Homeಮುಖಪುಟಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ಆಗಸ್ಟ್ 31ರಂದು ದಿಯೋಘರ್ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ‘ಬಲವಂತವಾಗಿ’ ಫ್ಲೈಟ್ ಕ್ಲಿಯರೆನ್ಸ್ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ, ಮನೋಜ್ ತಿವಾರಿ, ದುಬೆ ಅವರ ಇಬ್ಬರು ಪುತ್ರರು ಮತ್ತು ಇತರರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದಾದ ನಂತರ ದುಬೆ ಅವರ ದೂರಿನ ಮೇರೆಗೆ ದೆಹಲಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣದ ‘ನಿರ್ಬಂಧಿತ’ ಪ್ರದೇಶವನ್ನು ಪ್ರವೇಶಿಸುವ ಮೂಲಕ ‘ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡಿದ್ದಾರೆ’ ಎಂದು ದಿಯೋಘರ್ ಡೆಪ್ಯೂಟಿ ಕಮಿಷನರ್ ಮತ್ತು ಜಾರ್ಖಂಡ್ ಪೊಲೀಸ್ ಅಧಿಕಾರಿಗಳ ವಿರುದ್ಧ ದೇಶದ್ರೋಹದ ಆರೋಪವನ್ನು ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿ ಪೊಲೀಸರು ದಿಯೋಘರ್‌ನಲ್ಲಿರುವ ಕುಂದಾ ಪೊಲೀಸ್ ಠಾಣೆಗೆ ತನಿಖೆಗಾಗಿ ಎಫ್‌ಐಆರ್‌ ಕಳುಹಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣ ಸಲಹಾ ಸಮಿತಿಯ ಅಧ್ಯಕ್ಷ ಸಂಸದ ನಿಶಿಕಾಂತ್ ದುಬೆ ಅವರು ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 124A (ದೇಶದ್ರೋಹ), 353 (ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿ), 448 (ಮನೆ ಅತಿಕ್ರಮಣ), 201 (ಸಾಕ್ಷಾಧಾರಗಳ ಕಣ್ಮರೆಗೆ ಕಾರಣ), 506 (ಅಪರಾಧ ಬೆದರಿಕೆ), 120 ಬಿ (ಅಪರಾಧದ ಪಿತೂರಿ) ಮತ್ತು ಅಧಿಕಾರಿಗಳ ರಹಸ್ಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಯೋಘರ್ ಡೆಪ್ಯುಟಿ ಕಮಿಷನರ್ ಮಂಜುನಾಥ್ ಭಜಂತ್ರಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು (ಎಫ್‌ಐಆರ್) ಒಂದು ಅಸಂಬದ್ಧ ಮತ್ತು ಶೇ.100ರಷ್ಟು ಕಟ್ಟುಕಥೆಯಾಗಿದೆ. ಅವರು ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ. ತನಿಖೆಯಲ್ಲಿ ಎಲ್ಲವೂ ಬಹಿರಂಗವಾಗುತ್ತದೆ” ಎಂದಿದ್ದಾರೆ.

ಎಟಿಸಿ ಕೋಣೆಗೆ ಪ್ರವೇಶಿಸುವ ಮೂಲಕ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಕ್ಲಿಯರೆನ್ಸ್‌ ಕೊಡುವಂತೆ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಭದ್ರತಾ ಉಸ್ತುವಾರಿ ಸುಮನ್ ಆನಂದ್ ನೀಡಿದ ದೂರಿನ ಮೇರೆಗೆ ಸೆಪ್ಟೆಂಬರ್ 1ರಂದು ಕುಂದಾ ಪೊಲೀಸ್ ಠಾಣೆಯಲ್ಲಿ ದುಬೆ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ದಿಯೋಘರ್‌ನಿಂದ ಟೇಕಾಫ್ ಮಾಡಲು ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ನಿಂದ ಬಲವಂತವಾಗಿ ಕ್ಲಿಯರೆನ್ಸ್ ತೆಗೆದುಕೊಂಡ ಆರೋಪದ ಮೇಲೆ ಸಂಸದರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆಗಸ್ಟ್ 31ರಂದು ವಿಮಾನ ನಿಲ್ದಾಣದಲ್ಲಿ ರಾತ್ರಿ ಟೇಕ್-ಆಫ್ ಅಥವಾ ಲ್ಯಾಂಡಿಂಗ್ ಸೌಲಭ್ಯವಿಲ್ಲ. ಸೆಪ್ಟಂಬರ್ 1 ರಂದು ಭದ್ರತಾ ಪ್ರಭಾರಿ ಸುಮನ್ ಆನಂದ್ ದೂರು ನೀಡಿದ್ದರು.

ಡಿಸಿ ಭಜಂತ್ರಿಯವರು ಜಾರ್ಖಂಡ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದು, “ದುಬೆ ಮತ್ತು ಇತರರು ಎಟಿಸಿ ಕೊಠಡಿಯೊಳಗೆ ಬಂದರು. ಕ್ಲಿಯರೆನ್ಸ್‌ಗಾಗಿ ಒತ್ತಡ ಹೇರಿದರು” ಎಂದು ಆರೋಪಿಸಿದ್ದಾರೆ.

