Homeಕರ್ನಾಟಕಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

ಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮವನ್ನು ಯಾಕೆ ಸ್ವೀಕರಿಸಿದರು ಎಂಬುದು ವಿಚಾರವಂತರೆಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಹತ್ತನೇ ತರಗತಿಯ ನೂತನ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬೌದ್ಧಧರ್ಮವನ್ನು ಸ್ವೀಕರಿಸಿದ್ದು ಏಕೆಂಬುದೇ ನಾಪತ್ತೆಯಾಗಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿತವಾದ ಸಮಾಜ ವಿಜ್ಞಾನ ಭಾಗ 2ರ ಪಠ್ಯಪುಸ್ತಕದಲ್ಲಿನ ‘ಗಾಂಧಿಯುಗ ಮತ್ತು ರಾಷ್ಟ್ರೀಯ ಹೋರಾಟ’ ಪಾಠದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ‌ಉಪಶೀರ್ಷಿಕೆಯಲ್ಲಿ ಪಠ್ಯವನ್ನು ನೀಡಲಾಗಿತ್ತು. ಈ ಭಾಗವನ್ನು ನೂತನ ಸಮಿತಿ ಉಳಿಸಿಕೊಳ್ಳಲಾಗಿದ್ದರೂ, ಕೆಲವು ಕಹಿಸತ್ಯಗಳು ಮಕ್ಕಳಿಗೆ ತಿಳಿಯದಂತೆ ಮರೆಮಾಚಿರುವುದು ಸ್ಪಷ್ಟವಾಗುತ್ತಿದೆ. ‘ಸ್ವಾತಂತ್ರ್ಯ ಹೋರಾಟ’ ಎಂದು ಪರಿಷ್ಕರಿಸಲಾಗಿರುವ ಪಾಠದಲ್ಲಿ ಅಂಬೇಡ್ಕರ್‌ ಅವರ ಕುರಿತು ವಿವರಣೆಗಳನ್ನು ಉಳಿಸಿಕೊಂಡಿದ್ದರೂ ಕೆಲವೆಡೆ ಕತ್ತರಿ ಪ್ರಯೋಗ ಮಾಡಿರುವುದು ನೂತನ ಪಠ್ಯದ ಹಾಳೆಗಳಿಂದ ಸ್ಪಷ್ಟವಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಹಿಂದಿನ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ಜಾತಿ ವ್ಯವಸ್ಥೆಯಿಂದ ಬೇಸತ್ತ ಇವರು (ಅಂಬೇಡ್ಕರ್‌) ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”- ಹೀಗೆ ಹಿಂದಿನ ಪಠ್ಯದಲ್ಲಿ ಸಾಲುಗಳಿವೆ.

ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ತಮ್ಮ ಇಳಿ ವಯಸ್ಸಿನಲ್ಲಿ ಇವರು ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”

ಹೀಗೆ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದ್ದು, “ಅಂಬೇಡ್ಕರ್‌ ಅವರು ಜಾತಿ ವ್ಯವಸ್ಥೆಯಿಂದ ಬೇಸತ್ತಿದ್ದು, ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದ್ದು” ಎಂಬ ಅಂಶಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಹಾಕಿದೆ.

ಇದನ್ನೂ ಓದಿರಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

“ನಾನು ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯುವುದಿಲ್ಲ” ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿ ಸೇರುವ ಮುನ್ನ ದಶಕದ ಮುಂಚೆಯೇ ಘೋಷಣೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕನ್ನಡಿಗರೇ ಆಗ್ಲಿ, ಕರ್ನಾಟಕ ಸರ್ಕಾರವೇ ಆಗ್ಲಿ ಈಗಲೇ ಇಚ್ಛೆತ್ತು ಕೊಳ್ಳದಿದ್ದರೆ ಇನ್ನು ಸಾವಿರಾರು ಸತ್ಯಗಳು ಸುಳ್ಳಾಗಿ, ಸುಳ್ಳುಗಲ್ಲೆಲ್ಲ ಸತ್ಯವಾಗುತ್ತವೆ

  2. ಸತ್ಯವನ್ನು ಎಂದು ಮರೆಮಾಚಲಗದು… ಚಕ್ರತೀರ್ಥ ಎಂಬ ವೆಕ್ತಿಯನ್ನು ಕೂಡಲೇ ಸಮಿತಿಯಿಂದ ತೆಗೆದು ಹಾಕಿ..

  3. ಅತೀ ಬುದ್ಧಿವಂತಿಕೆ ಧೂರ್ತ ಲಕ್ಷಣಂ

    ಎನ್ನುವ ಮಾತು ಅಕ್ಷರಶಃ ನಿಜ ಎನ್ನುವುದನ್ನು ಈಚಿನ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ವೈಖರಿ ನಿಜವಾಗಿಸಿದೆ.

    ರಾಜ್ಯ ಸರಕಾರವು ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ತೆಗೆದು ಕೊಳ್ಳಬಾರದು ಮತ್ತು ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು

  4. ಚಕ್ರತೀರ್ಥರ ಈ ಪರಿ ಪಠ್ಯ ವಿರೋಧಿ ದೋರಣೆ ಸಲ್ಲದು.ಮೂಲ ಪಠ್ಯ ಕಾಯ್ದು ಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...