Homeಮುಖಪುಟಮಹಿಳೆ ಪ್ರಚೋದನಕಾರಿ ಉಡುಗೆ ತೊಟ್ಟರೆ ಪುರುಷರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ: ಕೇರಳ ಕೋರ್ಟ್

ಮಹಿಳೆ ಪ್ರಚೋದನಕಾರಿ ಉಡುಗೆ ತೊಟ್ಟರೆ ಪುರುಷರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ನಿಲ್ಲುವುದಿಲ್ಲ: ಕೇರಳ ಕೋರ್ಟ್

- Advertisement -
- Advertisement -

ಮಹಿಳೆಯ ಉಡುಗೆ ಪ್ರಚೋದನಕಾರಿ ಮತ್ತು ಅಂಗಾಂಗಗಳು ಕಾಣುವಂತಿದ್ದರೆ ಪುರುಷನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣವು ನಿಲ್ಲುವುದಿಲ್ಲ ಎಂದು ಕೇರಳದ ಕೋಝಿಕ್ಕೋಡ್‌ನ ಸೆಷನ್ಸ್ ನ್ಯಾಯಾಲಯವು ಹೇಳಿದೆ ಎಂದು ಸುದ್ದಿ ಮಾಧ್ಯಮ ‘ಮಾಧ್ಯಮಂ.ಕಾಂ’ ವರದಿ ಮಾಡಿದೆ. ಲೇಖಕ ಮತ್ತು ಸಾಮಾಜಿಕ ಕಾರ್ಯಕರ್ತ ಸಿವಿಕ್ ಚಂದ್ರನ್‌ಗೆ ನಿರೀಕ್ಷಣಾ ಜಾಮೀನು ನೀಡುವಾಗ ಕೋರ್ಟ್ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದೆ.

ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಲೇಖಕ, ನಿರೀಕ್ಷಣಾ ಜಾಮೀನು ಪಡೆಯಲು ಮಹಿಳಾ ದೂರುದಾರರ ಛಾಯಾಚಿತ್ರಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಛಾಯಾಚಿತ್ರಗಳನ್ನು ಪರಿಶೀಲಿಸಿದ ನಂತರ, ನ್ಯಾಯಮೂರ್ತಿ ಎಸ್. ಕೃಷ್ಣ ಕುಮಾರ್ ಅವರು, ದೂರುದಾರರು ಲೈಂಗಿಕ ಪ್ರಚೋದನಕಾರಿ ಉಡುಗೆಯನ್ನು ಧರಿಸಿರುವುದರಿಂದ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅನ್ನು ಅನ್ವಯಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

IPC ಯ ಸೆಕ್ಷನ್ 354A ಅನ್ನು ಓದುವಾಗ ಸೆಷನ್ಸ್ ನ್ಯಾಯಾಲಯವು ತನ್ನ ಮೌಖಿಕ ಅವಲೋಕನ ಮಾಡುತ್ತಾ, “ಈ ಸೆಕ್ಷಣ್ ಅಡಿಯಲ್ಲಿ ಪ್ರಕರಣ ದಾಖಲಾಗಲು, ದೈಹಿಕ ಸಂಪರ್ಕ ಮತ್ತು ಇಷ್ಟವಿಲ್ಲದ ಮತ್ತು ಸ್ಪಷ್ಟವಾದ ಲೈಂಗಿಕ ಪ್ರಚೋದನೆಗಳಳು ಇರಬೇಕು. ಲೈಂಗಿಕ ಬೇಡಿಕೆ ಅಥವಾ ವಿನಂತಿಯನ್ನು ಹೊಂದಿರಬೇಕು. ಅಲ್ಲಿ ಲೈಂಗಿಕ ಹಿನ್ನಲೆಯ ಟೀಕೆಗಳಿರಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೊ ಅತ್ಯಾಚಾರ ಅಪರಾಧಿಗಳಿಗೆ ಹಾರ ಹಾಕಿ ಸ್ವಾಗತಿಸಿದ BJP ಬೆಂಬಲಿತ ಸಂಘಟನೆ VHP

ಅದೇ ಸೆಕ್ಷನ್ ಅನ್ನು ಓದುತ್ತಾ, ಆರೋಪಿಯ ಕಡೆಯಿಂದ ಮಹಿಳೆಯ ಘನತೆಗೆ ಕುಂದುಂಟು ಮಾಡುವ ಉದ್ದೇಶವು ಇರಲಿಲ್ಲ ಎಂದು ನ್ಯಾಯಾಲಯವು ಕಂಡುಕೊಂಡಿದೆ.

ದೂರುದಾರರ ಮಹಿಳೆಯ ಗೆಳೆಯರು ಸೇರಿದಂತೆ ಇತರ ಜನರು ಇದ್ದಾಗ ಈ ಘಟನೆ ಸಂಭವಿಸಿದೆ. ಆದರೆ ಅವರ ವಿರುದ್ಧ ಯಾರೂ ಅಂತಹ ದೂರುಗಳನ್ನು ಮಾಡಲಿಲ್ಲ ಎಂದು ಆರೋಪಿ ಬರಹಗಾರ ತನ್ನ ಸಮರ್ಥನೆಯಲ್ಲಿ ಹೇಳಿಕೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...