ಇದಾದ ಬಳಿಕ ದುಬೆ ಅವರು ದೂರು ನೀಡಿದ್ದು ದೆಹಲಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 31 ರಂದು ದೆಹಲಿಗೆ ಪ್ರಯಾಣಿಸಬೇಕಾಗಿತ್ತು. ಭದ್ರತಾ ತಪಾಸಣೆಯ ನಂತರ ಆಗಸ್ಟ್ 31ರಂದು ಸಂಜೆ 5.25 ಫ್ಲೈಟ್ ಹತ್ತಲಾಯಿತು. ನೈಟ್ ಲ್ಯಾಂಡಿಂಗ್ ಸೌಲಭ್ಯಗಳ ಕೊರತೆಯ ಬಗ್ಗೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಪ್ರಕರಣವೊಂದು ಬಾಕಿ ಉಳಿದಿರುವುದರಿಂದ ಮತ್ತು ಸಾಕಷ್ಟು ಸಮಯವಿಲ್ಲದ ಕಾರಣ, ಈ ವಿಷಯದ ಕುರಿತು ಚರ್ಚಿಸಲು ನಾನು ವಿಮಾನ ನಿಲ್ದಾಣದ ನಿರ್ದೇಶಕರ ಕಚೇರಿಗೆ ಬರಿಗಾಲಿನಲ್ಲಿ ನಡೆದಿದ್ದೇನೆ ಎಂದು ದುಬೆ ಹೇಳಿದ್ದಾರೆ.

“ನಾನು ಹೋಗುತ್ತಿರುವಾಗ, ಜಾರ್ಖಂಡ್ ಪೊಲೀಸರು ಮತ್ತು (ರಾಜ್ಯ ಸರ್ಕಾರದ) ನೌಕರರು ನನ್ನನ್ನು ತಡೆದರು. ನನ್ನ ಇಬ್ಬರು ಗಂಡುಮಕ್ಕಳನ್ನು ನಿಂದಿಸಿದರು. ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ದಿಯೋಘರ್ ಡಿಸಿಯ ಸೂಚನೆಯಲ್ಲಿ ಅವರು ನನ್ನ ಕೆಲಸಕ್ಕೆ ಅಡ್ಡಿಪಡಿಸಿದರು. ಮರುದಿನ ಜಿಲ್ಲಾಧಿಕಾರಿಯವರು ದಿಯೋಘರ್ ವಿಮಾನ ನಿಲ್ದಾಣದ ಸುರಕ್ಷಿತ ಡಿಆರ್‌ಡಿಒ ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ನನಗೆ ತಿಳಿದಿತ್ತು. ಅಲ್ಲಿಗೆ ಪಿಎಂಒ ಅನುಮತಿಯ ನಂತರ ಮಾತ್ರ ಹೋಗಬಹುದು” ಎಂದು ದೆಹಲಿ ದುಬೆ ಆಪಾದಿಸಿದ್ದಾರೆ.

ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ದುಬೆ ಮತ್ತು ಭಜಂತ್ರಿ ನಡುವೆ ಟ್ವಿಟ್ಟರ್ ವಾರ್‌ ನಡೆದಿದೆ. ದುಬೆ: “…ನೀವು ವಿಮಾನ ನಿಲ್ದಾಣದೊಳಗೆ ಹೇಗೆ ಬಂದಿರಿ? ಯಾವ ಅಧಿಕಾರದ ಅಡಿಯಲ್ಲಿ ಬಂದಿರಿ? ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಹತಾಶರಾಗಿದ್ದೀರಿ”.

ಇದನ್ನೂ ಓದಿರಿ: ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಭಜಂತ್ರಿ: ಇದಕ್ಕೆ ಅಧಿಕಾರ ಹೊಂದಿದ್ದೇನೆ. ಪ್ರವೇಶಕ್ಕಾಗಿ ಗೇಟ್ ಪಾಸ್ ಇದೆ.

ದುಬೆ: “ಎಟಿಸಿ ಟವರ್‌ ಪ್ರವೇಶಿಸಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಎಲ್ಲಾ ಮಾನದಂಡಗಳನ್ನು ಉಲ್ಲಂಘಿಸಿದ್ದೀರಿ”.

ಭಜಂತ್ರಿ ಆರೋಪವನ್ನು ತಿರಸ್ಕರಿಸಿದ್ದಾರೆ. ಅಧಿಕಾರಿ ರಾಷ್ಟ್ರೀಯ ಭದ್ರತೆಯನ್ನು ಉಲ್ಲಂಘಿಸಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.

ಎಟಿಸಿ ಆವರಣವನ್ನು ಪ್ರವೇಶಿಸಲು, ಒಬ್ಬ ವ್ಯಕ್ತಿಗೆ ಏರೋಡ್ರೋಮ್ ಎಂಟ್ರಿ ಪರ್ಮಿಟ್ (AEP) ಅಗತ್ಯವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...