Homeಕರ್ನಾಟಕಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಪೋಕ್ಸೋ ಪ್ರಕರಣದ ಜೊತೆಗೆ ಎಸ್‌.ಟಿ., ಎಸ್.ಟಿ. ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಮುರುಘಾ ಮಠಾಧೀಶ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಚಿತ್ರದುರ್ಗ ಎಸ್‌ಪಿಯವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿರುವುದೇನು?

ಮರುಘಾ ಮಠದ ಮಹಿಳಾ ವಿದ್ಯಾರ್ಥಿ ನಿಲಯದ ಇಬ್ಬರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ  ಮೈಸೂರು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮೈಸೂರಿನ ನಜರ್‌ಬಾದ್‌ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದೂರಿನ ಆಧಾರದಲ್ಲಿ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 376(2) (ಎನ್‌), 376 (ಎ), 149 ಹಾಗೂ  ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ಯ (ಪೋಕ್ಸೋ) ಕಲಂ 5 (ಎಲ್‌), 6, 17, ಅಡಿ ಪ್ರಕರಣ ದಾಖಲಾಗಿತ್ತು.

ಮೇಲ್ಕಂಡ ಪ್ರಕರಣವನ್ನು ಮೈಸೂರು ನಗರ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಚಿತ್ರದುರ್ಗ ಜಿಲ್ಲೆಗೆ ವರ್ಗಾವಣೆ ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ನೊಂದ ಬಾಲಕಿಯರ ಹೇಳಿಕೆ ಪಡೆಯುವ ಕಾಲಕ್ಕೆ ಒಬ್ಬ ಬಾಲಕಿಯು ಪರಿಶಿಷ್ಟ ಜಾತಿಗೆ ಸೇರಿರುವುದಾಗಿ ತಿಳಿದುಬಂದ ಮೇರೆಗೆ ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧಕ ಅಧಿನಿಯಮದ ಕಲಂ 3 ಕ್ಲಾಸ್‌ (1), ಸಬ್‌ ಕ್ಲಾಸ್‌ w(1), (2), 3 ಕ್ಲಾಸ್‌ (2) (v)ಗಳನ್ನು ಹೆಚ್ಚುವರಿಯಾಗಿ ಅಳವಡಿಸಿಕೊಂಡು ತನಿಖೆ ನಡೆಸಲು ಘನ ನ್ಯಾಯಾಲಯಕ್ಕೆ ದಿನಾಂಕ 28.8.2022ರಂದು ಮನವಿ ಸಲ್ಲಿಸಿ ಅನುಮತಿ ಪಡೆಯಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ.

ಪ್ರಕರಣದಲ್ಲಿ ಮೊದಲ ಆರೋಪಿಯಾಗಿ ಮುರುಘಾ ಶರಣರು, ಎರಡನೇ ಆರೋಪಿಯಾಗಿ ವಾರ್ಡನ್‌ ರಶ್ಮೀ, ಮೂರನೇ ಆರೋಪಿಯಾಗಿ ಮರುಘಾ ಮಠದ ಮರಿಸ್ವಾಮಿ ಬಸವಾದಿತ್ಯ, ನಾಲ್ಕನೇ ಆರೋಪಿಯಾಗಿ ಮೈಸೂರಿನ ಪರಮಶಿವಯ್ಯ ಅವರನ್ನು ಗುರುತಿಸಲಾಗಿದೆ. ಇವರ ವಿರುದ್ಧ ‘ಅಟ್ರಾಸಿಟಿ’ ಕಾನೂನಿನ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂಬ ಕೂಗು ಕೇಳಿಬಂದಿತ್ತು.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪದಡಿಯಲ್ಲಿ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಕೇವಲ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದರೆ ಇವರ ವಿರುದ್ಧ ಎಸ್‌.ಸಿ., ಎಸ್‌.ಟಿ. ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ಪ್ರಕರಣ ದಾಖಲಿಸಬೇಕು ಎಂದು ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದರು.

ಭಾನುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಚಳ್ಳಕೆರೆಯ ಮಾಜಿ ಪುರಸಭಾ ಸದಸ್ಯ ಶಿವಮೂರ್ತಿ ಮಾತನಾಡಿ, “ಈ ಪ್ರಕರಣದಲ್ಲಿ ಸ್ವಾಮೀಜಿಯ ವಿರುದ್ಧ ಪರಿಶಿಷ್ಟ ಜಾತಿಗಳ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಬೇಕು” ಎಂದು ಆಗ್ರಹಿಸಿದ್ದರು.

“ದಲಿತ ಹುಡಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಸ್ವಾಮೀಜಿ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ಯಾಕೆ ದಾಖಲಿಸಿಲ್ಲ? ಒಂದು ಮಗುವಿಗೆ ಅನ್ಯಾಯವಾಗಿದೆ. ಯಾರೋ ವಿರುದ್ಧ ನಾನು ಮಾತನಾಡಿದ್ದಕ್ಕೆ 24 ಗಂಟೆಗಳಲ್ಲಿ ನನ್ನ ಬಂಧಿಸಿದ್ದರು. ಎರಡು ದಿನವಾದರೂ ಸ್ವಾಮೀಜಿಯ ಬಂಧನ ಏಕೆ ಆಗಿಲ್ಲ” ಎಂದು ಪ್ರಶ್ನಿಸಿದ್ದರು.

