Homeಮುಖಪುಟಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

ಏರ್‌ಪೋರ್ಟ್ ವಿವಾದದಲ್ಲಿ ಬಿಜೆಪಿ ಸಂಸದ; ದಿಯೋಘರ್‌ ಡಿಸಿ ವಿರುದ್ಧ ದೆಹಲಿಯಲ್ಲಿ ದೇಶದ್ರೋಹ ಪ್ರಕರಣ ದಾಖಲು

- Advertisement -
- Advertisement -

ಆಗಸ್ಟ್ 31ರಂದು ದಿಯೋಘರ್ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ‘ಬಲವಂತವಾಗಿ’ ಫ್ಲೈಟ್ ಕ್ಲಿಯರೆನ್ಸ್ ತೆಗೆದುಕೊಂಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಸಂಸದರಾದ ನಿಶಿಕಾಂತ್ ದುಬೆ, ಮನೋಜ್ ತಿವಾರಿ, ದುಬೆ ಅವರ ಇಬ್ಬರು ಪುತ್ರರು ಮತ್ತು ಇತರರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇದಾದ ನಂತರ ದುಬೆ ಅವರ ದೂರಿನ ಮೇರೆಗೆ ದೆಹಲಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣದ ‘ನಿರ್ಬಂಧಿತ’ ಪ್ರದೇಶವನ್ನು ಪ್ರವೇಶಿಸುವ ಮೂಲಕ ‘ರಾಷ್ಟ್ರೀಯ ಭದ್ರತೆಯೊಂದಿಗೆ ಆಟವಾಡಿದ್ದಾರೆ’ ಎಂದು ದಿಯೋಘರ್ ಡೆಪ್ಯೂಟಿ ಕಮಿಷನರ್ ಮತ್ತು ಜಾರ್ಖಂಡ್ ಪೊಲೀಸ್ ಅಧಿಕಾರಿಗಳ ವಿರುದ್ಧ ದೇಶದ್ರೋಹದ ಆರೋಪವನ್ನು ಹೊರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿ ಪೊಲೀಸರು ದಿಯೋಘರ್‌ನಲ್ಲಿರುವ ಕುಂದಾ ಪೊಲೀಸ್ ಠಾಣೆಗೆ ತನಿಖೆಗಾಗಿ ಎಫ್‌ಐಆರ್‌ ಕಳುಹಿಸಿದ್ದಾರೆ. ದಿಯೋಘರ್ ವಿಮಾನ ನಿಲ್ದಾಣ ಸಲಹಾ ಸಮಿತಿಯ ಅಧ್ಯಕ್ಷ ಸಂಸದ ನಿಶಿಕಾಂತ್ ದುಬೆ ಅವರು ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 124A (ದೇಶದ್ರೋಹ), 353 (ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿ), 448 (ಮನೆ ಅತಿಕ್ರಮಣ), 201 (ಸಾಕ್ಷಾಧಾರಗಳ ಕಣ್ಮರೆಗೆ ಕಾರಣ), 506 (ಅಪರಾಧ ಬೆದರಿಕೆ), 120 ಬಿ (ಅಪರಾಧದ ಪಿತೂರಿ) ಮತ್ತು ಅಧಿಕಾರಿಗಳ ರಹಸ್ಯ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಯೋಘರ್ ಡೆಪ್ಯುಟಿ ಕಮಿಷನರ್ ಮಂಜುನಾಥ್ ಭಜಂತ್ರಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು (ಎಫ್‌ಐಆರ್) ಒಂದು ಅಸಂಬದ್ಧ ಮತ್ತು ಶೇ.100ರಷ್ಟು ಕಟ್ಟುಕಥೆಯಾಗಿದೆ. ಅವರು ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ. ತನಿಖೆಯಲ್ಲಿ ಎಲ್ಲವೂ ಬಹಿರಂಗವಾಗುತ್ತದೆ” ಎಂದಿದ್ದಾರೆ.

