Homeಚಳವಳಿನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣ: ದೂರು ದಾಖಲು

ನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಪ್ರಕರಣ: ದೂರು ದಾಖಲು

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಪದೇ ಪದೇ ಹೇಳಿದರೂ ಅದು ಪಾಲನೆಯಾಗದಿರುವುದು ದುರಂತದ ಸಂಗತಿಯಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನ ಇನ್‌ಫ್ಯಾಂಟ್ರಿ ರಸ್ತೆಯಲ್ಲಿ ಪೌರ ಕಾರ್ಮಿಕರು ಯಾವುದೇ ಸುರಕ್ಷತಾ ವಸ್ತುಗಳನ್ನು ಬಳಸದೆ ಕೈಯಿಂದಲೇ ಶೌಚ ಗುಂಡಿ ಸ್ವಚ್ಛ ಮಾಡಿದ್ದು, ಈ ಕೆಲಸಕ್ಕೆ ನಿಯೋಜಿಸಿದ ಸೂಪರ್‌ವೈಸರ್ ವಿರುದ್ಧ ದೂರು ನೀಡಲಾಗಿದೆ.

ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರಾದ ವಿನಯ್‌ ಶ್ರೀನಿವಾಸ್‌ರವರು ಈ ಘಟನೆಯನ್ನು ಗಮನಿಸಿ ಕಾರ್ಮಿಕರಿಗೆ ಕೆಲಸ ನಿಲ್ಲಿಸಲು ತಿಳಿಸಿದ್ದಾರೆ. ನಿಮ್ಮನ್ನು ಈ ಕೆಲಸಕ್ಕೆ ನಿಯೋಜಿಸಿದ ಸೂಪರ್‌ ವೈಸರ್‌ರವನ್ನು ಕರೆದುಕೊಂಡು ಬನ್ನಿ ಎಂದು ತಿಳಿಸಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ಸೂಪರ್‌ ವೈಸರ್ ವಿರುದ್ಧ ದೂರು ನೀಡಿದ್ದಾರೆ. ಜೊತೆಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಮುಂದೆ ಜರುಗದಂತೆ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ನಿಲ್ಲದ ಕ್ರೂರ ಪದ್ದತಿ

ವಿಜ್ಞಾನ, ನಾಗರಿಕತೆ ಎಷ್ಟೆಲ್ಲಾ ಅಭಿವೃದ್ದಿ ಹೊಂದಿದ್ದರೂ ಕೆಲ ಸಾಮಾಜಿಕ ಅನಿಷ್ಟ ಪದ್ಧತಿಗಳು ಇಂದಿಗೂ ಜಾರಿಯಲ್ಲಿರುವುದು ಇಡೀ ಭಾರತೀಯರು ತಲೆತಗ್ಗಿಸಬೇಕಾದ ವಿಚಾರ. ತಳಸಮುದಾಯದ ಜನರ ಮೇಲೆ ಮೇಲ್ಜಾತಿ, ಮೇಲ್ವರ್ಗದ ಜನರು ಹೇರಿದ ಮಲ ಹೊರುವ, ಮಲ ಬಾಚುವ (ಮ್ಯಾನುವಲ್ ಸ್ಕ್ಯಾವೆಜಿಂಗ್) ಕೆಲಸಗಳು 21ನೇ ಶತಮಾನದಲ್ಲಿಯೂ ಮುಂದುವರೆಯುತ್ತಿದ್ದರೂ ಜಡಗಟ್ಟಿದ ಸಮಾಜಕ್ಕೆ ಏನೇನು ಅನ್ನಿಸುತ್ತಿಲ್ಲ. ಈ ಕುರಿತು ಸಾವಿರಾರು ಚರ್ಚೆಗಳು ನಡೆದರೂ ಫಲಿತಾಂಶ ಮಾತ್ರ ತೀರಾ ಕಡಿಮೆ. ಇದಕ್ಕೆ ಕಾರಣ ಈ ಅನಿಷ್ಠ ಕೆಲಸವನ್ನು ಮಾಡುತ್ತಿರುವವರು ತಳಸಮುದಾಯದವರು. ಅವರ ಬಗ್ಗೆ ಯಾವ ಸರ್ಕಾರಗಳಿಗೂ, ಯಾವ ಪಕ್ಷಗಳಿಗೂ ಕಾಳಜಿಯಿಲ್ಲ ಮಾತ್ರವಲ್ಲ ಅವರಿರುವುದೇ ತಮ್ಮ ಸೇವೆ ಮಾಡುವುದಕ್ಕಾಗಿ ಎಂಬ ಫ್ಯೂಡಲ್ ಮನಸ್ಥಿತಿ. ಅಸಮಾನತೆ, ಅನ್ಯಾಯದ ತಳಹದಿಯ ಮೇಲಿರುವ ಈ ಸಮಾಜ ವ್ಯವಸ್ಥೆ ಇಂತಹ ಅನಿಷ್ಠ ಪದ್ಧತಿಗಳನ್ನು ಪೋಷಿಸುತ್ತಾ ಬರುತ್ತಿವೆ ಎನ್ನುವುದು ಚಾರಿತ್ರಿಕ ಸತ್ಯ.

