Homeಮುಖಪುಟಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ಆಗಸ್ಟ್ 31ರಂದು ದಿಯೋಘರ್ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ‘ಬಲವಂತವಾಗಿ’ ಫ್ಲೈಟ್ ಕ್ಲಿಯರೆನ್ಸ್ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ, ಮನೋಜ್ ತಿವಾರಿ, ದುಬೆ ಅವರ ಇಬ್ಬರು ಪುತ್ರರು ಮತ್ತು ಇತರರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದಾದ ನಂತರ ದುಬೆ ಅವರ ದೂರಿನ ಮೇರೆಗೆ ದೆಹಲಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣದ ‘ನಿರ್ಬಂಧಿತ’ ಪ್ರದೇಶವನ್ನು ಪ್ರವೇಶಿಸುವ ಮೂಲಕ ‘ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡಿದ್ದಾರೆ’ ಎಂದು ದಿಯೋಘರ್ ಡೆಪ್ಯೂಟಿ ಕಮಿಷನರ್ ಮತ್ತು ಜಾರ್ಖಂಡ್ ಪೊಲೀಸ್ ಅಧಿಕಾರಿಗಳ ವಿರುದ್ಧ ದೇಶದ್ರೋಹದ ಆರೋಪವನ್ನು ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿ ಪೊಲೀಸರು ದಿಯೋಘರ್‌ನಲ್ಲಿರುವ ಕುಂದಾ ಪೊಲೀಸ್ ಠಾಣೆಗೆ ತನಿಖೆಗಾಗಿ ಎಫ್‌ಐಆರ್‌ ಕಳುಹಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣ ಸಲಹಾ ಸಮಿತಿಯ ಅಧ್ಯಕ್ಷ ಸಂಸದ ನಿಶಿಕಾಂತ್ ದುಬೆ ಅವರು ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 124A (ದೇಶದ್ರೋಹ), 353 (ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿ), 448 (ಮನೆ ಅತಿಕ್ರಮಣ), 201 (ಸಾಕ್ಷಾಧಾರಗಳ ಕಣ್ಮರೆಗೆ ಕಾರಣ), 506 (ಅಪರಾಧ ಬೆದರಿಕೆ), 120 ಬಿ (ಅಪರಾಧದ ಪಿತೂರಿ) ಮತ್ತು ಅಧಿಕಾರಿಗಳ ರಹಸ್ಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಯೋಘರ್ ಡೆಪ್ಯುಟಿ ಕಮಿಷನರ್ ಮಂಜುನಾಥ್ ಭಜಂತ್ರಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು (ಎಫ್‌ಐಆರ್) ಒಂದು ಅಸಂಬದ್ಧ ಮತ್ತು ಶೇ.100ರಷ್ಟು ಕಟ್ಟುಕಥೆಯಾಗಿದೆ. ಅವರು ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ. ತನಿಖೆಯಲ್ಲಿ ಎಲ್ಲವೂ ಬಹಿರಂಗವಾಗುತ್ತದೆ” ಎಂದಿದ್ದಾರೆ.

ಎಟಿಸಿ ಕೋಣೆಗೆ ಪ್ರವೇಶಿಸುವ ಮೂಲಕ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಕ್ಲಿಯರೆನ್ಸ್‌ ಕೊಡುವಂತೆ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಭದ್ರತಾ ಉಸ್ತುವಾರಿ ಸುಮನ್ ಆನಂದ್ ನೀಡಿದ ದೂರಿನ ಮೇರೆಗೆ ಸೆಪ್ಟೆಂಬರ್ 1ರಂದು ಕುಂದಾ ಪೊಲೀಸ್ ಠಾಣೆಯಲ್ಲಿ ದುಬೆ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ದಿಯೋಘರ್‌ನಿಂದ ಟೇಕಾಫ್ ಮಾಡಲು ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ನಿಂದ ಬಲವಂತವಾಗಿ ಕ್ಲಿಯರೆನ್ಸ್ ತೆಗೆದುಕೊಂಡ ಆರೋಪದ ಮೇಲೆ ಸಂಸದರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆಗಸ್ಟ್ 31ರಂದು ವಿಮಾನ ನಿಲ್ದಾಣದಲ್ಲಿ ರಾತ್ರಿ ಟೇಕ್-ಆಫ್ ಅಥವಾ ಲ್ಯಾಂಡಿಂಗ್ ಸೌಲಭ್ಯವಿಲ್ಲ. ಸೆಪ್ಟಂಬರ್ 1 ರಂದು ಭದ್ರತಾ ಪ್ರಭಾರಿ ಸುಮನ್ ಆನಂದ್ ದೂರು ನೀಡಿದ್ದರು.

ಡಿಸಿ ಭಜಂತ್ರಿಯವರು ಜಾರ್ಖಂಡ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದು, “ದುಬೆ ಮತ್ತು ಇತರರು ಎಟಿಸಿ ಕೊಠಡಿಯೊಳಗೆ ಬಂದರು. ಕ್ಲಿಯರೆನ್ಸ್‌ಗಾಗಿ ಒತ್ತಡ ಹೇರಿದರು” ಎಂದು ಆರೋಪಿಸಿದ್ದಾರೆ.

