Homeಚಳವಳಿನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣ: ದೂರು ದಾಖಲು

ನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣ: ದೂರು ದಾಖಲು

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಪದೇ ಪದೇ ಹೇಳಿದರೂ ಅದು ಪಾಲನೆಯಾಗದಿರುವುದು ದುರಂತದ ಸಂಗತಿಯಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನ ಇನ್‌ಫ್ಯಾಂಟ್ರಿ ರಸ್ತೆಯಲ್ಲಿ ಪೌರ ಕಾರ್ಮಿಕರು ಯಾವುದೇ ಸುರಕ್ಷತಾ ವಸ್ತುಗಳನ್ನು ಬಳಸದೆ ಕೈಯಿಂದಲೇ ಶೌಚ ಗುಂಡಿ ಸ್ವಚ್ಛ ಮಾಡಿದ್ದು, ಈ ಕೆಲಸಕ್ಕೆ ನಿಯೋಜಿಸಿದ ಸೂಪರ್‌ವೈಸರ್ ವಿರುದ್ಧ ದೂರು ನೀಡಲಾಗಿದೆ.

ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ್‌ರವರು ಈ ಘಟನೆಯನ್ನು ಗಮನಿಸಿ ಕಾರ್ಮಿಕರಿಗೆ ಕೆಲಸ ನಿಲ್ಲಿಸಲು ತಿಳಿಸಿದ್ದಾರೆ. ನಿಮ್ಮನ್ನು ಈ ಕೆಲಸಕ್ಕೆ ನಿಯೋಜಿಸಿದ ಸೂಪರ್‌ ವೈಸರ್‌ರವನ್ನು ಕರೆದುಕೊಂಡು ಬನ್ನಿ ಎಂದು ತಿಳಿಸಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ಸೂಪರ್‌ ವೈಸರ್ ವಿರುದ್ಧ ದೂರು ನೀಡಿದ್ದಾರೆ. ಜೊತೆಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮುಂದೆ ಜರುಗದಂತೆ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನಿಲ್ಲದ ಕ್ರೂರ ಪದ್ದತಿ

ವಿಜ್ಞಾನ, ನಾಗರಿಕತೆ ಎಷ್ಟೆಲ್ಲಾ ಅಭಿವೃದ್ದಿ ಹೊಂದಿದ್ದರೂ ಕೆಲ ಸಾಮಾಜಿಕ ಅನಿಷ್ಟ ಪದ್ಧತಿಗಳು ಇಂದಿಗೂ ಜಾರಿಯಲ್ಲಿರುವುದು ಇಡೀ ಭಾರತೀಯರು ತಲೆತಗ್ಗಿಸಬೇಕಾದ ವಿಚಾರ. ತಳಸಮುದಾಯದ ಜನರ ಮೇಲೆ ಮೇಲ್ಜಾತಿ, ಮೇಲ್ವರ್ಗದ ಜನರು ಹೇರಿದ ಮಲ ಹೊರುವ, ಮಲ ಬಾಚುವ (ಮ್ಯಾನುವಲ್ ಸ್ಕ್ಯಾವೆಜಿಂಗ್) ಕೆಲಸಗಳು 21ನೇ ಶತಮಾನದಲ್ಲಿಯೂ ಮುಂದುವರೆಯುತ್ತಿದ್ದರೂ ಜಡಗಟ್ಟಿದ ಸಮಾಜಕ್ಕೆ ಏನೇನು ಅನ್ನಿಸುತ್ತಿಲ್ಲ. ಈ ಕುರಿತು ಸಾವಿರಾರು ಚರ್ಚೆಗಳು ನಡೆದರೂ ಫಲಿತಾಂಶ ಮಾತ್ರ ತೀರಾ ಕಡಿಮೆ. ಇದಕ್ಕೆ ಕಾರಣ ಈ ಅನಿಷ್ಠ ಕೆಲಸವನ್ನು ಮಾಡುತ್ತಿರುವವರು ತಳಸಮುದಾಯದವರು. ಅವರ ಬಗ್ಗೆ ಯಾವ ಸರ್ಕಾರಗಳಿಗೂ, ಯಾವ ಪಕ್ಷಗಳಿಗೂ ಕಾಳಜಿಯಿಲ್ಲ ಮಾತ್ರವಲ್ಲ ಅವರಿರುವುದೇ ತಮ್ಮ ಸೇವೆ ಮಾಡುವುದಕ್ಕಾಗಿ ಎಂಬ ಫ್ಯೂಡಲ್ ಮನಸ್ಥಿತಿ. ಅಸಮಾನತೆ, ಅನ್ಯಾಯದ ತಳಹದಿಯ ಮೇಲಿರುವ ಈ ಸಮಾಜ ವ್ಯವಸ್ಥೆ ಇಂತಹ ಅನಿಷ್ಠ ಪದ್ಧತಿಗಳನ್ನು ಪೋಷಿಸುತ್ತಾ ಬರುತ್ತಿವೆ ಎನ್ನುವುದು ಚಾರಿತ್ರಿಕ ಸತ್ಯ.