ಆರೋಪಿಗಳ ಬಂಧನ ವಿಳಂಬ: ಆಕ್ರೋಶ

ಪೋಕ್ಸೋ ಪ್ರಕರಣದ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಆರೋಪಿಗಳು ಪ್ರಭಾವಿಯಾಗುವುದರಿಂದ ಬಂಧನ ವಿಳಂಬವಾಗುತ್ತಿದ್ದು, ಸಾಕ್ಷ್ಯನಾಶಗಳಿಗೆ ಅವಕಾಶ ನೀಡಿದಂತಾಗಿದೆ ಎಂದು ಜನರು ಆಕ್ರೋಶ ಹೊರಹಾಕುತ್ತಿದ್ದಾರೆ.

“ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ತಿಳಿಸಿದ್ದಾರೆ.

ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಕೋಟೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ದಾಖಲಾಗಿ ಮೂರು ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ.

ಇದನ್ನೂ ಓದಿರಿ: ಸಂತ್ರಸ್ತ ಮಕ್ಕಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿವೆ: ದಲಿತ ಹೋರಾಟಗಾರ ಪ್ರೊ.ಸಿ.ಕೆ.ಮಹೇಶ್ ಆತಂಕ

“ಇಲ್ಲಿ ಸಾಮಾನ್ಯರಿಗೊಂದು ನ್ಯಾಯ, ಸ್ವಾಮೀಜಿಗೊಂದು ನ್ಯಾಯವಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಈವರೆಗೆ ಎರಡು ಭಾರಿ ‘ನಾನುಗೌರಿ.ಕಾಂ’ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದ್ದು ಎರಡು ಭಾರಿಯೂ “ತನಿಖೆ ನಡೆಯುತ್ತಿದೆ. ಸಾಕ್ಷ್ಯಗಳು ಸಿಕ್ಕಾಗ ಬಂಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಸಾಕ್ಷಿಗಳ ನಾಶಪಡಿಸಲು ಪೊಲೀಸರು ಅವಕಾಶ ನೀಡುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ” ಎಂದು ಕೇಳಿದಾಗ, “ಹಾಗೇನಿಲ್ಲ. ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದೇವೆ. ಪ್ರಕರಣ ದಾಖಲಾದ ತಕ್ಷಣ ಬಂಧಿಸಬೇಕೆಂದು ಯಾವುದೇ ಕಾಯ್ದೆಯಲ್ಲೂ ಇಲ್ಲ. ತನಿಖೆ ಮಾಡಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಮುರುಘಾ ಶರಣರನ್ನು ಬಂಧಿಸುತ್ತೇವೆ” ಎಂದಿದ್ದಾರೆ ಎಸ್‌ಪಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಅನೈತಿಕ ಚಟುವಟಿಕೆಯ ನ***** ಮುರುಗ ಸ್ವಾಮಿಯ ಬಂಧನ ವಾಗದೇ ಇದ್ದದ್ದು ಸಂವಿಧಾನಗೆ ಮಾಡಿದ ಅಪಚಾರ ಅಪಚಾರ ಮಾಡಿದ ಪೊಲೀಸರ ಮೇಲೆ ಮೇಲೆ ಕೇಸು ದಾಖಲಿಸುವುದೇ ಸೂಕ್ತ ದಲಿತರ ಪರವಾಗಿ ಮನ್ವಾದಿಗಳು ಹೇಗೂ ಇಲ್ಲ ಕಾಂಗ್ರೆಸ್ ಸತ್ತೇ ಹೋಗಿದೆ ಮುಂದೆ ದಲಿತರೆಲ್ಲರೂ ಯೋಚಿಸಬೇಕಾದ ಅನಿವಾರ್ಯತೆ ಇದೆ ಮುರುಗ ಸ್ವಾಮಿ ವ್ಯಭಿಚಾರ ಮಾಡಿದ್ದನ್ನು ಮರೆಮಾಚಿ ಮತ್ತೆ ಅದೇ ಪೀಠಕ್ಕೆ ಏರುವುದು ಯಾವ ಮುಖದಲ್ಲಿ ಸಾಯುವವರೆಗೂ ಈ ಕಳಂಕ ಹೋಗೋದಿಲ್ಲ ಈ ಮುರುಗ ಸ್ವಾಮಿ ಮತ್ತೆ ಪೀಠಕ್ಕೆ ಏರಿದ್ರೆ ಹೇಸಿಗೆಯ ಮೇಲೆ ಕೂತಂತೆ ಒಂದಿಷ್ಟು ನಾಚಿಕೆ ಮಾನ ಮರ್ಯಾದೆ ಇದ್ರೆ ಪೀಠ ತ್ಯಜಿಸಿ ಒಂದು ಮದುವೆಯಾಗಲಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....