Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪ್ಪ-ಮಗನ (ಎಚ್‌ಡಿ ರೇವಣ್ಣ-ಪ್ರಜ್ವಲ್ ರೇವಣ್ಣ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪತ್ನಿ ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ನಾನು ಮನೆಯಲ್ಲಿ ಇದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಜೊತೆ ಹಾಗೂ ಮಗಳ ಜೊತೆಗೆ ಪ್ರಚೋದನಕಾರಿಯಾಗಿ ಮಾತನಾಡಿದ್ದು, ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ನಂತರ ನನಗೆ ಜೀವಭಯವಿದೆ. ಆ ವಿಡಿಯೋ ಹೊರಗಡೆ ಬಂದರೆ ಎಂಬ ಆತಂಕವಿದ್ದು, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರು ನೀಡಿದ್ದಾರೆ.

ಮಾಜಿ ಸಚಿವ ಎಚ್‌.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ಪ-ಮಗನಿಗೆ ಈಗ ಸಂಕಷ್ಟ ಎದುರಾಗಿದೆ.

ದೂರಿನಲ್ಲಿ ಏನಿದೆ?

‘ನನ್ನ ಪತಿ ಮಾಜಿ ಶಾಸಕರಾದ ಹೆಚ್‌ ಡಿ ರೇವಣ್ಣ ರವರ ಮಾಲೀಕತ್ವದ ನಾಗಾಶಾಪುರದ ಹಾಲಿನ ಡೈರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ರೇವಣ್ಣರವರು ನನಗೆ ಬಿಸಿಎಂ ಲೇಡಿಸ್‌ ಹಾಸ್ಟೇಲ್‌ ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. ಜತೆಗೆ, ನಾನು ಭಾವನಿ ರೇವಣ್ಣ ಅವರಿಗೆ ಹತ್ತಿರದ ಸಂಬಂಧಿಯೂ ಆಗಿದ್ದು, 2013ರಲ್ಲಿ ರೇವಣ್ಣ ಆಗಾಗ ಮನೆಗೆ ಬರುವಂತೆ ಹೇಳುತ್ತಿದ್ದರು; ಅವರ ಮಾತಿನಂತೆ ಹಾಸ್ಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದೆ’ ಎಂದು ಹೇಳಿದ್ದಾರೆ.

‘ರೇವಣ್ಣ ಪುತ್ರ ಸೂರಜ್‌ ಮದುವೆ ಸಮಯದಲ್ಲಿ ಮನೆ ಕೆಲಸ ಮಾಡಿಕೊಡುವಂತೆ ಕರೆಸಿಕೊಂಡಿದ್ದರು. ಅಲ್ಲಿ ಮೂರುವರೆ ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದೆ, ಕೆಲಸಕ್ಕೆ ಸೇರಿಕೊಂಡ 4 ತಿಂಗಳ ನಂತರ ಅವರು ತಮ್ಮ ಕೊಠಡಿಗೆ ಬರುವಂತೆ ಅಹ್ವಾನಿಸುತ್ತಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ 6 ಜನ ಹೆಣ್ಣು ಮಕ್ಕಳು ಪ್ರಜ್ವಲ್‌ ರೇವಣ್ಣ ಬಂದಾಗ ನಮಗೆ ಭಯವಾಗುತ್ತದೆ ಎಂದು ಹೇಳುತ್ತಿದ್ದರು. ಕೆಲಸ ಮಾಡುತ್ತಿದ್ದ ಹುಡುಗರೂ ಸಹ ಹೆಣ್ಣು ಮಕ್ಕಳಿಗೆ ಎಚ್ಚರವಾಗಿರುವಂತೆ ತಿಳಿಸುತ್ತಿದ್ದರು. ರೇವಣ್ಣ ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಸ್ಟೋರ್‌ ರೂಮ್‌ನಲ್ಲಿ ನನ್ನ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು, ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು’ ಎಂದು ಹೇಳಿದ್ದಾರೆ.

“ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟತ್ತಾ ಹೊಟ್ಟೆ ಭಾಗದಲ್ಲಿ ಜಿಗುಟುತ್ತಿದ್ದರು. ಎಣ್ಣೆ ಹಚ್ಚಲು ಶೋಭಾ ರವರನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಬಳಿ ಹೇಳಿ ಕಳುಹಿಸುತ್ತಿದ್ದರು. ಹೀಗೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ಪೋನ್‌ ಮಾಡಿ, ಸುಮಾರು ಸಲ ವಿಡಿಯೋ ಕಾಲ್ ಮಾಡುತ್ತಿದ್ದರು. ನನ್ನ ಮಗಳ ಜೊತೆ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸುತ್ತಿದ್ದು, ಮಗಳು ಹೆದರಿಕೊಂಡು ನಂಬರ್‌ ಬ್ಲಾಕ್‌ ಮಾಡಿದ್ದಳು. ಆ ನಂತರ, ಹೆದರಿಕೊಂಡು ಕೆಲಸ ಬಿಟ್ಟು ಹೊರ ಬಂದಿದ್ದೆವು” ಎಂದು ತಿಳಿಸಿದ್ದಾರೆ.

“ಇತ್ತೀಚೆಗೆ ಜಿಲ್ಲೆಯಾದಂತ್ಯ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾಗುವ ಲೈಂಗಿಕ ದೌರ್ಜನ್ಯದ ವಿಡಿಯೋ ವಾಟ್ಸಾಪ್‌ ನಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೋಗಳು ನನಗೂ ಬಂದಿದ್ದು, ಚನ್ನರಾಯಪಟ್ಟಣ ರಸ್ತೆಯಲ್ಲಿ ಇರುವ ಗನ್ನಿಕಡ ಗ್ರಾಮದ ತೋಟದಲ್ಲಿ ಇರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಂದಿಗೆ ಪ್ರಜ್ವಲ್‌ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯ ವಿಡಿಯೋ ನೋಡಿ ನನಗೆ ಭಯವಾಗಿದೆ. ಪತಿ ಈಗ ನನ್ನ ಶೀಲವನ್ನು ಶಂಕಿಸುತ್ತಿದ್ದು, ನನ್ನ ವಿಡಿಯೋ ಬಂದರೆ ನಮ್ಮ ಗತಿ ಏನು ಎಂಬ ಬಗ್ಗೆ ಆತಂಕವಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅಗಿದ್ದು, ಮಹಿಳೆಯ ಮೇಲೆ ನಡೆದ ಲೈಂಗಿಕ ದೌಜನ್ಯಗಳ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ನಾನು ಮಾತನಾಡಿದ ನಂತರ ನನಗೆ ಜೀವ ಭಯ ಇದೆ. ಆದ್ದರಿಂದ, ನನಗೆ ಹಾಗೂ ಮಗಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ರೀತಿ ಕ್ರಮ ತಗೆದುಕೊಳ್ಳಬೇಕು” ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...