Homeಕರ್ನಾಟಕಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

ಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮವನ್ನು ಯಾಕೆ ಸ್ವೀಕರಿಸಿದರು ಎಂಬುದು ವಿಚಾರವಂತರೆಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಹತ್ತನೇ ತರಗತಿಯ ನೂತನ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬೌದ್ಧಧರ್ಮವನ್ನು ಸ್ವೀಕರಿಸಿದ್ದು ಏಕೆಂಬುದೇ ನಾಪತ್ತೆಯಾಗಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿತವಾದ ಸಮಾಜ ವಿಜ್ಞಾನ ಭಾಗ 2ರ ಪಠ್ಯಪುಸ್ತಕದಲ್ಲಿನ ‘ಗಾಂಧಿಯುಗ ಮತ್ತು ರಾಷ್ಟ್ರೀಯ ಹೋರಾಟ’ ಪಾಠದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ‌ಉಪಶೀರ್ಷಿಕೆಯಲ್ಲಿ ಪಠ್ಯವನ್ನು ನೀಡಲಾಗಿತ್ತು. ಈ ಭಾಗವನ್ನು ನೂತನ ಸಮಿತಿ ಉಳಿಸಿಕೊಳ್ಳಲಾಗಿದ್ದರೂ, ಕೆಲವು ಕಹಿಸತ್ಯಗಳು ಮಕ್ಕಳಿಗೆ ತಿಳಿಯದಂತೆ ಮರೆಮಾಚಿರುವುದು ಸ್ಪಷ್ಟವಾಗುತ್ತಿದೆ. ‘ಸ್ವಾತಂತ್ರ್ಯ ಹೋರಾಟ’ ಎಂದು ಪರಿಷ್ಕರಿಸಲಾಗಿರುವ ಪಾಠದಲ್ಲಿ ಅಂಬೇಡ್ಕರ್‌ ಅವರ ಕುರಿತು ವಿವರಣೆಗಳನ್ನು ಉಳಿಸಿಕೊಂಡಿದ್ದರೂ ಕೆಲವೆಡೆ ಕತ್ತರಿ ಪ್ರಯೋಗ ಮಾಡಿರುವುದು ನೂತನ ಪಠ್ಯದ ಹಾಳೆಗಳಿಂದ ಸ್ಪಷ್ಟವಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಹಿಂದಿನ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ಜಾತಿ ವ್ಯವಸ್ಥೆಯಿಂದ ಬೇಸತ್ತ ಇವರು (ಅಂಬೇಡ್ಕರ್‌) ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”- ಹೀಗೆ ಹಿಂದಿನ ಪಠ್ಯದಲ್ಲಿ ಸಾಲುಗಳಿವೆ.

ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ತಮ್ಮ ಇಳಿ ವಯಸ್ಸಿನಲ್ಲಿ ಇವರು ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”

ಹೀಗೆ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದ್ದು, “ಅಂಬೇಡ್ಕರ್‌ ಅವರು ಜಾತಿ ವ್ಯವಸ್ಥೆಯಿಂದ ಬೇಸತ್ತಿದ್ದು, ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದ್ದು” ಎಂಬ ಅಂಶಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಹಾಕಿದೆ.

ಇದನ್ನೂ ಓದಿರಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

“ನಾನು ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯುವುದಿಲ್ಲ” ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿ ಸೇರುವ ಮುನ್ನ ದಶಕದ ಮುಂಚೆಯೇ ಘೋಷಣೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕನ್ನಡಿಗರೇ ಆಗ್ಲಿ, ಕರ್ನಾಟಕ ಸರ್ಕಾರವೇ ಆಗ್ಲಿ ಈಗಲೇ ಇಚ್ಛೆತ್ತು ಕೊಳ್ಳದಿದ್ದರೆ ಇನ್ನು ಸಾವಿರಾರು ಸತ್ಯಗಳು ಸುಳ್ಳಾಗಿ, ಸುಳ್ಳುಗಲ್ಲೆಲ್ಲ ಸತ್ಯವಾಗುತ್ತವೆ

  2. ಸತ್ಯವನ್ನು ಎಂದು ಮರೆಮಾಚಲಗದು… ಚಕ್ರತೀರ್ಥ ಎಂಬ ವೆಕ್ತಿಯನ್ನು ಕೂಡಲೇ ಸಮಿತಿಯಿಂದ ತೆಗೆದು ಹಾಕಿ..

  3. ಅತೀ ಬುದ್ಧಿವಂತಿಕೆ ಧೂರ್ತ ಲಕ್ಷಣಂ

    ಎನ್ನುವ ಮಾತು ಅಕ್ಷರಶಃ ನಿಜ ಎನ್ನುವುದನ್ನು ಈಚಿನ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ವೈಖರಿ ನಿಜವಾಗಿಸಿದೆ.

    ರಾಜ್ಯ ಸರಕಾರವು ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ತೆಗೆದು ಕೊಳ್ಳಬಾರದು ಮತ್ತು ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು

  4. ಚಕ್ರತೀರ್ಥರ ಈ ಪರಿ ಪಠ್ಯ ವಿರೋಧಿ ದೋರಣೆ ಸಲ್ಲದು.ಮೂಲ ಪಠ್ಯ ಕಾಯ್ದು ಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...