Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಲೈಂಗಿಕ ದೌರ್ಜನ್ಯ ಪ್ರಕರಣ; ರೇವಣ್ಣ, ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

- Advertisement -
- Advertisement -

ದೇಶದಾದ್ಯಂತ ಭಾರೀ ಸದ್ದು ಮಾಡಿರುವ ಹಾಸನ ಸಂಸದ, ಎನ್‌ಡಿಎ ಎಂಪಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪ್ಪ-ಮಗನ (ಎಚ್‌ಡಿ ರೇವಣ್ಣ-ಪ್ರಜ್ವಲ್ ರೇವಣ್ಣ) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಪತ್ನಿ ಭವಾನಿ ಅವರು ಮನೆಯಲ್ಲಿ ಇಲ್ಲದಿದ್ದಾಗ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಅನುಚಿತವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆ. ನಾನು ಮನೆಯಲ್ಲಿ ಇದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಜೊತೆ ಹಾಗೂ ಮಗಳ ಜೊತೆಗೆ ಪ್ರಚೋದನಕಾರಿಯಾಗಿ ಮಾತನಾಡಿದ್ದು, ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಮಾತನಾಡಿದ ನಂತರ ನನಗೆ ಜೀವಭಯವಿದೆ. ಆ ವಿಡಿಯೋ ಹೊರಗಡೆ ಬಂದರೆ ಎಂಬ ಆತಂಕವಿದ್ದು, ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮಹಿಳೆ ದೂರು ನೀಡಿದ್ದಾರೆ.

ಮಾಜಿ ಸಚಿವ ಎಚ್‌.ಡಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 354 (ಎ), 354 (ಡಿ) ಮತ್ತು 506, 509 ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ಪ-ಮಗನಿಗೆ ಈಗ ಸಂಕಷ್ಟ ಎದುರಾಗಿದೆ.

ದೂರಿನಲ್ಲಿ ಏನಿದೆ?

‘ನನ್ನ ಪತಿ ಮಾಜಿ ಶಾಸಕರಾದ ಹೆಚ್‌ ಡಿ ರೇವಣ್ಣ ರವರ ಮಾಲೀಕತ್ವದ ನಾಗಾಶಾಪುರದ ಹಾಲಿನ ಡೈರಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ರೇವಣ್ಣರವರು ನನಗೆ ಬಿಸಿಎಂ ಲೇಡಿಸ್‌ ಹಾಸ್ಟೇಲ್‌ ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. ಜತೆಗೆ, ನಾನು ಭಾವನಿ ರೇವಣ್ಣ ಅವರಿಗೆ ಹತ್ತಿರದ ಸಂಬಂಧಿಯೂ ಆಗಿದ್ದು, 2013ರಲ್ಲಿ ರೇವಣ್ಣ ಆಗಾಗ ಮನೆಗೆ ಬರುವಂತೆ ಹೇಳುತ್ತಿದ್ದರು; ಅವರ ಮಾತಿನಂತೆ ಹಾಸ್ಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದೆ’ ಎಂದು ಹೇಳಿದ್ದಾರೆ.

‘ರೇವಣ್ಣ ಪುತ್ರ ಸೂರಜ್‌ ಮದುವೆ ಸಮಯದಲ್ಲಿ ಮನೆ ಕೆಲಸ ಮಾಡಿಕೊಡುವಂತೆ ಕರೆಸಿಕೊಂಡಿದ್ದರು. ಅಲ್ಲಿ ಮೂರುವರೆ ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದೆ, ಕೆಲಸಕ್ಕೆ ಸೇರಿಕೊಂಡ 4 ತಿಂಗಳ ನಂತರ ಅವರು ತಮ್ಮ ಕೊಠಡಿಗೆ ಬರುವಂತೆ ಅಹ್ವಾನಿಸುತ್ತಿದ್ದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ 6 ಜನ ಹೆಣ್ಣು ಮಕ್ಕಳು ಪ್ರಜ್ವಲ್‌ ರೇವಣ್ಣ ಬಂದಾಗ ನಮಗೆ ಭಯವಾಗುತ್ತದೆ ಎಂದು ಹೇಳುತ್ತಿದ್ದರು. ಕೆಲಸ ಮಾಡುತ್ತಿದ್ದ ಹುಡುಗರೂ ಸಹ ಹೆಣ್ಣು ಮಕ್ಕಳಿಗೆ ಎಚ್ಚರವಾಗಿರುವಂತೆ ತಿಳಿಸುತ್ತಿದ್ದರು. ರೇವಣ್ಣ ತಮ್ಮ ಪತ್ನಿ ಭವಾನಿಯವರು ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಸ್ಟೋರ್‌ ರೂಮ್‌ನಲ್ಲಿ ನನ್ನ ಕೈ ಹಿಡಿದು ಎಳೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಮೈ ಮುಟ್ಟುತ್ತಿದ್ದರು, ಸೀರೆಯ ಪಿನ್‌ ಕಿತ್ತು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು’ ಎಂದು ಹೇಳಿದ್ದಾರೆ.