ಕಳೆದ ಹಲವಾರು ದಶಕಗಳಿಂದ ಮಲಬಾಚುವ ಪದ್ದತಿಯನ್ನು ನಿರ್ಮೂಲನೆ ಮಾಡಬೇಕು, ಸಂಪೂರ್ಣ ಆಧುನಿಕ ಯಾಂತ್ರಿಕೃತ ವ್ಯವಸ್ಥೆ ಜಾರಿಗೊಳಿಸಬೇಕೆಂದು ಸಾವಿರಾರು ಹೋರಾಟಗಳು ನಡೆದಿವೆ. ಆದರೆ ಈ ಪದ್ದತಿ ಮಾತ್ರ ಕೊನೆಗೊಂಡಿಲ್ಲ.

ಕಾನೂನು ಏನು ಹೇಳುತ್ತದೆ?

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಅನ್ನು ಸರ್ಕಾರ ಕಾನೂನುಗಳ ಮೂಲಕ ನಿಷೇಧಿಸಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ. ಅದನ್ನು ತಡೆಯುವುದಕ್ಕಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಮೇಸ್ತ್ರಿಗಳು ಪೌರಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಹೇರಲಾಗಿದೆ. ಹಾಗಿದ್ದರೂ ಬಡವರ ಜೀವವನ್ನು ಲೆಕ್ಕಿಸದೆ ದುಷ್ಟ ಅಧಿಕಾರಿಗಳು ಪೌರ ಕಾರ್ಮಿಕರಿಂದ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಮಾಡಿಸಿತ್ತಿರುವುದು ಅಲ್ಲಲ್ಲಿ ವರದಿಯಾಗುತ್ತಲೇ ಇದೆ.

ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ ಅಪಾಯಕಾರಿ ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013 ರ ಕಾನೂನು ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ.

ಇದುವರೆಗೂ ಸಫಾಯಿ ಕರ್ಮಚಾರಿಗಳಾಗಿದ್ದವರಿಗೆ ಪರ್ಯಾಯ ಪುನರ್‌ವಸತಿ ಕಲ್ಪಿಸುವುದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

2013 ರ ಕಾಯಿದೆ ಮತ್ತು 2013 ರ ನಿಯಮಗಳ ಅಡಿಯಲ್ಲಿ ಒಳಗೊಂಡಿರುವ ಶಾಸನಬದ್ಧ ನಿಬಂಧನೆಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳ ಎಲ್ಲಾ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವುದು ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

ಒಂದು ವೇಳೆ ಶಾಸನಬದ್ಧ ನಿಬಂಧನೆಗಳನ್ನು ಅನುಸರಿಸದಿದ್ದಲ್ಲಿ ಮತ್ತು ಈ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ, ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಮ್ಯಾಜಿಸ್ಟ್ರೇಟರು ಕಾಯಿದೆಯ ಅಡಿಯಲ್ಲಿ ವಿಚಾರಣೆ ನಡೆಸುವ, ಶಿಕ್ಷಿಸುವ ಅಧಿಕಾರವಿದೆ.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40 ಕ್ಕೂ ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಈ ಕೆಲಸಕ್ಕಾಗಿ ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. 2021ರ ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಮುಂದಿನ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚಿಸಿತ್ತು.

