Homeಮುಖಪುಟಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ಆಗಸ್ಟ್ 31ರಂದು ದಿಯೋಘರ್ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ‘ಬಲವಂತವಾಗಿ’ ಫ್ಲೈಟ್ ಕ್ಲಿಯರೆನ್ಸ್ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ, ಮನೋಜ್ ತಿವಾರಿ, ದುಬೆ ಅವರ ಇಬ್ಬರು ಪುತ್ರರು ಮತ್ತು ಇತರರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದಾದ ನಂತರ ದುಬೆ ಅವರ ದೂರಿನ ಮೇರೆಗೆ ದೆಹಲಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣದ ‘ನಿರ್ಬಂಧಿತ’ ಪ್ರದೇಶವನ್ನು ಪ್ರವೇಶಿಸುವ ಮೂಲಕ ‘ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡಿದ್ದಾರೆ’ ಎಂದು ದಿಯೋಘರ್ ಡೆಪ್ಯೂಟಿ ಕಮಿಷನರ್ ಮತ್ತು ಜಾರ್ಖಂಡ್ ಪೊಲೀಸ್ ಅಧಿಕಾರಿಗಳ ವಿರುದ್ಧ ದೇಶದ್ರೋಹದ ಆರೋಪವನ್ನು ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿ ಪೊಲೀಸರು ದಿಯೋಘರ್‌ನಲ್ಲಿರುವ ಕುಂದಾ ಪೊಲೀಸ್ ಠಾಣೆಗೆ ತನಿಖೆಗಾಗಿ ಎಫ್‌ಐಆರ್‌ ಕಳುಹಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣ ಸಲಹಾ ಸಮಿತಿಯ ಅಧ್ಯಕ್ಷ ಸಂಸದ ನಿಶಿಕಾಂತ್ ದುಬೆ ಅವರು ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 124A (ದೇಶದ್ರೋಹ), 353 (ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿ), 448 (ಮನೆ ಅತಿಕ್ರಮಣ), 201 (ಸಾಕ್ಷಾಧಾರಗಳ ಕಣ್ಮರೆಗೆ ಕಾರಣ), 506 (ಅಪರಾಧ ಬೆದರಿಕೆ), 120 ಬಿ (ಅಪರಾಧದ ಪಿತೂರಿ) ಮತ್ತು ಅಧಿಕಾರಿಗಳ ರಹಸ್ಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಯೋಘರ್ ಡೆಪ್ಯುಟಿ ಕಮಿಷನರ್ ಮಂಜುನಾಥ್ ಭಜಂತ್ರಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು (ಎಫ್‌ಐಆರ್) ಒಂದು ಅಸಂಬದ್ಧ ಮತ್ತು ಶೇ.100ರಷ್ಟು ಕಟ್ಟುಕಥೆಯಾಗಿದೆ. ಅವರು ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ. ತನಿಖೆಯಲ್ಲಿ ಎಲ್ಲವೂ ಬಹಿರಂಗವಾಗುತ್ತದೆ” ಎಂದಿದ್ದಾರೆ.

ಎಟಿಸಿ ಕೋಣೆಗೆ ಪ್ರವೇಶಿಸುವ ಮೂಲಕ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಕ್ಲಿಯರೆನ್ಸ್‌ ಕೊಡುವಂತೆ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಭದ್ರತಾ ಉಸ್ತುವಾರಿ ಸುಮನ್ ಆನಂದ್ ನೀಡಿದ ದೂರಿನ ಮೇರೆಗೆ ಸೆಪ್ಟೆಂಬರ್ 1ರಂದು ಕುಂದಾ ಪೊಲೀಸ್ ಠಾಣೆಯಲ್ಲಿ ದುಬೆ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ದಿಯೋಘರ್‌ನಿಂದ ಟೇಕಾಫ್ ಮಾಡಲು ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ನಿಂದ ಬಲವಂತವಾಗಿ ಕ್ಲಿಯರೆನ್ಸ್ ತೆಗೆದುಕೊಂಡ ಆರೋಪದ ಮೇಲೆ ಸಂಸದರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆಗಸ್ಟ್ 31ರಂದು ವಿಮಾನ ನಿಲ್ದಾಣದಲ್ಲಿ ರಾತ್ರಿ ಟೇಕ್-ಆಫ್ ಅಥವಾ ಲ್ಯಾಂಡಿಂಗ್ ಸೌಲಭ್ಯವಿಲ್ಲ. ಸೆಪ್ಟಂಬರ್ 1 ರಂದು ಭದ್ರತಾ ಪ್ರಭಾರಿ ಸುಮನ್ ಆನಂದ್ ದೂರು ನೀಡಿದ್ದರು.

ಡಿಸಿ ಭಜಂತ್ರಿಯವರು ಜಾರ್ಖಂಡ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದು, “ದುಬೆ ಮತ್ತು ಇತರರು ಎಟಿಸಿ ಕೊಠಡಿಯೊಳಗೆ ಬಂದರು. ಕ್ಲಿಯರೆನ್ಸ್‌ಗಾಗಿ ಒತ್ತಡ ಹೇರಿದರು” ಎಂದು ಆರೋಪಿಸಿದ್ದಾರೆ.

