Homeಕರ್ನಾಟಕಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

ಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮವನ್ನು ಯಾಕೆ ಸ್ವೀಕರಿಸಿದರು ಎಂಬುದು ವಿಚಾರವಂತರೆಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಹತ್ತನೇ ತರಗತಿಯ ನೂತನ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬೌದ್ಧಧರ್ಮವನ್ನು ಸ್ವೀಕರಿಸಿದ್ದು ಏಕೆಂಬುದೇ ನಾಪತ್ತೆಯಾಗಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿತವಾದ ಸಮಾಜ ವಿಜ್ಞಾನ ಭಾಗ 2ರ ಪಠ್ಯಪುಸ್ತಕದಲ್ಲಿನ ‘ಗಾಂಧಿಯುಗ ಮತ್ತು ರಾಷ್ಟ್ರೀಯ ಹೋರಾಟ’ ಪಾಠದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ‌ಉಪಶೀರ್ಷಿಕೆಯಲ್ಲಿ ಪಠ್ಯವನ್ನು ನೀಡಲಾಗಿತ್ತು. ಈ ಭಾಗವನ್ನು ನೂತನ ಸಮಿತಿ ಉಳಿಸಿಕೊಳ್ಳಲಾಗಿದ್ದರೂ, ಕೆಲವು ಕಹಿಸತ್ಯಗಳು ಮಕ್ಕಳಿಗೆ ತಿಳಿಯದಂತೆ ಮರೆಮಾಚಿರುವುದು ಸ್ಪಷ್ಟವಾಗುತ್ತಿದೆ. ‘ಸ್ವಾತಂತ್ರ್ಯ ಹೋರಾಟ’ ಎಂದು ಪರಿಷ್ಕರಿಸಲಾಗಿರುವ ಪಾಠದಲ್ಲಿ ಅಂಬೇಡ್ಕರ್‌ ಅವರ ಕುರಿತು ವಿವರಣೆಗಳನ್ನು ಉಳಿಸಿಕೊಂಡಿದ್ದರೂ ಕೆಲವೆಡೆ ಕತ್ತರಿ ಪ್ರಯೋಗ ಮಾಡಿರುವುದು ನೂತನ ಪಠ್ಯದ ಹಾಳೆಗಳಿಂದ ಸ್ಪಷ್ಟವಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಹಿಂದಿನ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ಜಾತಿ ವ್ಯವಸ್ಥೆಯಿಂದ ಬೇಸತ್ತ ಇವರು (ಅಂಬೇಡ್ಕರ್‌) ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”- ಹೀಗೆ ಹಿಂದಿನ ಪಠ್ಯದಲ್ಲಿ ಸಾಲುಗಳಿವೆ.

ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ತಮ್ಮ ಇಳಿ ವಯಸ್ಸಿನಲ್ಲಿ ಇವರು ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”

ಹೀಗೆ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದ್ದು, “ಅಂಬೇಡ್ಕರ್‌ ಅವರು ಜಾತಿ ವ್ಯವಸ್ಥೆಯಿಂದ ಬೇಸತ್ತಿದ್ದು, ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದ್ದು” ಎಂಬ ಅಂಶಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಹಾಕಿದೆ.

ಇದನ್ನೂ ಓದಿರಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

“ನಾನು ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯುವುದಿಲ್ಲ” ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿ ಸೇರುವ ಮುನ್ನ ದಶಕದ ಮುಂಚೆಯೇ ಘೋಷಣೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕನ್ನಡಿಗರೇ ಆಗ್ಲಿ, ಕರ್ನಾಟಕ ಸರ್ಕಾರವೇ ಆಗ್ಲಿ ಈಗಲೇ ಇಚ್ಛೆತ್ತು ಕೊಳ್ಳದಿದ್ದರೆ ಇನ್ನು ಸಾವಿರಾರು ಸತ್ಯಗಳು ಸುಳ್ಳಾಗಿ, ಸುಳ್ಳುಗಲ್ಲೆಲ್ಲ ಸತ್ಯವಾಗುತ್ತವೆ

  2. ಸತ್ಯವನ್ನು ಎಂದು ಮರೆಮಾಚಲಗದು… ಚಕ್ರತೀರ್ಥ ಎಂಬ ವೆಕ್ತಿಯನ್ನು ಕೂಡಲೇ ಸಮಿತಿಯಿಂದ ತೆಗೆದು ಹಾಕಿ..

  3. ಅತೀ ಬುದ್ಧಿವಂತಿಕೆ ಧೂರ್ತ ಲಕ್ಷಣಂ

    ಎನ್ನುವ ಮಾತು ಅಕ್ಷರಶಃ ನಿಜ ಎನ್ನುವುದನ್ನು ಈಚಿನ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ವೈಖರಿ ನಿಜವಾಗಿಸಿದೆ.

    ರಾಜ್ಯ ಸರಕಾರವು ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ತೆಗೆದು ಕೊಳ್ಳಬಾರದು ಮತ್ತು ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು

  4. ಚಕ್ರತೀರ್ಥರ ಈ ಪರಿ ಪಠ್ಯ ವಿರೋಧಿ ದೋರಣೆ ಸಲ್ಲದು.ಮೂಲ ಪಠ್ಯ ಕಾಯ್ದು ಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...