Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪ್ಪ-ಮಗನ (ಎಚ್‌ಡಿ ರೇವಣ್ಣ-ಪ್ರಜ್ವಲ್ ರೇವಣ್ಣ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪತ್ನಿ ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ನಾನು ಮನೆಯಲ್ಲಿ ಇದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಜೊತೆ ಹಾಗೂ ಮಗಳ ಜೊತೆಗೆ ಪ್ರಚೋದನಕಾರಿಯಾಗಿ ಮಾತನಾಡಿದ್ದು, ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ನಂತರ ನನಗೆ ಜೀವಭಯವಿದೆ. ಆ ವಿಡಿಯೋ ಹೊರಗಡೆ ಬಂದರೆ ಎಂಬ ಆತಂಕವಿದ್ದು, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರು ನೀಡಿದ್ದಾರೆ.

ಮಾಜಿ ಸಚಿವ ಎಚ್‌.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ಪ-ಮಗನಿಗೆ ಈಗ ಸಂಕಷ್ಟ ಎದುರಾಗಿದೆ.

ದೂರಿನಲ್ಲಿ ಏನಿದೆ?

‘ನನ್ನ ಪತಿ ಮಾಜಿ ಶಾಸಕರಾದ ಹೆಚ್‌ ಡಿ ರೇವಣ್ಣ ರವರ ಮಾಲೀಕತ್ವದ ನಾಗಾಶಾಪುರದ ಹಾಲಿನ ಡೈರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ರೇವಣ್ಣರವರು ನನಗೆ ಬಿಸಿಎಂ ಲೇಡಿಸ್‌ ಹಾಸ್ಟೇಲ್‌ ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. ಜತೆಗೆ, ನಾನು ಭಾವನಿ ರೇವಣ್ಣ ಅವರಿಗೆ ಹತ್ತಿರದ ಸಂಬಂಧಿಯೂ ಆಗಿದ್ದು, 2013ರಲ್ಲಿ ರೇವಣ್ಣ ಆಗಾಗ ಮನೆಗೆ ಬರುವಂತೆ ಹೇಳುತ್ತಿದ್ದರು; ಅವರ ಮಾತಿನಂತೆ ಹಾಸ್ಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದೆ’ ಎಂದು ಹೇಳಿದ್ದಾರೆ.

‘ರೇವಣ್ಣ ಪುತ್ರ ಸೂರಜ್‌ ಮದುವೆ ಸಮಯದಲ್ಲಿ ಮನೆ ಕೆಲಸ ಮಾಡಿಕೊಡುವಂತೆ ಕರೆಸಿಕೊಂಡಿದ್ದರು. ಅಲ್ಲಿ ಮೂರುವರೆ ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದೆ, ಕೆಲಸಕ್ಕೆ ಸೇರಿಕೊಂಡ 4 ತಿಂಗಳ ನಂತರ ಅವರು ತಮ್ಮ ಕೊಠಡಿಗೆ ಬರುವಂತೆ ಅಹ್ವಾನಿಸುತ್ತಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ 6 ಜನ ಹೆಣ್ಣು ಮಕ್ಕಳು ಪ್ರಜ್ವಲ್‌ ರೇವಣ್ಣ ಬಂದಾಗ ನಮಗೆ ಭಯವಾಗುತ್ತದೆ ಎಂದು ಹೇಳುತ್ತಿದ್ದರು. ಕೆಲಸ ಮಾಡುತ್ತಿದ್ದ ಹುಡುಗರೂ ಸಹ ಹೆಣ್ಣು ಮಕ್ಕಳಿಗೆ ಎಚ್ಚರವಾಗಿರುವಂತೆ ತಿಳಿಸುತ್ತಿದ್ದರು. ರೇವಣ್ಣ ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಸ್ಟೋರ್‌ ರೂಮ್‌ನಲ್ಲಿ ನನ್ನ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು, ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು’ ಎಂದು ಹೇಳಿದ್ದಾರೆ.

“ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟತ್ತಾ ಹೊಟ್ಟೆ ಭಾಗದಲ್ಲಿ ಜಿಗುಟುತ್ತಿದ್ದರು. ಎಣ್ಣೆ ಹಚ್ಚಲು ಶೋಭಾ ರವರನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಬಳಿ ಹೇಳಿ ಕಳುಹಿಸುತ್ತಿದ್ದರು. ಹೀಗೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ಪೋನ್‌ ಮಾಡಿ, ಸುಮಾರು ಸಲ ವಿಡಿಯೋ ಕಾಲ್ ಮಾಡುತ್ತಿದ್ದರು. ನನ್ನ ಮಗಳ ಜೊತೆ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸುತ್ತಿದ್ದು, ಮಗಳು ಹೆದರಿಕೊಂಡು ನಂಬರ್‌ ಬ್ಲಾಕ್‌ ಮಾಡಿದ್ದಳು. ಆ ನಂತರ, ಹೆದರಿಕೊಂಡು ಕೆಲಸ ಬಿಟ್ಟು ಹೊರ ಬಂದಿದ್ದೆವು” ಎಂದು ತಿಳಿಸಿದ್ದಾರೆ.

“ಇತ್ತೀಚೆಗೆ ಜಿಲ್ಲೆಯಾದಂತ್ಯ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾಗುವ ಲೈಂಗಿಕ ದೌರ್ಜನ್ಯದ ವಿಡಿಯೋ ವಾಟ್ಸಾಪ್‌ ನಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೋಗಳು ನನಗೂ ಬಂದಿದ್ದು, ಚನ್ನರಾಯಪಟ್ಟಣ ರಸ್ತೆಯಲ್ಲಿ ಇರುವ ಗನ್ನಿಕಡ ಗ್ರಾಮದ ತೋಟದಲ್ಲಿ ಇರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಂದಿಗೆ ಪ್ರಜ್ವಲ್‌ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯ ವಿಡಿಯೋ ನೋಡಿ ನನಗೆ ಭಯವಾಗಿದೆ. ಪತಿ ಈಗ ನನ್ನ ಶೀಲವನ್ನು ಶಂಕಿಸುತ್ತಿದ್ದು, ನನ್ನ ವಿಡಿಯೋ ಬಂದರೆ ನಮ್ಮ ಗತಿ ಏನು ಎಂಬ ಬಗ್ಗೆ ಆತಂಕವಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅಗಿದ್ದು, ಮಹಿಳೆಯ ಮೇಲೆ ನಡೆದ ಲೈಂಗಿಕ ದೌಜನ್ಯಗಳ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ನಾನು ಮಾತನಾಡಿದ ನಂತರ ನನಗೆ ಜೀವ ಭಯ ಇದೆ. ಆದ್ದರಿಂದ, ನನಗೆ ಹಾಗೂ ಮಗಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ರೀತಿ ಕ್ರಮ ತಗೆದುಕೊಳ್ಳಬೇಕು” ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...