Homeಮುಖಪುಟಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ಆಗಸ್ಟ್ 31ರಂದು ದಿಯೋಘರ್ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ‘ಬಲವಂತವಾಗಿ’ ಫ್ಲೈಟ್ ಕ್ಲಿಯರೆನ್ಸ್ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ, ಮನೋಜ್ ತಿವಾರಿ, ದುಬೆ ಅವರ ಇಬ್ಬರು ಪುತ್ರರು ಮತ್ತು ಇತರರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದಾದ ನಂತರ ದುಬೆ ಅವರ ದೂರಿನ ಮೇರೆಗೆ ದೆಹಲಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣದ ‘ನಿರ್ಬಂಧಿತ’ ಪ್ರದೇಶವನ್ನು ಪ್ರವೇಶಿಸುವ ಮೂಲಕ ‘ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡಿದ್ದಾರೆ’ ಎಂದು ದಿಯೋಘರ್ ಡೆಪ್ಯೂಟಿ ಕಮಿಷನರ್ ಮತ್ತು ಜಾರ್ಖಂಡ್ ಪೊಲೀಸ್ ಅಧಿಕಾರಿಗಳ ವಿರುದ್ಧ ದೇಶದ್ರೋಹದ ಆರೋಪವನ್ನು ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿ ಪೊಲೀಸರು ದಿಯೋಘರ್‌ನಲ್ಲಿರುವ ಕುಂದಾ ಪೊಲೀಸ್ ಠಾಣೆಗೆ ತನಿಖೆಗಾಗಿ ಎಫ್‌ಐಆರ್‌ ಕಳುಹಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣ ಸಲಹಾ ಸಮಿತಿಯ ಅಧ್ಯಕ್ಷ ಸಂಸದ ನಿಶಿಕಾಂತ್ ದುಬೆ ಅವರು ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 124A (ದೇಶದ್ರೋಹ), 353 (ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿ), 448 (ಮನೆ ಅತಿಕ್ರಮಣ), 201 (ಸಾಕ್ಷಾಧಾರಗಳ ಕಣ್ಮರೆಗೆ ಕಾರಣ), 506 (ಅಪರಾಧ ಬೆದರಿಕೆ), 120 ಬಿ (ಅಪರಾಧದ ಪಿತೂರಿ) ಮತ್ತು ಅಧಿಕಾರಿಗಳ ರಹಸ್ಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಯೋಘರ್ ಡೆಪ್ಯುಟಿ ಕಮಿಷನರ್ ಮಂಜುನಾಥ್ ಭಜಂತ್ರಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು (ಎಫ್‌ಐಆರ್) ಒಂದು ಅಸಂಬದ್ಧ ಮತ್ತು ಶೇ.100ರಷ್ಟು ಕಟ್ಟುಕಥೆಯಾಗಿದೆ. ಅವರು ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ. ತನಿಖೆಯಲ್ಲಿ ಎಲ್ಲವೂ ಬಹಿರಂಗವಾಗುತ್ತದೆ” ಎಂದಿದ್ದಾರೆ.

ಎಟಿಸಿ ಕೋಣೆಗೆ ಪ್ರವೇಶಿಸುವ ಮೂಲಕ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಕ್ಲಿಯರೆನ್ಸ್‌ ಕೊಡುವಂತೆ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಭದ್ರತಾ ಉಸ್ತುವಾರಿ ಸುಮನ್ ಆನಂದ್ ನೀಡಿದ ದೂರಿನ ಮೇರೆಗೆ ಸೆಪ್ಟೆಂಬರ್ 1ರಂದು ಕುಂದಾ ಪೊಲೀಸ್ ಠಾಣೆಯಲ್ಲಿ ದುಬೆ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ದಿಯೋಘರ್‌ನಿಂದ ಟೇಕಾಫ್ ಮಾಡಲು ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ನಿಂದ ಬಲವಂತವಾಗಿ ಕ್ಲಿಯರೆನ್ಸ್ ತೆಗೆದುಕೊಂಡ ಆರೋಪದ ಮೇಲೆ ಸಂಸದರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆಗಸ್ಟ್ 31ರಂದು ವಿಮಾನ ನಿಲ್ದಾಣದಲ್ಲಿ ರಾತ್ರಿ ಟೇಕ್-ಆಫ್ ಅಥವಾ ಲ್ಯಾಂಡಿಂಗ್ ಸೌಲಭ್ಯವಿಲ್ಲ. ಸೆಪ್ಟಂಬರ್ 1 ರಂದು ಭದ್ರತಾ ಪ್ರಭಾರಿ ಸುಮನ್ ಆನಂದ್ ದೂರು ನೀಡಿದ್ದರು.

ಡಿಸಿ ಭಜಂತ್ರಿಯವರು ಜಾರ್ಖಂಡ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದು, “ದುಬೆ ಮತ್ತು ಇತರರು ಎಟಿಸಿ ಕೊಠಡಿಯೊಳಗೆ ಬಂದರು. ಕ್ಲಿಯರೆನ್ಸ್‌ಗಾಗಿ ಒತ್ತಡ ಹೇರಿದರು” ಎಂದು ಆರೋಪಿಸಿದ್ದಾರೆ.

