Homeಕರ್ನಾಟಕಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪೋಕ್ಸೋ ಪ್ರಕರಣದ ಜೊತೆಗೆ ಎಸ್‌.ಟಿ., ಎಸ್.ಟಿ. ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಮುರುಘಾ ಮಠಾಧೀಶ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಚಿತ್ರದುರ್ಗ ಎಸ್‌ಪಿಯವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವುದೇನು?

ಮರುಘಾ ಮಠದ ಮಹಿಳಾ ವಿದ್ಯಾರ್ಥಿ ನಿಲಯದ ಇಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ  ಮೈಸೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದೂರಿನ ಆಧಾರದಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2) (ಎನ್‌), 376 (ಎ), 149 ಹಾಗೂ  ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ಯ (ಪೋಕ್ಸೋ) ಕಲಂ 5 (ಎಲ್‌), 6, 17, ಅಡಿ ಪ್ರಕರಣ ದಾಖಲಾಗಿತ್ತು.

ಮೇಲ್ಕಂಡ ಪ್ರಕರಣವನ್ನು ಮೈಸೂರು ನಗರ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಚಿತ್ರದುರ್ಗ ಜಿಲ್ಲೆಗೆ ವರ್ಗಾವಣೆ ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ನೊಂದ ಬಾಲಕಿಯರ ಹೇಳಿಕೆ ಪಡೆಯುವ ಕಾಲಕ್ಕೆ ಒಬ್ಬ ಬಾಲಕಿಯು ಪರಿಶಿಷ್ಟ ಜಾತಿಗೆ ಸೇರಿರುವುದಾಗಿ ತಿಳಿದುಬಂದ ಮೇರೆಗೆ ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧಕ ಅಧಿನಿಯಮದ ಕಲಂ 3 ಕ್ಲಾಸ್‌ (1), ಸಬ್‌ ಕ್ಲಾಸ್‌ w(1), (2), 3 ಕ್ಲಾಸ್‌ (2) (v)ಗಳನ್ನು ಹೆಚ್ಚುವರಿಯಾಗಿ ಅಳವಡಿಸಿಕೊಂಡು ತನಿಖೆ ನಡೆಸಲು ಘನ ನ್ಯಾಯಾಲಯಕ್ಕೆ ದಿನಾಂಕ 28.8.2022ರಂದು ಮನವಿ ಸಲ್ಲಿಸಿ ಅನುಮತಿ ಪಡೆಯಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ.

ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮುರುಘಾ ಶರಣರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ. ಇವರ ವಿರುದ್ಧ ‘ಅಟ್ರಾಸಿಟಿ’ ಕಾನೂನಿನ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂಬ ಕೂಗು ಕೇಳಿಬಂದಿತ್ತು.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದರು.

ಭಾನುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಚಳ್ಳಕೆರೆಯ ಮಾಜಿ ಪುರಸಭಾ ಸದಸ್ಯ ಶಿವಮೂರ್ತಿ ಮಾತನಾಡಿ, “ಈ ಪ್ರಕರಣದಲ್ಲಿ ಸ್ವಾಮೀಜಿಯ ವಿರುದ್ಧ ಪರಿಶಿಷ್ಟ ಜಾತಿಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಬೇಕು” ಎಂದು ಆಗ್ರಹಿಸಿದ್ದರು.

“ದಲಿತ ಹುಡಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ಯಾಕೆ ದಾಖಲಿಸಿಲ್ಲ? ಒಂದು ಮಗುವಿಗೆ ಅನ್ಯಾಯವಾಗಿದೆ. ಯಾರೋ ವಿರುದ್ಧ ನಾನು ಮಾತನಾಡಿದ್ದಕ್ಕೆ 24 ಗಂಟೆಗಳಲ್ಲಿ ನನ್ನ ಬಂಧಿಸಿದ್ದರು. ಎರಡು ದಿನವಾದರೂ ಸ್ವಾಮೀಜಿಯ ಬಂಧನ ಏಕೆ ಆಗಿಲ್ಲ” ಎಂದು ಪ್ರಶ್ನಿಸಿದ್ದರು.

ಆರೋಪಿಗಳ ಬಂಧನ ವಿಳಂಬ: ಆಕ್ರೋಶ

ಪೋಕ್ಸೋ ಪ್ರಕರಣದ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಆರೋಪಿಗಳು ಪ್ರಭಾವಿಯಾಗುವುದರಿಂದ ಬಂಧನ ವಿಳಂಬವಾಗುತ್ತಿದ್ದು, ಸಾಕ್ಷ್ಯನಾಶಗಳಿಗೆ ಅವಕಾಶ ನೀಡಿದಂತಾಗಿದೆ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ತಿಳಿಸಿದ್ದಾರೆ.

ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಈವರೆಗೆ ಎರಡು ಭಾರಿ ‘ನಾನುಗೌರಿ.ಕಾಂ’ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದ್ದು ಎರಡು ಭಾರಿಯೂ “ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳು ಸಿಕ್ಕಾಗ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ” ಎಂದು ಕೇಳಿದಾಗ, “ಹಾಗೇನಿಲ್ಲ. ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದೇವೆ. ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದಿದ್ದಾರೆ ಎಸ್‌ಪಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಅನೈತಿಕ ಚಟುವಟಿಕೆಯ ನ***** ಮುರುಗ ಸ್ವಾಮಿಯ ಬಂಧನ ವಾಗದೇ ಇದ್ದದ್ದು ಸಂವಿಧಾನಗೆ ಮಾಡಿದ ಅಪಚಾರ ಅಪಚಾರ ಮಾಡಿದ ಪೊಲೀಸರ ಮೇಲೆ ಮೇಲೆ ಕೇಸು ದಾಖಲಿಸುವುದೇ ಸೂಕ್ತ ದಲಿತರ ಪರವಾಗಿ ಮನ್ವಾದಿಗಳು ಹೇಗೂ ಇಲ್ಲ ಕಾಂಗ್ರೆಸ್ ಸತ್ತೇ ಹೋಗಿದೆ ಮುಂದೆ ದಲಿತರೆಲ್ಲರೂ ಯೋಚಿಸಬೇಕಾದ ಅನಿವಾರ್ಯತೆ ಇದೆ ಮುರುಗ ಸ್ವಾಮಿ ವ್ಯಭಿಚಾರ ಮಾಡಿದ್ದನ್ನು ಮರೆಮಾಚಿ ಮತ್ತೆ ಅದೇ ಪೀಠಕ್ಕೆ ಏರುವುದು ಯಾವ ಮುಖದಲ್ಲಿ ಸಾಯುವವರೆಗೂ ಈ ಕಳಂಕ ಹೋಗೋದಿಲ್ಲ ಈ ಮುರುಗ ಸ್ವಾಮಿ ಮತ್ತೆ ಪೀಠಕ್ಕೆ ಏರಿದ್ರೆ ಹೇಸಿಗೆಯ ಮೇಲೆ ಕೂತಂತೆ ಒಂದಿಷ್ಟು ನಾಚಿಕೆ ಮಾನ ಮರ್ಯಾದೆ ಇದ್ರೆ ಪೀಠ ತ್ಯಜಿಸಿ ಒಂದು ಮದುವೆಯಾಗಲಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...