ಕಳೆದ ಹಲವಾರು ದಶಕಗಳಿಂದ ಮಲಬಾಚುವ ಪದ್ದತಿಯನ್ನು ನಿರ್ಮೂಲನೆ ಮಾಡಬೇಕು, ಸಂಪೂರ್ಣ ಆಧುನಿಕ ಯಾಂತ್ರಿಕೃತ ವ್ಯವಸ್ಥೆ ಜಾರಿಗೊಳಿಸಬೇಕೆಂದು ಸಾವಿರಾರು ಹೋರಾಟಗಳು ನಡೆದಿವೆ. ಆದರೆ ಈ ಪದ್ದತಿ ಮಾತ್ರ ಕೊನೆಗೊಂಡಿಲ್ಲ.

ಕಾನೂನು ಏನು ಹೇಳುತ್ತದೆ?

ಮ್ಯಾನುವಲ್ ಸ್ಕ್ಯಾವೆಂಜಿಂಗ್ ಅನ್ನು ಸರ್ಕಾರ ಕಾನೂನುಗಳ ಮೂಲಕ ನಿಷೇಧಿಸಿದೆ. ಏಕೆಂದರೆ ಈ ಕೆಲಸ ಮಾಡುವಾಗ ಉಸಿರುಗಟ್ಟಿ, ಆಮ್ಲಜನಕದ ಕೊರತೆಯಿಂದ ಸಾವಿರಾರು ಪೌರಕಾರ್ಮಿಕರು ಪ್ರಾಣ ತೆತ್ತಿದ್ದಾರೆ. ಅದನ್ನು ತಡೆಯುವುದಕ್ಕಾಗಿ ಯಾರೇ ಅಧಿಕಾರಗಳು, ಸೂಪರ್‌ವೈಸರ್‌ಗಳು, ಮೇಸ್ತ್ರಿಗಳು ಪೌರಕಾರ್ಮಿಕರಿಂದ ಈ ಕೆಲಸ ಮಾಡಿಸಬಾರದೆಂದು ಕಟ್ಟು ನಿಟ್ಟಿನ ನಿಯಮಗಳನ್ನು ಹೇರಲಾಗಿದೆ. ಹಾಗಿದ್ದರೂ ಬಡವರ ಜೀವವನ್ನು ಲೆಕ್ಕಿಸದೆ ದುಷ್ಟ ಅಧಿಕಾರಿಗಳು ಪೌರ ಕಾರ್ಮಿಕರಿಂದ ಮ್ಯಾನುವಲ್ ಸ್ಕ್ಯಾವೆಂಜಿಂಗ್ ಮಾಡಿಸಿತ್ತಿರುವುದು ಅಲ್ಲಲ್ಲಿ ವರದಿಯಾಗುತ್ತಲೇ ಇದೆ.

ಯಾವುದೇ ವ್ಯಕ್ತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಒಳಚರಂಡಿ ಅಥವಾ ಸೆಪ್ಟಿಕ್ ಟ್ಯಾಂಕ್‌ನ ಅಪಾಯಕಾರಿ ಶುಚಿಗೊಳಿಸುವಿಕೆಗಾಗಿ ಬಳಸಿಕೊಳ್ಳಬಾರದು ಎಂದು 2013 ರ ಕಾನೂನು ಸ್ಪಷ್ಟಪಡಿಸಿದೆ. ಇದಕ್ಕಾಗಿ ಯಂತ್ರಗಳನ್ನು ಮಾತ್ರವೇ ಬಳಸಬೇಕೆಂದು ಸೂಚಿಸಿದೆ.

ಇದುವರೆಗೂ ಸಫಾಯಿ ಕರ್ಮಚಾರಿಗಳಾಗಿದ್ದವರಿಗೆ ಪರ್ಯಾಯ ಪುನರ್‌ವಸತಿ ಕಲ್ಪಿಸುವುದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

2013 ರ ಕಾಯಿದೆ ಮತ್ತು 2013 ರ ನಿಯಮಗಳ ಅಡಿಯಲ್ಲಿ ಒಳಗೊಂಡಿರುವ ಶಾಸನಬದ್ಧ ನಿಬಂಧನೆಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಂಸ್ಥೆಗಳ ಎಲ್ಲಾ ಅಧಿಕಾರಿಗಳಿಗೆ ಜಾಗೃತಿ ಮೂಡಿಸುವುದು ಜಿಲ್ಲಾಧಿಕಾರಿಗಳ ಕರ್ತವ್ಯವಾಗಿರುತ್ತದೆ.

