Homeಕರ್ನಾಟಕಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪೋಕ್ಸೋ ಪ್ರಕರಣದ ಜೊತೆಗೆ ಎಸ್‌.ಟಿ., ಎಸ್.ಟಿ. ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಮುರುಘಾ ಮಠಾಧೀಶ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಚಿತ್ರದುರ್ಗ ಎಸ್‌ಪಿಯವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವುದೇನು?

ಮರುಘಾ ಮಠದ ಮಹಿಳಾ ವಿದ್ಯಾರ್ಥಿ ನಿಲಯದ ಇಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ  ಮೈಸೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದೂರಿನ ಆಧಾರದಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2) (ಎನ್‌), 376 (ಎ), 149 ಹಾಗೂ  ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ಯ (ಪೋಕ್ಸೋ) ಕಲಂ 5 (ಎಲ್‌), 6, 17, ಅಡಿ ಪ್ರಕರಣ ದಾಖಲಾಗಿತ್ತು.

ಮೇಲ್ಕಂಡ ಪ್ರಕರಣವನ್ನು ಮೈಸೂರು ನಗರ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಚಿತ್ರದುರ್ಗ ಜಿಲ್ಲೆಗೆ ವರ್ಗಾವಣೆ ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ನೊಂದ ಬಾಲಕಿಯರ ಹೇಳಿಕೆ ಪಡೆಯುವ ಕಾಲಕ್ಕೆ ಒಬ್ಬ ಬಾಲಕಿಯು ಪರಿಶಿಷ್ಟ ಜಾತಿಗೆ ಸೇರಿರುವುದಾಗಿ ತಿಳಿದುಬಂದ ಮೇರೆಗೆ ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧಕ ಅಧಿನಿಯಮದ ಕಲಂ 3 ಕ್ಲಾಸ್‌ (1), ಸಬ್‌ ಕ್ಲಾಸ್‌ w(1), (2), 3 ಕ್ಲಾಸ್‌ (2) (v)ಗಳನ್ನು ಹೆಚ್ಚುವರಿಯಾಗಿ ಅಳವಡಿಸಿಕೊಂಡು ತನಿಖೆ ನಡೆಸಲು ಘನ ನ್ಯಾಯಾಲಯಕ್ಕೆ ದಿನಾಂಕ 28.8.2022ರಂದು ಮನವಿ ಸಲ್ಲಿಸಿ ಅನುಮತಿ ಪಡೆಯಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ.

ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮುರುಘಾ ಶರಣರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ. ಇವರ ವಿರುದ್ಧ ‘ಅಟ್ರಾಸಿಟಿ’ ಕಾನೂನಿನ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂಬ ಕೂಗು ಕೇಳಿಬಂದಿತ್ತು.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದರು.

ಭಾನುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಚಳ್ಳಕೆರೆಯ ಮಾಜಿ ಪುರಸಭಾ ಸದಸ್ಯ ಶಿವಮೂರ್ತಿ ಮಾತನಾಡಿ, “ಈ ಪ್ರಕರಣದಲ್ಲಿ ಸ್ವಾಮೀಜಿಯ ವಿರುದ್ಧ ಪರಿಶಿಷ್ಟ ಜಾತಿಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಬೇಕು” ಎಂದು ಆಗ್ರಹಿಸಿದ್ದರು.

“ದಲಿತ ಹುಡಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ಯಾಕೆ ದಾಖಲಿಸಿಲ್ಲ? ಒಂದು ಮಗುವಿಗೆ ಅನ್ಯಾಯವಾಗಿದೆ. ಯಾರೋ ವಿರುದ್ಧ ನಾನು ಮಾತನಾಡಿದ್ದಕ್ಕೆ 24 ಗಂಟೆಗಳಲ್ಲಿ ನನ್ನ ಬಂಧಿಸಿದ್ದರು. ಎರಡು ದಿನವಾದರೂ ಸ್ವಾಮೀಜಿಯ ಬಂಧನ ಏಕೆ ಆಗಿಲ್ಲ” ಎಂದು ಪ್ರಶ್ನಿಸಿದ್ದರು.

ಆರೋಪಿಗಳ ಬಂಧನ ವಿಳಂಬ: ಆಕ್ರೋಶ

ಪೋಕ್ಸೋ ಪ್ರಕರಣದ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಆರೋಪಿಗಳು ಪ್ರಭಾವಿಯಾಗುವುದರಿಂದ ಬಂಧನ ವಿಳಂಬವಾಗುತ್ತಿದ್ದು, ಸಾಕ್ಷ್ಯನಾಶಗಳಿಗೆ ಅವಕಾಶ ನೀಡಿದಂತಾಗಿದೆ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ತಿಳಿಸಿದ್ದಾರೆ.

ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಈವರೆಗೆ ಎರಡು ಭಾರಿ ‘ನಾನುಗೌರಿ.ಕಾಂ’ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದ್ದು ಎರಡು ಭಾರಿಯೂ “ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳು ಸಿಕ್ಕಾಗ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ” ಎಂದು ಕೇಳಿದಾಗ, “ಹಾಗೇನಿಲ್ಲ. ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದೇವೆ. ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದಿದ್ದಾರೆ ಎಸ್‌ಪಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಅನೈತಿಕ ಚಟುವಟಿಕೆಯ ನ***** ಮುರುಗ ಸ್ವಾಮಿಯ ಬಂಧನ ವಾಗದೇ ಇದ್ದದ್ದು ಸಂವಿಧಾನಗೆ ಮಾಡಿದ ಅಪಚಾರ ಅಪಚಾರ ಮಾಡಿದ ಪೊಲೀಸರ ಮೇಲೆ ಮೇಲೆ ಕೇಸು ದಾಖಲಿಸುವುದೇ ಸೂಕ್ತ ದಲಿತರ ಪರವಾಗಿ ಮನ್ವಾದಿಗಳು ಹೇಗೂ ಇಲ್ಲ ಕಾಂಗ್ರೆಸ್ ಸತ್ತೇ ಹೋಗಿದೆ ಮುಂದೆ ದಲಿತರೆಲ್ಲರೂ ಯೋಚಿಸಬೇಕಾದ ಅನಿವಾರ್ಯತೆ ಇದೆ ಮುರುಗ ಸ್ವಾಮಿ ವ್ಯಭಿಚಾರ ಮಾಡಿದ್ದನ್ನು ಮರೆಮಾಚಿ ಮತ್ತೆ ಅದೇ ಪೀಠಕ್ಕೆ ಏರುವುದು ಯಾವ ಮುಖದಲ್ಲಿ ಸಾಯುವವರೆಗೂ ಈ ಕಳಂಕ ಹೋಗೋದಿಲ್ಲ ಈ ಮುರುಗ ಸ್ವಾಮಿ ಮತ್ತೆ ಪೀಠಕ್ಕೆ ಏರಿದ್ರೆ ಹೇಸಿಗೆಯ ಮೇಲೆ ಕೂತಂತೆ ಒಂದಿಷ್ಟು ನಾಚಿಕೆ ಮಾನ ಮರ್ಯಾದೆ ಇದ್ರೆ ಪೀಠ ತ್ಯಜಿಸಿ ಒಂದು ಮದುವೆಯಾಗಲಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...