ಜಾತಿ ವಿನಾಶವೇ ಪರಿಹಾರ – ಎಸ್ ಬಾಲನ್

ಬೆಂಗಳೂರಿನಲ್ಲಿ ಹತ್ತಾರು ವರ್ಷಗಳಿಂದ ಪೌರಕಾರ್ಮಿಕರನ್ನು ಸಂಘಟಿಸಿ ಹೋರಾಟ ನಡೆಸುತ್ತಿರುವ ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಬಾಲನ್‌ ರವರು ಈ ಕುರಿತು ಹೇಳುವುದು ಹೀಗೆ.. “ಮಲ ಬಾಚುವ ಪದ್ದತಿಯು ಆದಿ ಆಂಧ್ರ, ಅರುಂಧತಿಯಾರ್, ಚಕ್ಲಿಯರ್, ಮಾದಿಗರು ಜಾತಿಗೆ ಸಂಬಂಧಿಸಿದೆ. ಈ ಜಾತಿಗಳು ಮಾತ್ರ ಈ ಕೆಲಸ ಮಾಡುತ್ತಿವೆ. ಬ್ರಿಟೀಷರ ಕಾಲದ ಹಾಗೂ ಈಗಲೂ ಸಹ ಇವರು ಮೋರಿಗಳು ಎಲ್ಲಿವೆಯೋ ಅಲ್ಲಿಯೇ  ವಾಸಿಸುತ್ತಿದ್ದಾರೆ. ಸಂವಿಧಾನದ 17ನೇ ಆರ್ಟಿಕಲ್ ಇದೆ, 1993ರಲ್ಲಿ ಮಲಹೊರುವ ಪದ್ದತಿ ನಿಷೇಧ ಕಾಯ್ದೆ ಬಂತು. ಎಷ್ಟೇ ಕಾನೂನುಗಳು ಬಂದರೂ ಈ ಅನಿಷ್ಠ ಪದ್ದತಿಯನ್ನು ತಡೆಗಟ್ಟಲು ಸಾಧ್ಯವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ನಿಜವಾಗಿಯೂ ಇದು ಪರಿಹಾರವಾಗಬೇಕಾದರೆ ಜಾತಿ ವ್ಯವಸ್ಥೆ ನಾಶವಾಗಬೇಕು. ಆದರೆ ಇಂದು ಜಾತಿಗಳು ಮತ್ತಷ್ಟು ಸಂಘಟಿತವಾಗುತ್ತಿವೆ. ಹಿಂದೂ ಧರ್ಮ ಜಾತಿಪದ್ದತಿಯನ್ನು ಪೋಷಿಸುತ್ತಿದೆ. ಕಾರ್ಪೋರೇಟ್ ಕಂಪನಿಗಳು, ದೊಡ್ಡ ದೊಡ್ಡ ಮಾಲ್‌ಗಳಲ್ಲಿ ಈ ಜನರನ್ನು ಶೌಚಾಲಯಗಳ ಒಳಗಡೆಯೆ ಬಂಧಿಸಲಾಗಿದೆ. ಹಾಗಾಗಿ ಈ ಕಾನೂನುಗಳನ್ನು ನಾನು ನಂಬುವುದಿಲ್ಲ. ಜಾತಿ ನಾಶವಾಗದೆ ಇದು ನಿರ್ಮೂಲನೆಯಾಗುವುದಿಲ್ಲ. ಮೋದಿಯವರು ಪೌರ ಕಾರ್ಮಿಕರ ಕಾಲು ತೊಳೆದು ನಾಟಕ ಮಾಡುತ್ತಾರೆ ಆದರೆ ಪೌರ ಕಾರ್ಮಿಕರ ನೌಕರಿಯನ್ನು ಕಾಯಂ ಮಾಡುವುದಿಲ್ಲ ಏಕೆ” ಎಂದು ಬಾಲನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ಮಲ ಬಳಿಸುವ ಕ್ರೌರ್ಯಕ್ಕೆ ಕೊನೆಯೆಂದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....