ಅಭಿರುಚಿ, ಚಾತುರ್ಯಗಳೆಲ್ಲಾ ತಿಳಿಯುತ್ತಾ ಹೋಗುತ್ತದೆ. ಖುಷಿಯಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ಹೊರತಂದಿರುವ ಈ ಪುಸ್ತಕದ ಸಂಪಾದಕರು ಹೆಚ್ ಶೇಷ ಅಯ್ಯಂಗಾರ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...