Homeಕರ್ನಾಟಕಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪೋಕ್ಸೋ ಪ್ರಕರಣದ ಜೊತೆಗೆ ಎಸ್‌.ಟಿ., ಎಸ್.ಟಿ. ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಮುರುಘಾ ಮಠಾಧೀಶ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಚಿತ್ರದುರ್ಗ ಎಸ್‌ಪಿಯವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವುದೇನು?

ಮರುಘಾ ಮಠದ ಮಹಿಳಾ ವಿದ್ಯಾರ್ಥಿ ನಿಲಯದ ಇಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ  ಮೈಸೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದೂರಿನ ಆಧಾರದಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2) (ಎನ್‌), 376 (ಎ), 149 ಹಾಗೂ  ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ಯ (ಪೋಕ್ಸೋ) ಕಲಂ 5 (ಎಲ್‌), 6, 17, ಅಡಿ ಪ್ರಕರಣ ದಾಖಲಾಗಿತ್ತು.

ಮೇಲ್ಕಂಡ ಪ್ರಕರಣವನ್ನು ಮೈಸೂರು ನಗರ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಚಿತ್ರದುರ್ಗ ಜಿಲ್ಲೆಗೆ ವರ್ಗಾವಣೆ ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ನೊಂದ ಬಾಲಕಿಯರ ಹೇಳಿಕೆ ಪಡೆಯುವ ಕಾಲಕ್ಕೆ ಒಬ್ಬ ಬಾಲಕಿಯು ಪರಿಶಿಷ್ಟ ಜಾತಿಗೆ ಸೇರಿರುವುದಾಗಿ ತಿಳಿದುಬಂದ ಮೇರೆಗೆ ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧಕ ಅಧಿನಿಯಮದ ಕಲಂ 3 ಕ್ಲಾಸ್‌ (1), ಸಬ್‌ ಕ್ಲಾಸ್‌ w(1), (2), 3 ಕ್ಲಾಸ್‌ (2) (v)ಗಳನ್ನು ಹೆಚ್ಚುವರಿಯಾಗಿ ಅಳವಡಿಸಿಕೊಂಡು ತನಿಖೆ ನಡೆಸಲು ಘನ ನ್ಯಾಯಾಲಯಕ್ಕೆ ದಿನಾಂಕ 28.8.2022ರಂದು ಮನವಿ ಸಲ್ಲಿಸಿ ಅನುಮತಿ ಪಡೆಯಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ.

ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮುರುಘಾ ಶರಣರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ. ಇವರ ವಿರುದ್ಧ ‘ಅಟ್ರಾಸಿಟಿ’ ಕಾನೂನಿನ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂಬ ಕೂಗು ಕೇಳಿಬಂದಿತ್ತು.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದರು.

ಭಾನುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಚಳ್ಳಕೆರೆಯ ಮಾಜಿ ಪುರಸಭಾ ಸದಸ್ಯ ಶಿವಮೂರ್ತಿ ಮಾತನಾಡಿ, “ಈ ಪ್ರಕರಣದಲ್ಲಿ ಸ್ವಾಮೀಜಿಯ ವಿರುದ್ಧ ಪರಿಶಿಷ್ಟ ಜಾತಿಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಬೇಕು” ಎಂದು ಆಗ್ರಹಿಸಿದ್ದರು.

“ದಲಿತ ಹುಡಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ಯಾಕೆ ದಾಖಲಿಸಿಲ್ಲ? ಒಂದು ಮಗುವಿಗೆ ಅನ್ಯಾಯವಾಗಿದೆ. ಯಾರೋ ವಿರುದ್ಧ ನಾನು ಮಾತನಾಡಿದ್ದಕ್ಕೆ 24 ಗಂಟೆಗಳಲ್ಲಿ ನನ್ನ ಬಂಧಿಸಿದ್ದರು. ಎರಡು ದಿನವಾದರೂ ಸ್ವಾಮೀಜಿಯ ಬಂಧನ ಏಕೆ ಆಗಿಲ್ಲ” ಎಂದು ಪ್ರಶ್ನಿಸಿದ್ದರು.

ಆರೋಪಿಗಳ ಬಂಧನ ವಿಳಂಬ: ಆಕ್ರೋಶ

ಪೋಕ್ಸೋ ಪ್ರಕರಣದ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಆರೋಪಿಗಳು ಪ್ರಭಾವಿಯಾಗುವುದರಿಂದ ಬಂಧನ ವಿಳಂಬವಾಗುತ್ತಿದ್ದು, ಸಾಕ್ಷ್ಯನಾಶಗಳಿಗೆ ಅವಕಾಶ ನೀಡಿದಂತಾಗಿದೆ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ತಿಳಿಸಿದ್ದಾರೆ.

ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಈವರೆಗೆ ಎರಡು ಭಾರಿ ‘ನಾನುಗೌರಿ.ಕಾಂ’ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದ್ದು ಎರಡು ಭಾರಿಯೂ “ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳು ಸಿಕ್ಕಾಗ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ” ಎಂದು ಕೇಳಿದಾಗ, “ಹಾಗೇನಿಲ್ಲ. ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದೇವೆ. ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದಿದ್ದಾರೆ ಎಸ್‌ಪಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಅನೈತಿಕ ಚಟುವಟಿಕೆಯ ನ***** ಮುರುಗ ಸ್ವಾಮಿಯ ಬಂಧನ ವಾಗದೇ ಇದ್ದದ್ದು ಸಂವಿಧಾನಗೆ ಮಾಡಿದ ಅಪಚಾರ ಅಪಚಾರ ಮಾಡಿದ ಪೊಲೀಸರ ಮೇಲೆ ಮೇಲೆ ಕೇಸು ದಾಖಲಿಸುವುದೇ ಸೂಕ್ತ ದಲಿತರ ಪರವಾಗಿ ಮನ್ವಾದಿಗಳು ಹೇಗೂ ಇಲ್ಲ ಕಾಂಗ್ರೆಸ್ ಸತ್ತೇ ಹೋಗಿದೆ ಮುಂದೆ ದಲಿತರೆಲ್ಲರೂ ಯೋಚಿಸಬೇಕಾದ ಅನಿವಾರ್ಯತೆ ಇದೆ ಮುರುಗ ಸ್ವಾಮಿ ವ್ಯಭಿಚಾರ ಮಾಡಿದ್ದನ್ನು ಮರೆಮಾಚಿ ಮತ್ತೆ ಅದೇ ಪೀಠಕ್ಕೆ ಏರುವುದು ಯಾವ ಮುಖದಲ್ಲಿ ಸಾಯುವವರೆಗೂ ಈ ಕಳಂಕ ಹೋಗೋದಿಲ್ಲ ಈ ಮುರುಗ ಸ್ವಾಮಿ ಮತ್ತೆ ಪೀಠಕ್ಕೆ ಏರಿದ್ರೆ ಹೇಸಿಗೆಯ ಮೇಲೆ ಕೂತಂತೆ ಒಂದಿಷ್ಟು ನಾಚಿಕೆ ಮಾನ ಮರ್ಯಾದೆ ಇದ್ರೆ ಪೀಠ ತ್ಯಜಿಸಿ ಒಂದು ಮದುವೆಯಾಗಲಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...