ಎಟಿಸಿ ಕೋಣೆಗೆ ಪ್ರವೇಶಿಸುವ ಮೂಲಕ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ಕ್ಲಿಯರೆನ್ಸ್‌ ಕೊಡುವಂತೆ ಅಧಿಕಾರಿಗಳಿಗೆ ಒತ್ತಡ ಹೇರಿದ್ದಾರೆ ಎಂದು ಭದ್ರತಾ ಉಸ್ತುವಾರಿ ಸುಮನ್ ಆನಂದ್ ನೀಡಿದ ದೂರಿನ ಮೇರೆಗೆ ಸೆಪ್ಟೆಂಬರ್ 1ರಂದು ಕುಂದಾ ಪೊಲೀಸ್ ಠಾಣೆಯಲ್ಲಿ ದುಬೆ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ದಿಯೋಘರ್‌ನಿಂದ ಟೇಕಾಫ್ ಮಾಡಲು ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ನಿಂದ ಬಲವಂತವಾಗಿ ಕ್ಲಿಯರೆನ್ಸ್ ತೆಗೆದುಕೊಂಡ ಆರೋಪದ ಮೇಲೆ ಸಂಸದರ ವಿರುದ್ಧ ಜಾರ್ಖಂಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆಗಸ್ಟ್ 31ರಂದು ವಿಮಾನ ನಿಲ್ದಾಣದಲ್ಲಿ ರಾತ್ರಿ ಟೇಕ್-ಆಫ್ ಅಥವಾ ಲ್ಯಾಂಡಿಂಗ್ ಸೌಲಭ್ಯವಿಲ್ಲ. ಸೆಪ್ಟಂಬರ್ 1 ರಂದು ಭದ್ರತಾ ಪ್ರಭಾರಿ ಸುಮನ್ ಆನಂದ್ ದೂರು ನೀಡಿದ್ದರು.

ಡಿಸಿ ಭಜಂತ್ರಿಯವರು ಜಾರ್ಖಂಡ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿದ್ದು, “ದುಬೆ ಮತ್ತು ಇತರರು ಎಟಿಸಿ ಕೊಠಡಿಯೊಳಗೆ ಬಂದರು. ಕ್ಲಿಯರೆನ್ಸ್‌ಗಾಗಿ ಒತ್ತಡ ಹೇರಿದರು” ಎಂದು ಆರೋಪಿಸಿದ್ದಾರೆ.

ಇದಾದ ಬಳಿಕ ದುಬೆ ಅವರು ದೂರು ನೀಡಿದ್ದು ದೆಹಲಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆಗಸ್ಟ್ 31 ರಂದು ದೆಹಲಿಗೆ ಪ್ರಯಾಣಿಸಬೇಕಾಗಿತ್ತು. ಭದ್ರತಾ ತಪಾಸಣೆಯ ನಂತರ ಆಗಸ್ಟ್ 31ರಂದು ಸಂಜೆ 5.25 ಫ್ಲೈಟ್ ಹತ್ತಲಾಯಿತು. ನೈಟ್ ಲ್ಯಾಂಡಿಂಗ್ ಸೌಲಭ್ಯಗಳ ಕೊರತೆಯ ಬಗ್ಗೆ ಜಾರ್ಖಂಡ್ ಹೈಕೋರ್ಟ್‌ನಲ್ಲಿ ಪ್ರಕರಣವೊಂದು ಬಾಕಿ ಉಳಿದಿರುವುದರಿಂದ ಮತ್ತು ಸಾಕಷ್ಟು ಸಮಯವಿಲ್ಲದ ಕಾರಣ, ಈ ವಿಷಯದ ಕುರಿತು ಚರ್ಚಿಸಲು ನಾನು ವಿಮಾನ ನಿಲ್ದಾಣದ ನಿರ್ದೇಶಕರ ಕಚೇರಿಗೆ ಬರಿಗಾಲಿನಲ್ಲಿ ನಡೆದಿದ್ದೇನೆ ಎಂದು ದುಬೆ ಹೇಳಿದ್ದಾರೆ.