ಇದಾದ ಬಳಿಕ ದುಬೆ ಅವರು ದೂರು ನೀಡಿದ್ದು ದೆಹಲಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 31 ರಂದು ದೆಹಲಿಗೆ ಪ್ರಯಾಣಿಸಬೇಕಾಗಿತ್ತು. ಭದ್ರತಾ ತಪಾಸಣೆಯ ನಂತರ ಆಗಸ್ಟ್ 31ರಂದು ಸಂಜೆ 5.25 ಫ್ಲೈಟ್ ಹತ್ತಲಾಯಿತು. ನೈಟ್ ಲ್ಯಾಂಡಿಂಗ್ ಸೌಲಭ್ಯಗಳ ಕೊರತೆಯ ಬಗ್ಗೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಪ್ರಕರಣವೊಂದು ಬಾಕಿ ಉಳಿದಿರುವುದರಿಂದ ಮತ್ತು ಸಾಕಷ್ಟು ಸಮಯವಿಲ್ಲದ ಕಾರಣ, ಈ ವಿಷಯದ ಕುರಿತು ಚರ್ಚಿಸಲು ನಾನು ವಿಮಾನ ನಿಲ್ದಾಣದ ನಿರ್ದೇಶಕರ ಕಚೇರಿಗೆ ಬರಿಗಾಲಿನಲ್ಲಿ ನಡೆದಿದ್ದೇನೆ ಎಂದು ದುಬೆ ಹೇಳಿದ್ದಾರೆ.

“ನಾನು ಹೋಗುತ್ತಿರುವಾಗ, ಜಾರ್ಖಂಡ್ ಪೊಲೀಸರು ಮತ್ತು (ರಾಜ್ಯ ಸರ್ಕಾರದ) ನೌಕರರು ನನ್ನನ್ನು ತಡೆದರು. ನನ್ನ ಇಬ್ಬರು ಗಂಡುಮಕ್ಕಳನ್ನು ನಿಂದಿಸಿದರು. ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ದಿಯೋಘರ್ ಡಿಸಿಯ ಸೂಚನೆಯಲ್ಲಿ ಅವರು ನನ್ನ ಕೆಲಸಕ್ಕೆ ಅಡ್ಡಿಪಡಿಸಿದರು. ಮರುದಿನ ಜಿಲ್ಲಾಧಿಕಾರಿಯವರು ದಿಯೋಘರ್ ವಿಮಾನ ನಿಲ್ದಾಣದ ಸುರಕ್ಷಿತ ಡಿಆರ್‌ಡಿಒ ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ನನಗೆ ತಿಳಿದಿತ್ತು. ಅಲ್ಲಿಗೆ ಪಿಎಂಒ ಅನುಮತಿಯ ನಂತರ ಮಾತ್ರ ಹೋಗಬಹುದು” ಎಂದು ದೆಹಲಿ ದುಬೆ ಆಪಾದಿಸಿದ್ದಾರೆ.

ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ದುಬೆ ಮತ್ತು ಭಜಂತ್ರಿ ನಡುವೆ ಟ್ವಿಟ್ಟರ್ ವಾರ್‌ ನಡೆದಿದೆ. ದುಬೆ: “…ನೀವು ವಿಮಾನ ನಿಲ್ದಾಣದೊಳಗೆ ಹೇಗೆ ಬಂದಿರಿ? ಯಾವ ಅಧಿಕಾರದ ಅಡಿಯಲ್ಲಿ ಬಂದಿರಿ? ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಹತಾಶರಾಗಿದ್ದೀರಿ”.

ಇದನ್ನೂ ಓದಿರಿ: ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಭಜಂತ್ರಿ: ಇದಕ್ಕೆ ಅಧಿಕಾರ ಹೊಂದಿದ್ದೇನೆ. ಪ್ರವೇಶಕ್ಕಾಗಿ ಗೇಟ್ ಪಾಸ್ ಇದೆ.

ದುಬೆ: “ಎಟಿಸಿ ಟವರ್‌ ಪ್ರವೇಶಿಸಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಎಲ್ಲಾ ಮಾನದಂಡಗಳನ್ನು ಉಲ್ಲಂಘಿಸಿದ್ದೀರಿ”.

ಭಜಂತ್ರಿ ಆರೋಪವನ್ನು ತಿರಸ್ಕರಿಸಿದ್ದಾರೆ. ಅಧಿಕಾರಿ ರಾಷ್ಟ್ರೀಯ ಭದ್ರತೆಯನ್ನು ಉಲ್ಲಂಘಿಸಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.

ಎಟಿಸಿ ಆವರಣವನ್ನು ಪ್ರವೇಶಿಸಲು, ಒಬ್ಬ ವ್ಯಕ್ತಿಗೆ ಏರೋಡ್ರೋಮ್ ಎಂಟ್ರಿ ಪರ್ಮಿಟ್ (AEP) ಅಗತ್ಯವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...