ಒಂದು ವೇಳೆ ಶಾಸನಬದ್ಧ ನಿಬಂಧನೆಗಳನ್ನು ಅನುಸರಿಸದಿದ್ದಲ್ಲಿ ಮತ್ತು ಈ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ, ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಮ್ಯಾಜಿಸ್ಟ್ರೇಟರು ಕಾಯಿದೆಯ ಅಡಿಯಲ್ಲಿ ವಿಚಾರಣೆ ನಡೆಸುವ, ಶಿಕ್ಷಿಸುವ ಅಧಿಕಾರವಿದೆ.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40 ಕ್ಕೂ ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಈ ಕೆಲಸಕ್ಕಾಗಿ ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. 2021ರ ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಮುಂದಿನ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚಿಸಿತ್ತು.

ಜಾತಿ ವಿನಾಶವೇ ಪರಿಹಾರ – ಎಸ್ ಬಾಲನ್

ಬೆಂಗಳೂರಿನಲ್ಲಿ ಹತ್ತಾರು ವರ್ಷಗಳಿಂದ ಪೌರಕಾರ್ಮಿಕರನ್ನು ಸಂಘಟಿಸಿ ಹೋರಾಟ ನಡೆಸುತ್ತಿರುವ ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಬಾಲನ್‌ ರವರು ಈ ಕುರಿತು ಹೇಳುವುದು ಹೀಗೆ.. “ಮಲ ಬಾಚುವ ಪದ್ದತಿಯು ಆದಿ ಆಂಧ್ರ, ಅರುಂಧತಿಯಾರ್, ಚಕ್ಲಿಯರ್, ಮಾದಿಗರು ಜಾತಿಗೆ ಸಂಬಂಧಿಸಿದೆ. ಈ ಜಾತಿಗಳು ಮಾತ್ರ ಈ ಕೆಲಸ ಮಾಡುತ್ತಿವೆ. ಬ್ರಿಟೀಷರ ಕಾಲದ ಹಾಗೂ ಈಗಲೂ ಸಹ ಇವರು ಮೋರಿಗಳು ಎಲ್ಲಿವೆಯೋ ಅಲ್ಲಿಯೇ  ವಾಸಿಸುತ್ತಿದ್ದಾರೆ. ಸಂವಿಧಾನದ 17ನೇ ಆರ್ಟಿಕಲ್ ಇದೆ, 1993ರಲ್ಲಿ ಮಲಹೊರುವ ಪದ್ದತಿ ನಿಷೇಧ ಕಾಯ್ದೆ ಬಂತು. ಎಷ್ಟೇ ಕಾನೂನುಗಳು ಬಂದರೂ ಈ ಅನಿಷ್ಠ ಪದ್ದತಿಯನ್ನು ತಡೆಗಟ್ಟಲು ಸಾಧ್ಯವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ನಿಜವಾಗಿಯೂ ಇದು ಪರಿಹಾರವಾಗಬೇಕಾದರೆ ಜಾತಿ ವ್ಯವಸ್ಥೆ ನಾಶವಾಗಬೇಕು. ಆದರೆ ಇಂದು ಜಾತಿಗಳು ಮತ್ತಷ್ಟು ಸಂಘಟಿತವಾಗುತ್ತಿವೆ. ಹಿಂದೂ ಧರ್ಮ ಜಾತಿಪದ್ದತಿಯನ್ನು ಪೋಷಿಸುತ್ತಿದೆ. ಕಾರ್ಪೋರೇಟ್ ಕಂಪನಿಗಳು, ದೊಡ್ಡ ದೊಡ್ಡ ಮಾಲ್‌ಗಳಲ್ಲಿ ಈ ಜನರನ್ನು ಶೌಚಾಲಯಗಳ ಒಳಗಡೆಯೆ ಬಂಧಿಸಲಾಗಿದೆ. ಹಾಗಾಗಿ ಈ ಕಾನೂನುಗಳನ್ನು ನಾನು ನಂಬುವುದಿಲ್ಲ. ಜಾತಿ ನಾಶವಾಗದೆ ಇದು ನಿರ್ಮೂಲನೆಯಾಗುವುದಿಲ್ಲ. ಮೋದಿಯವರು ಪೌರ ಕಾರ್ಮಿಕರ ಕಾಲು ತೊಳೆದು ನಾಟಕ ಮಾಡುತ್ತಾರೆ ಆದರೆ ಪೌರ ಕಾರ್ಮಿಕರ ನೌಕರಿಯನ್ನು ಕಾಯಂ ಮಾಡುವುದಿಲ್ಲ ಏಕೆ” ಎಂದು ಬಾಲನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ಮಲ ಬಳಿಸುವ ಕ್ರೌರ್ಯಕ್ಕೆ ಕೊನೆಯೆಂದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...