Homeಕರ್ನಾಟಕಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪೋಕ್ಸೋ ಪ್ರಕರಣದ ಜೊತೆಗೆ ಎಸ್‌.ಟಿ., ಎಸ್.ಟಿ. ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಮುರುಘಾ ಮಠಾಧೀಶ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಚಿತ್ರದುರ್ಗ ಎಸ್‌ಪಿಯವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವುದೇನು?

ಮರುಘಾ ಮಠದ ಮಹಿಳಾ ವಿದ್ಯಾರ್ಥಿ ನಿಲಯದ ಇಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ  ಮೈಸೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದೂರಿನ ಆಧಾರದಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2) (ಎನ್‌), 376 (ಎ), 149 ಹಾಗೂ  ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ಯ (ಪೋಕ್ಸೋ) ಕಲಂ 5 (ಎಲ್‌), 6, 17, ಅಡಿ ಪ್ರಕರಣ ದಾಖಲಾಗಿತ್ತು.

ಮೇಲ್ಕಂಡ ಪ್ರಕರಣವನ್ನು ಮೈಸೂರು ನಗರ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಚಿತ್ರದುರ್ಗ ಜಿಲ್ಲೆಗೆ ವರ್ಗಾವಣೆ ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ನೊಂದ ಬಾಲಕಿಯರ ಹೇಳಿಕೆ ಪಡೆಯುವ ಕಾಲಕ್ಕೆ ಒಬ್ಬ ಬಾಲಕಿಯು ಪರಿಶಿಷ್ಟ ಜಾತಿಗೆ ಸೇರಿರುವುದಾಗಿ ತಿಳಿದುಬಂದ ಮೇರೆಗೆ ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧಕ ಅಧಿನಿಯಮದ ಕಲಂ 3 ಕ್ಲಾಸ್‌ (1), ಸಬ್‌ ಕ್ಲಾಸ್‌ w(1), (2), 3 ಕ್ಲಾಸ್‌ (2) (v)ಗಳನ್ನು ಹೆಚ್ಚುವರಿಯಾಗಿ ಅಳವಡಿಸಿಕೊಂಡು ತನಿಖೆ ನಡೆಸಲು ಘನ ನ್ಯಾಯಾಲಯಕ್ಕೆ ದಿನಾಂಕ 28.8.2022ರಂದು ಮನವಿ ಸಲ್ಲಿಸಿ ಅನುಮತಿ ಪಡೆಯಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ.

ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮುರುಘಾ ಶರಣರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ. ಇವರ ವಿರುದ್ಧ ‘ಅಟ್ರಾಸಿಟಿ’ ಕಾನೂನಿನ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂಬ ಕೂಗು ಕೇಳಿಬಂದಿತ್ತು.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದರು.

ಭಾನುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಚಳ್ಳಕೆರೆಯ ಮಾಜಿ ಪುರಸಭಾ ಸದಸ್ಯ ಶಿವಮೂರ್ತಿ ಮಾತನಾಡಿ, “ಈ ಪ್ರಕರಣದಲ್ಲಿ ಸ್ವಾಮೀಜಿಯ ವಿರುದ್ಧ ಪರಿಶಿಷ್ಟ ಜಾತಿಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಬೇಕು” ಎಂದು ಆಗ್ರಹಿಸಿದ್ದರು.

“ದಲಿತ ಹುಡಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ಯಾಕೆ ದಾಖಲಿಸಿಲ್ಲ? ಒಂದು ಮಗುವಿಗೆ ಅನ್ಯಾಯವಾಗಿದೆ. ಯಾರೋ ವಿರುದ್ಧ ನಾನು ಮಾತನಾಡಿದ್ದಕ್ಕೆ 24 ಗಂಟೆಗಳಲ್ಲಿ ನನ್ನ ಬಂಧಿಸಿದ್ದರು. ಎರಡು ದಿನವಾದರೂ ಸ್ವಾಮೀಜಿಯ ಬಂಧನ ಏಕೆ ಆಗಿಲ್ಲ” ಎಂದು ಪ್ರಶ್ನಿಸಿದ್ದರು.

ಆರೋಪಿಗಳ ಬಂಧನ ವಿಳಂಬ: ಆಕ್ರೋಶ

ಪೋಕ್ಸೋ ಪ್ರಕರಣದ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಆರೋಪಿಗಳು ಪ್ರಭಾವಿಯಾಗುವುದರಿಂದ ಬಂಧನ ವಿಳಂಬವಾಗುತ್ತಿದ್ದು, ಸಾಕ್ಷ್ಯನಾಶಗಳಿಗೆ ಅವಕಾಶ ನೀಡಿದಂತಾಗಿದೆ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ತಿಳಿಸಿದ್ದಾರೆ.

ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಈವರೆಗೆ ಎರಡು ಭಾರಿ ‘ನಾನುಗೌರಿ.ಕಾಂ’ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದ್ದು ಎರಡು ಭಾರಿಯೂ “ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳು ಸಿಕ್ಕಾಗ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ” ಎಂದು ಕೇಳಿದಾಗ, “ಹಾಗೇನಿಲ್ಲ. ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದೇವೆ. ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದಿದ್ದಾರೆ ಎಸ್‌ಪಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಅನೈತಿಕ ಚಟುವಟಿಕೆಯ ನ***** ಮುರುಗ ಸ್ವಾಮಿಯ ಬಂಧನ ವಾಗದೇ ಇದ್ದದ್ದು ಸಂವಿಧಾನಗೆ ಮಾಡಿದ ಅಪಚಾರ ಅಪಚಾರ ಮಾಡಿದ ಪೊಲೀಸರ ಮೇಲೆ ಮೇಲೆ ಕೇಸು ದಾಖಲಿಸುವುದೇ ಸೂಕ್ತ ದಲಿತರ ಪರವಾಗಿ ಮನ್ವಾದಿಗಳು ಹೇಗೂ ಇಲ್ಲ ಕಾಂಗ್ರೆಸ್ ಸತ್ತೇ ಹೋಗಿದೆ ಮುಂದೆ ದಲಿತರೆಲ್ಲರೂ ಯೋಚಿಸಬೇಕಾದ ಅನಿವಾರ್ಯತೆ ಇದೆ ಮುರುಗ ಸ್ವಾಮಿ ವ್ಯಭಿಚಾರ ಮಾಡಿದ್ದನ್ನು ಮರೆಮಾಚಿ ಮತ್ತೆ ಅದೇ ಪೀಠಕ್ಕೆ ಏರುವುದು ಯಾವ ಮುಖದಲ್ಲಿ ಸಾಯುವವರೆಗೂ ಈ ಕಳಂಕ ಹೋಗೋದಿಲ್ಲ ಈ ಮುರುಗ ಸ್ವಾಮಿ ಮತ್ತೆ ಪೀಠಕ್ಕೆ ಏರಿದ್ರೆ ಹೇಸಿಗೆಯ ಮೇಲೆ ಕೂತಂತೆ ಒಂದಿಷ್ಟು ನಾಚಿಕೆ ಮಾನ ಮರ್ಯಾದೆ ಇದ್ರೆ ಪೀಠ ತ್ಯಜಿಸಿ ಒಂದು ಮದುವೆಯಾಗಲಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...