Homeಕರ್ನಾಟಕCAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ ಎನ್ನುತ್ತಾರೆ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿ.

- Advertisement -
- Advertisement -

ನಿನ್ನೆ NEET ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಬೀದರ್‌ನ ಕಾರ್ತಿಕ್ ರೆಡ್ಡಿ 720 ಅಂಕಗಳಿಗೆ 710 ಅಂಕ ಗಳಿಸಿ ಕರ್ನಾಟಕದ ನಂಬರ್ ಒನ್ ಟಾಪರ್‌ ಆಗಿದ್ದಲ್ಲದೇ ಅಖಿಲ ಭಾರತ ಮಟ್ಟದಲ್ಲಿ 9ನೇ ರ್ಯಾಂಕ್ ಪಡೆದು ಮಿಂಚಿದ್ದಾರೆ. ಅಲ್ಲದೇ ಅರ್ಬಜ್ ಅಹ್ಮದ್ ಎಂಬ ಲಾರಿ ಚಾಲಕನ ಮಗ 700 ಅಂಕಗಳೊಂದಿಗೆ ಕರ್ನಾಟಕದ 3ನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಇದರಲ್ಲಿ ವಿಶೇಷ ಅಂಶವೆಂದರೆ ಇವರಿಬ್ಬರೂ ಕಲಿತಿದ್ದು ಬೀದರ್‌ ಶಾಹೀನ್ ಸಂಸ್ಥೆಯಲ್ಲಿ. ಈ ಸಂಸ್ಥೆ ವರ್ಷದ ಆರಂಭದಲ್ಲಿ ಭಾರೀ ಸುದ್ದಿ ಮಾಡಿದ್ದು ನಿಮಗೆ ನೆನಪಿರಬೇಕು. ಈ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕ್ಲುಲ್ಲಕ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು.

ಅಂತ ಬೀದರ್‌ನ ಶಾಹೀನ್ ಶಾಲೆಯಲ್ಲಿ ಇಂದು 340ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಉಚಿತ ವೈದ್ಯಕೀಯ ಶಿಕ್ಷಣ ಪಡೆಯಲು ಹೊರಟಿದ್ದಾರೆ. ಈ ವರ್ಷ ಮಾತ್ರವಲ್ಲದೇ ಕಳೆದ ವರ್ಷ ಸಹ ಇದೇ ಸಂಸ್ಥೆಯ 307 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉಚಿತ ವೈದ್ಯಕೀಯ ಸೀಟು ಪಡೆದಿದ್ದರು. ಕಳೆದ 5 ವರ್ಷಗಳಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಕಲಿತು ಉಚಿತ ವೈದ್ಯಕೀಯ ಸೀಟು ಪಡೆದಿದ್ದಾರೆ!

ಈ ಕುರಿತು ನಾನುಗೌರಿ.ಕಾಂ ಶಾಹೀನ್ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿಯವರನ್ನು ಮಾತನಾಡಿಸಿತು. ಅವರು “ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ನಾವು ಉಚಿತ ಶಿಕ್ಷಣ ನೀಡುತ್ತಿದ್ದೇವೆ” ಎನ್ನುತ್ತಾರೆ.

ಬೀದರ್ ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಬರುವ ಹಿಂದುಳಿದ ಜಿಲ್ಲೆ. ಇಲ್ಲಿ ನಾವು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಕೆಜಿಯಿಂದ ಪ್ರಾರಂಭವಾಗಿ ಪದವಿವರೆಗೂ ಶಿಕ್ಷಣ ನೀಡುತ್ತಿದ್ದೇವೆ. 7 ದೇಶಗಳ ಮತ್ತು ಭಾರತದ 25 ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಬೀದರ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶಾಹೀನ್ ಸಂಸ್ಥೆಯು ದೇಶದ 12 ರಾಜ್ಯಗಳಲ್ಲಿ 44 ಕೇಂದ್ರಗಳನ್ನು ತೆರೆದು ಕಾರ್ಯನಿರ್ವಹಿಸುತ್ತಿದೆ. ಇಂತಹ ಗುಣಮಟ್ಟದ ಸಂಸ್ಥೆಯ ಮೇಲೆ ವೃತ್ತಿಮತ್ಸರದ ಕಾರಣಕ್ಕಾಗಿ ಅಪಪ್ರಚಾರ ಮಾಡಲಾಗಿತ್ತು. ಕೋಮುವಾದಿ ಹುನ್ನಾರ ನಡೆಸಲಾಯಿತು. ಆದರೆ ನಾವು ಭಾರತದ ಸಂವಿಧಾನ ಮತ್ತು ನ್ಯಾಯಾಲಯದ ಮೇಲೆ ನಂಬಿಕೆಯಿಟ್ಟಿದ್ದೇವೆ. ಶ್ರದ್ಧೆಯಿಂದ ಶಿಕ್ಷಣ ನೀಡುವ ಕೆಲಸ ಮುಂದುವರೆಸುತ್ತೇವೆ ಎಂದು ತೌಸೀಫ್ ಹೇಳಿದ್ದಾರೆ.

ಶಾಹೀನ್ ಶಾಲೆಯು ಇಂದು ಮತ್ತೆ NEET ಫಲಿತಾಂಶ ಕಾರಣಕ್ಕಾಗಿ ಚರ್ಚೆಗೆ ಬಂದಿದೆ. ಹಲವು ಬಡ ವಿದ್ಯಾರ್ಥಿಗಳು ಇಲ್ಲಿ ಉಚಿತ ಶಿಕ್ಷಣ ಪಡದು ತಮ್ಮ ಶೈಕ್ಷಣಿಕ ಕನಸುಗಳನ್ನು ನನಸು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ‌ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ಸಂದರ್ಭದಲ್ಲಿ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟು ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿತ್ತು. ಕರ್ನಾಟಕದ ಖ್ಯಾತ ವಕೀಲರಾದ ಬಿಟಿ ವೆಂಕಟೇಶ್ ಶಾಲೆಯ ಪರ ವಾದಿಸಿದ್ದರು.


ಇದನ್ನೂ ಓದಿ: ಬೀದರ್ ಮಕ್ಕಳ ನಾಟಕ ಪ್ರಕರಣ: ಜನರೆದುರು ಮತ್ತಷ್ಟು ಬೆತ್ತಲಾದ ಸರ್ಕಾರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...