“ಪ್ರಜ್ವಲ್‌ ರೇವಣ್ಣ ಅಡುಗೆ ಮನೆಯಲ್ಲಿ ಇದ್ದಾಗ ಹಿಂದಿನಿಂದ ಬಂದು ಮೈ ಮುಟ್ಟತ್ತಾ ಹೊಟ್ಟೆ ಭಾಗದಲ್ಲಿ ಜಿಗುಟುತ್ತಿದ್ದರು. ಎಣ್ಣೆ ಹಚ್ಚಲು ಶೋಭಾ ರವರನ್ನು ಕಳಿಸು ಎಂದು ಕೆಲಸ ಮಾಡುವ ಹುಡುಗನ ಬಳಿ ಹೇಳಿ ಕಳುಹಿಸುತ್ತಿದ್ದರು. ಹೀಗೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಮನೆಯಲ್ಲಿದ್ದಾಗ ಪೋನ್‌ ಮಾಡಿ, ಸುಮಾರು ಸಲ ವಿಡಿಯೋ ಕಾಲ್ ಮಾಡುತ್ತಿದ್ದರು. ನನ್ನ ಮಗಳ ಜೊತೆ ಅಸಭ್ಯ ಸಂಭಾಷಣೆ ಮೂಲಕ ಪ್ರಚೋದಿಸಲು ಯತ್ನಿಸುತ್ತಿದ್ದು, ಮಗಳು ಹೆದರಿಕೊಂಡು ನಂಬರ್‌ ಬ್ಲಾಕ್‌ ಮಾಡಿದ್ದಳು. ಆ ನಂತರ, ಹೆದರಿಕೊಂಡು ಕೆಲಸ ಬಿಟ್ಟು ಹೊರ ಬಂದಿದ್ದೆವು” ಎಂದು ತಿಳಿಸಿದ್ದಾರೆ.

“ಇತ್ತೀಚೆಗೆ ಜಿಲ್ಲೆಯಾದಂತ್ಯ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾಗುವ ಲೈಂಗಿಕ ದೌರ್ಜನ್ಯದ ವಿಡಿಯೋ ವಾಟ್ಸಾಪ್‌ ನಲ್ಲಿ ಹರಿದಾಡುತ್ತಿರುವ ಕೆಲವು ವಿಡಿಯೋಗಳು ನನಗೂ ಬಂದಿದ್ದು, ಚನ್ನರಾಯಪಟ್ಟಣ ರಸ್ತೆಯಲ್ಲಿ ಇರುವ ಗನ್ನಿಕಡ ಗ್ರಾಮದ ತೋಟದಲ್ಲಿ ಇರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಂದಿಗೆ ಪ್ರಜ್ವಲ್‌ ರೇವಣ್ಣ ನಡೆಸಿರುವ ಲೈಂಗಿಕ ದೌರ್ಜನ್ಯ ವಿಡಿಯೋ ನೋಡಿ ನನಗೆ ಭಯವಾಗಿದೆ. ಪತಿ ಈಗ ನನ್ನ ಶೀಲವನ್ನು ಶಂಕಿಸುತ್ತಿದ್ದು, ನನ್ನ ವಿಡಿಯೋ ಬಂದರೆ ನಮ್ಮ ಗತಿ ಏನು ಎಂಬ ಬಗ್ಗೆ ಆತಂಕವಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅಗಿದ್ದು, ಮಹಿಳೆಯ ಮೇಲೆ ನಡೆದ ಲೈಂಗಿಕ ದೌಜನ್ಯಗಳ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ನಾನು ಮಾತನಾಡಿದ ನಂತರ ನನಗೆ ಜೀವ ಭಯ ಇದೆ. ಆದ್ದರಿಂದ, ನನಗೆ ಹಾಗೂ ಮಗಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಎಚ್‌.ಡಿ. ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾನೂನು ರೀತಿ ಕ್ರಮ ತಗೆದುಕೊಳ್ಳಬೇಕು” ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ; ಪ್ರಜ್ವಲ್​ ರೇವಣ್ಣ ಲೈಂಗಿಕ ಹಗರಣ: ಸಂತ್ರಸ್ತ ಮಹಿಳೆಯೊಬ್ಬರಿಂದ ದೂರು; ಅಂತರ ಕಾಯ್ದುಕೊಂಡ ಮೈತ್ರಿ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...