Homeಕರ್ನಾಟಕಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

ಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮವನ್ನು ಯಾಕೆ ಸ್ವೀಕರಿಸಿದರು ಎಂಬುದು ವಿಚಾರವಂತರೆಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಹತ್ತನೇ ತರಗತಿಯ ನೂತನ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬೌದ್ಧಧರ್ಮವನ್ನು ಸ್ವೀಕರಿಸಿದ್ದು ಏಕೆಂಬುದೇ ನಾಪತ್ತೆಯಾಗಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿತವಾದ ಸಮಾಜ ವಿಜ್ಞಾನ ಭಾಗ 2ರ ಪಠ್ಯಪುಸ್ತಕದಲ್ಲಿನ ‘ಗಾಂಧಿಯುಗ ಮತ್ತು ರಾಷ್ಟ್ರೀಯ ಹೋರಾಟ’ ಪಾಠದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ‌ಉಪಶೀರ್ಷಿಕೆಯಲ್ಲಿ ಪಠ್ಯವನ್ನು ನೀಡಲಾಗಿತ್ತು. ಈ ಭಾಗವನ್ನು ನೂತನ ಸಮಿತಿ ಉಳಿಸಿಕೊಳ್ಳಲಾಗಿದ್ದರೂ, ಕೆಲವು ಕಹಿಸತ್ಯಗಳು ಮಕ್ಕಳಿಗೆ ತಿಳಿಯದಂತೆ ಮರೆಮಾಚಿರುವುದು ಸ್ಪಷ್ಟವಾಗುತ್ತಿದೆ. ‘ಸ್ವಾತಂತ್ರ್ಯ ಹೋರಾಟ’ ಎಂದು ಪರಿಷ್ಕರಿಸಲಾಗಿರುವ ಪಾಠದಲ್ಲಿ ಅಂಬೇಡ್ಕರ್‌ ಅವರ ಕುರಿತು ವಿವರಣೆಗಳನ್ನು ಉಳಿಸಿಕೊಂಡಿದ್ದರೂ ಕೆಲವೆಡೆ ಕತ್ತರಿ ಪ್ರಯೋಗ ಮಾಡಿರುವುದು ನೂತನ ಪಠ್ಯದ ಹಾಳೆಗಳಿಂದ ಸ್ಪಷ್ಟವಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಹಿಂದಿನ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ಜಾತಿ ವ್ಯವಸ್ಥೆಯಿಂದ ಬೇಸತ್ತ ಇವರು (ಅಂಬೇಡ್ಕರ್‌) ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”- ಹೀಗೆ ಹಿಂದಿನ ಪಠ್ಯದಲ್ಲಿ ಸಾಲುಗಳಿವೆ.

ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ತಮ್ಮ ಇಳಿ ವಯಸ್ಸಿನಲ್ಲಿ ಇವರು ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”

ಹೀಗೆ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದ್ದು, “ಅಂಬೇಡ್ಕರ್‌ ಅವರು ಜಾತಿ ವ್ಯವಸ್ಥೆಯಿಂದ ಬೇಸತ್ತಿದ್ದು, ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದ್ದು” ಎಂಬ ಅಂಶಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಹಾಕಿದೆ.

ಇದನ್ನೂ ಓದಿರಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

“ನಾನು ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯುವುದಿಲ್ಲ” ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿ ಸೇರುವ ಮುನ್ನ ದಶಕದ ಮುಂಚೆಯೇ ಘೋಷಣೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕನ್ನಡಿಗರೇ ಆಗ್ಲಿ, ಕರ್ನಾಟಕ ಸರ್ಕಾರವೇ ಆಗ್ಲಿ ಈಗಲೇ ಇಚ್ಛೆತ್ತು ಕೊಳ್ಳದಿದ್ದರೆ ಇನ್ನು ಸಾವಿರಾರು ಸತ್ಯಗಳು ಸುಳ್ಳಾಗಿ, ಸುಳ್ಳುಗಲ್ಲೆಲ್ಲ ಸತ್ಯವಾಗುತ್ತವೆ

  2. ಸತ್ಯವನ್ನು ಎಂದು ಮರೆಮಾಚಲಗದು… ಚಕ್ರತೀರ್ಥ ಎಂಬ ವೆಕ್ತಿಯನ್ನು ಕೂಡಲೇ ಸಮಿತಿಯಿಂದ ತೆಗೆದು ಹಾಕಿ..

  3. ಅತೀ ಬುದ್ಧಿವಂತಿಕೆ ಧೂರ್ತ ಲಕ್ಷಣಂ

    ಎನ್ನುವ ಮಾತು ಅಕ್ಷರಶಃ ನಿಜ ಎನ್ನುವುದನ್ನು ಈಚಿನ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ವೈಖರಿ ನಿಜವಾಗಿಸಿದೆ.

    ರಾಜ್ಯ ಸರಕಾರವು ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ತೆಗೆದು ಕೊಳ್ಳಬಾರದು ಮತ್ತು ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು

  4. ಚಕ್ರತೀರ್ಥರ ಈ ಪರಿ ಪಠ್ಯ ವಿರೋಧಿ ದೋರಣೆ ಸಲ್ಲದು.ಮೂಲ ಪಠ್ಯ ಕಾಯ್ದು ಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...