ಇದಾದ ಬಳಿಕ ದುಬೆ ಅವರು ದೂರು ನೀಡಿದ್ದು ದೆಹಲಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 31 ರಂದು ದೆಹಲಿಗೆ ಪ್ರಯಾಣಿಸಬೇಕಾಗಿತ್ತು. ಭದ್ರತಾ ತಪಾಸಣೆಯ ನಂತರ ಆಗಸ್ಟ್ 31ರಂದು ಸಂಜೆ 5.25 ಫ್ಲೈಟ್ ಹತ್ತಲಾಯಿತು. ನೈಟ್ ಲ್ಯಾಂಡಿಂಗ್ ಸೌಲಭ್ಯಗಳ ಕೊರತೆಯ ಬಗ್ಗೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಪ್ರಕರಣವೊಂದು ಬಾಕಿ ಉಳಿದಿರುವುದರಿಂದ ಮತ್ತು ಸಾಕಷ್ಟು ಸಮಯವಿಲ್ಲದ ಕಾರಣ, ಈ ವಿಷಯದ ಕುರಿತು ಚರ್ಚಿಸಲು ನಾನು ವಿಮಾನ ನಿಲ್ದಾಣದ ನಿರ್ದೇಶಕರ ಕಚೇರಿಗೆ ಬರಿಗಾಲಿನಲ್ಲಿ ನಡೆದಿದ್ದೇನೆ ಎಂದು ದುಬೆ ಹೇಳಿದ್ದಾರೆ.

“ನಾನು ಹೋಗುತ್ತಿರುವಾಗ, ಜಾರ್ಖಂಡ್ ಪೊಲೀಸರು ಮತ್ತು (ರಾಜ್ಯ ಸರ್ಕಾರದ) ನೌಕರರು ನನ್ನನ್ನು ತಡೆದರು. ನನ್ನ ಇಬ್ಬರು ಗಂಡುಮಕ್ಕಳನ್ನು ನಿಂದಿಸಿದರು. ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ದಿಯೋಘರ್ ಡಿಸಿಯ ಸೂಚನೆಯಲ್ಲಿ ಅವರು ನನ್ನ ಕೆಲಸಕ್ಕೆ ಅಡ್ಡಿಪಡಿಸಿದರು. ಮರುದಿನ ಜಿಲ್ಲಾಧಿಕಾರಿಯವರು ದಿಯೋಘರ್ ವಿಮಾನ ನಿಲ್ದಾಣದ ಸುರಕ್ಷಿತ ಡಿಆರ್‌ಡಿಒ ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ನನಗೆ ತಿಳಿದಿತ್ತು. ಅಲ್ಲಿಗೆ ಪಿಎಂಒ ಅನುಮತಿಯ ನಂತರ ಮಾತ್ರ ಹೋಗಬಹುದು” ಎಂದು ದೆಹಲಿ ದುಬೆ ಆಪಾದಿಸಿದ್ದಾರೆ.

ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ದುಬೆ ಮತ್ತು ಭಜಂತ್ರಿ ನಡುವೆ ಟ್ವಿಟ್ಟರ್ ವಾರ್‌ ನಡೆದಿದೆ. ದುಬೆ: “…ನೀವು ವಿಮಾನ ನಿಲ್ದಾಣದೊಳಗೆ ಹೇಗೆ ಬಂದಿರಿ? ಯಾವ ಅಧಿಕಾರದ ಅಡಿಯಲ್ಲಿ ಬಂದಿರಿ? ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಹತಾಶರಾಗಿದ್ದೀರಿ”.

ಇದನ್ನೂ ಓದಿರಿ: ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಭಜಂತ್ರಿ: ಇದಕ್ಕೆ ಅಧಿಕಾರ ಹೊಂದಿದ್ದೇನೆ. ಪ್ರವೇಶಕ್ಕಾಗಿ ಗೇಟ್ ಪಾಸ್ ಇದೆ.

ದುಬೆ: “ಎಟಿಸಿ ಟವರ್‌ ಪ್ರವೇಶಿಸಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಎಲ್ಲಾ ಮಾನದಂಡಗಳನ್ನು ಉಲ್ಲಂಘಿಸಿದ್ದೀರಿ”.

ಭಜಂತ್ರಿ ಆರೋಪವನ್ನು ತಿರಸ್ಕರಿಸಿದ್ದಾರೆ. ಅಧಿಕಾರಿ ರಾಷ್ಟ್ರೀಯ ಭದ್ರತೆಯನ್ನು ಉಲ್ಲಂಘಿಸಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.

ಎಟಿಸಿ ಆವರಣವನ್ನು ಪ್ರವೇಶಿಸಲು, ಒಬ್ಬ ವ್ಯಕ್ತಿಗೆ ಏರೋಡ್ರೋಮ್ ಎಂಟ್ರಿ ಪರ್ಮಿಟ್ (AEP) ಅಗತ್ಯವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...