ಇದಾದ ಬಳಿಕ ದುಬೆ ಅವರು ದೂರು ನೀಡಿದ್ದು ದೆಹಲಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 31 ರಂದು ದೆಹಲಿಗೆ ಪ್ರಯಾಣಿಸಬೇಕಾಗಿತ್ತು. ಭದ್ರತಾ ತಪಾಸಣೆಯ ನಂತರ ಆಗಸ್ಟ್ 31ರಂದು ಸಂಜೆ 5.25 ಫ್ಲೈಟ್ ಹತ್ತಲಾಯಿತು. ನೈಟ್ ಲ್ಯಾಂಡಿಂಗ್ ಸೌಲಭ್ಯಗಳ ಕೊರತೆಯ ಬಗ್ಗೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಪ್ರಕರಣವೊಂದು ಬಾಕಿ ಉಳಿದಿರುವುದರಿಂದ ಮತ್ತು ಸಾಕಷ್ಟು ಸಮಯವಿಲ್ಲದ ಕಾರಣ, ಈ ವಿಷಯದ ಕುರಿತು ಚರ್ಚಿಸಲು ನಾನು ವಿಮಾನ ನಿಲ್ದಾಣದ ನಿರ್ದೇಶಕರ ಕಚೇರಿಗೆ ಬರಿಗಾಲಿನಲ್ಲಿ ನಡೆದಿದ್ದೇನೆ ಎಂದು ದುಬೆ ಹೇಳಿದ್ದಾರೆ.

“ನಾನು ಹೋಗುತ್ತಿರುವಾಗ, ಜಾರ್ಖಂಡ್ ಪೊಲೀಸರು ಮತ್ತು (ರಾಜ್ಯ ಸರ್ಕಾರದ) ನೌಕರರು ನನ್ನನ್ನು ತಡೆದರು. ನನ್ನ ಇಬ್ಬರು ಗಂಡುಮಕ್ಕಳನ್ನು ನಿಂದಿಸಿದರು. ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ದಿಯೋಘರ್ ಡಿಸಿಯ ಸೂಚನೆಯಲ್ಲಿ ಅವರು ನನ್ನ ಕೆಲಸಕ್ಕೆ ಅಡ್ಡಿಪಡಿಸಿದರು. ಮರುದಿನ ಜಿಲ್ಲಾಧಿಕಾರಿಯವರು ದಿಯೋಘರ್ ವಿಮಾನ ನಿಲ್ದಾಣದ ಸುರಕ್ಷಿತ ಡಿಆರ್‌ಡಿಒ ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ನನಗೆ ತಿಳಿದಿತ್ತು. ಅಲ್ಲಿಗೆ ಪಿಎಂಒ ಅನುಮತಿಯ ನಂತರ ಮಾತ್ರ ಹೋಗಬಹುದು” ಎಂದು ದೆಹಲಿ ದುಬೆ ಆಪಾದಿಸಿದ್ದಾರೆ.

ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ದುಬೆ ಮತ್ತು ಭಜಂತ್ರಿ ನಡುವೆ ಟ್ವಿಟ್ಟರ್ ವಾರ್‌ ನಡೆದಿದೆ. ದುಬೆ: “…ನೀವು ವಿಮಾನ ನಿಲ್ದಾಣದೊಳಗೆ ಹೇಗೆ ಬಂದಿರಿ? ಯಾವ ಅಧಿಕಾರದ ಅಡಿಯಲ್ಲಿ ಬಂದಿರಿ? ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಹತಾಶರಾಗಿದ್ದೀರಿ”.

ಇದನ್ನೂ ಓದಿರಿ: ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಭಜಂತ್ರಿ: ಇದಕ್ಕೆ ಅಧಿಕಾರ ಹೊಂದಿದ್ದೇನೆ. ಪ್ರವೇಶಕ್ಕಾಗಿ ಗೇಟ್ ಪಾಸ್ ಇದೆ.

ದುಬೆ: “ಎಟಿಸಿ ಟವರ್‌ ಪ್ರವೇಶಿಸಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಎಲ್ಲಾ ಮಾನದಂಡಗಳನ್ನು ಉಲ್ಲಂಘಿಸಿದ್ದೀರಿ”.

ಭಜಂತ್ರಿ ಆರೋಪವನ್ನು ತಿರಸ್ಕರಿಸಿದ್ದಾರೆ. ಅಧಿಕಾರಿ ರಾಷ್ಟ್ರೀಯ ಭದ್ರತೆಯನ್ನು ಉಲ್ಲಂಘಿಸಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.

ಎಟಿಸಿ ಆವರಣವನ್ನು ಪ್ರವೇಶಿಸಲು, ಒಬ್ಬ ವ್ಯಕ್ತಿಗೆ ಏರೋಡ್ರೋಮ್ ಎಂಟ್ರಿ ಪರ್ಮಿಟ್ (AEP) ಅಗತ್ಯವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....