“ನಾನು ಹೋಗುತ್ತಿರುವಾಗ, ಜಾರ್ಖಂಡ್ ಪೊಲೀಸರು ಮತ್ತು (ರಾಜ್ಯ ಸರ್ಕಾರದ) ನೌಕರರು ನನ್ನನ್ನು ತಡೆದರು. ನನ್ನ ಇಬ್ಬರು ಗಂಡುಮಕ್ಕಳನ್ನು ನಿಂದಿಸಿದರು. ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ದಿಯೋಘರ್ ಡಿಸಿಯ ಸೂಚನೆಯಲ್ಲಿ ಅವರು ನನ್ನ ಕೆಲಸಕ್ಕೆ ಅಡ್ಡಿಪಡಿಸಿದರು. ಮರುದಿನ ಜಿಲ್ಲಾಧಿಕಾರಿಯವರು ದಿಯೋಘರ್ ವಿಮಾನ ನಿಲ್ದಾಣದ ಸುರಕ್ಷಿತ ಡಿಆರ್‌ಡಿಒ ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ನನಗೆ ತಿಳಿದಿತ್ತು. ಅಲ್ಲಿಗೆ ಪಿಎಂಒ ಅನುಮತಿಯ ನಂತರ ಮಾತ್ರ ಹೋಗಬಹುದು” ಎಂದು ದೆಹಲಿ ದುಬೆ ಆಪಾದಿಸಿದ್ದಾರೆ.

ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ದುಬೆ ಮತ್ತು ಭಜಂತ್ರಿ ನಡುವೆ ಟ್ವಿಟ್ಟರ್ ವಾರ್‌ ನಡೆದಿದೆ. ದುಬೆ: “…ನೀವು ವಿಮಾನ ನಿಲ್ದಾಣದೊಳಗೆ ಹೇಗೆ ಬಂದಿರಿ? ಯಾವ ಅಧಿಕಾರದ ಅಡಿಯಲ್ಲಿ ಬಂದಿರಿ? ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಹತಾಶರಾಗಿದ್ದೀರಿ”.

ಇದನ್ನೂ ಓದಿರಿ: ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ‘ರೇಪ್‌’ ಹೇಳಿಕೆಗೆ ಕಾಂಗ್ರೆಸ್‌ ಆಕ್ರೋಶ

ಭಜಂತ್ರಿ: ಇದಕ್ಕೆ ಅಧಿಕಾರ ಹೊಂದಿದ್ದೇನೆ. ಪ್ರವೇಶಕ್ಕಾಗಿ ಗೇಟ್ ಪಾಸ್ ಇದೆ.

ದುಬೆ: “ಎಟಿಸಿ ಟವರ್‌ ಪ್ರವೇಶಿಸಲು ನಿಮಗೆ ಅನುಮತಿ ನೀಡಿದವರು ಯಾರು? ನೀವು ಎಲ್ಲಾ ಮಾನದಂಡಗಳನ್ನು ಉಲ್ಲಂಘಿಸಿದ್ದೀರಿ”.

ಭಜಂತ್ರಿ ಆರೋಪವನ್ನು ತಿರಸ್ಕರಿಸಿದ್ದಾರೆ. ಅಧಿಕಾರಿ ರಾಷ್ಟ್ರೀಯ ಭದ್ರತೆಯನ್ನು ಉಲ್ಲಂಘಿಸಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ.

ಎಟಿಸಿ ಆವರಣವನ್ನು ಪ್ರವೇಶಿಸಲು, ಒಬ್ಬ ವ್ಯಕ್ತಿಗೆ ಏರೋಡ್ರೋಮ್ ಎಂಟ್ರಿ ಪರ್ಮಿಟ್ (AEP) ಅಗತ್ಯವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....