Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪ್ಪ-ಮಗನ (ಎಚ್‌ಡಿ ರೇವಣ್ಣ-ಪ್ರಜ್ವಲ್ ರೇವಣ್ಣ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪತ್ನಿ ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ನಾನು ಮನೆಯಲ್ಲಿ ಇದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಜೊತೆ ಹಾಗೂ ಮಗಳ ಜೊತೆಗೆ ಪ್ರಚೋದನಕಾರಿಯಾಗಿ ಮಾತನಾಡಿದ್ದು, ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ನಂತರ ನನಗೆ ಜೀವಭಯವಿದೆ. ಆ ವಿಡಿಯೋ ಹೊರಗಡೆ ಬಂದರೆ ಎಂಬ ಆತಂಕವಿದ್ದು, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರು ನೀಡಿದ್ದಾರೆ.

ಮಾಜಿ ಸಚಿವ ಎಚ್‌.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ಪ-ಮಗನಿಗೆ ಈಗ ಸಂಕಷ್ಟ ಎದುರಾಗಿದೆ.

ದೂರಿನಲ್ಲಿ ಏನಿದೆ?

‘ನನ್ನ ಪತಿ ಮಾಜಿ ಶಾಸಕರಾದ ಹೆಚ್‌ ಡಿ ರೇವಣ್ಣ ರವರ ಮಾಲೀಕತ್ವದ ನಾಗಾಶಾಪುರದ ಹಾಲಿನ ಡೈರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ರೇವಣ್ಣರವರು ನನಗೆ ಬಿಸಿಎಂ ಲೇಡಿಸ್‌ ಹಾಸ್ಟೇಲ್‌ ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. ಜತೆಗೆ, ನಾನು ಭಾವನಿ ರೇವಣ್ಣ ಅವರಿಗೆ ಹತ್ತಿರದ ಸಂಬಂಧಿಯೂ ಆಗಿದ್ದು, 2013ರಲ್ಲಿ ರೇವಣ್ಣ ಆಗಾಗ ಮನೆಗೆ ಬರುವಂತೆ ಹೇಳುತ್ತಿದ್ದರು; ಅವರ ಮಾತಿನಂತೆ ಹಾಸ್ಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದೆ’ ಎಂದು ಹೇಳಿದ್ದಾರೆ.

‘ರೇವಣ್ಣ ಪುತ್ರ ಸೂರಜ್‌ ಮದುವೆ ಸಮಯದಲ್ಲಿ ಮನೆ ಕೆಲಸ ಮಾಡಿಕೊಡುವಂತೆ ಕರೆಸಿಕೊಂಡಿದ್ದರು. ಅಲ್ಲಿ ಮೂರುವರೆ ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದೆ, ಕೆಲಸಕ್ಕೆ ಸೇರಿಕೊಂಡ 4 ತಿಂಗಳ ನಂತರ ಅವರು ತಮ್ಮ ಕೊಠಡಿಗೆ ಬರುವಂತೆ ಅಹ್ವಾನಿಸುತ್ತಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ 6 ಜನ ಹೆಣ್ಣು ಮಕ್ಕಳು ಪ್ರಜ್ವಲ್‌ ರೇವಣ್ಣ ಬಂದಾಗ ನಮಗೆ ಭಯವಾಗುತ್ತದೆ ಎಂದು ಹೇಳುತ್ತಿದ್ದರು. ಕೆಲಸ ಮಾಡುತ್ತಿದ್ದ ಹುಡುಗರೂ ಸಹ ಹೆಣ್ಣು ಮಕ್ಕಳಿಗೆ ಎಚ್ಚರವಾಗಿರುವಂತೆ ತಿಳಿಸುತ್ತಿದ್ದರು. ರೇವಣ್ಣ ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಸ್ಟೋರ್‌ ರೂಮ್‌ನಲ್ಲಿ ನನ್ನ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು, ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು’ ಎಂದು ಹೇಳಿದ್ದಾರೆ.

“ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟತ್ತಾ ಹೊಟ್ಟೆ ಭಾಗದಲ್ಲಿ ಜಿಗುಟುತ್ತಿದ್ದರು. ಎಣ್ಣೆ ಹಚ್ಚಲು ಶೋಭಾ ರವರನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಬಳಿ ಹೇಳಿ ಕಳುಹಿಸುತ್ತಿದ್ದರು. ಹೀಗೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ಪೋನ್‌ ಮಾಡಿ, ಸುಮಾರು ಸಲ ವಿಡಿಯೋ ಕಾಲ್ ಮಾಡುತ್ತಿದ್ದರು. ನನ್ನ ಮಗಳ ಜೊತೆ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸುತ್ತಿದ್ದು, ಮಗಳು ಹೆದರಿಕೊಂಡು ನಂಬರ್‌ ಬ್ಲಾಕ್‌ ಮಾಡಿದ್ದಳು. ಆ ನಂತರ, ಹೆದರಿಕೊಂಡು ಕೆಲಸ ಬಿಟ್ಟು ಹೊರ ಬಂದಿದ್ದೆವು” ಎಂದು ತಿಳಿಸಿದ್ದಾರೆ.

“ಇತ್ತೀಚೆಗೆ ಜಿಲ್ಲೆಯಾದಂತ್ಯ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾಗುವ ಲೈಂಗಿಕ ದೌರ್ಜನ್ಯದ ವಿಡಿಯೋ ವಾಟ್ಸಾಪ್‌ ನಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೋಗಳು ನನಗೂ ಬಂದಿದ್ದು, ಚನ್ನರಾಯಪಟ್ಟಣ ರಸ್ತೆಯಲ್ಲಿ ಇರುವ ಗನ್ನಿಕಡ ಗ್ರಾಮದ ತೋಟದಲ್ಲಿ ಇರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಂದಿಗೆ ಪ್ರಜ್ವಲ್‌ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯ ವಿಡಿಯೋ ನೋಡಿ ನನಗೆ ಭಯವಾಗಿದೆ. ಪತಿ ಈಗ ನನ್ನ ಶೀಲವನ್ನು ಶಂಕಿಸುತ್ತಿದ್ದು, ನನ್ನ ವಿಡಿಯೋ ಬಂದರೆ ನಮ್ಮ ಗತಿ ಏನು ಎಂಬ ಬಗ್ಗೆ ಆತಂಕವಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅಗಿದ್ದು, ಮಹಿಳೆಯ ಮೇಲೆ ನಡೆದ ಲೈಂಗಿಕ ದೌಜನ್ಯಗಳ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ನಾನು ಮಾತನಾಡಿದ ನಂತರ ನನಗೆ ಜೀವ ಭಯ ಇದೆ. ಆದ್ದರಿಂದ, ನನಗೆ ಹಾಗೂ ಮಗಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ರೀತಿ ಕ್ರಮ ತಗೆದುಕೊಳ್ಳಬೇಕು” ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...