Homeಕರ್ನಾಟಕಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

ಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮವನ್ನು ಯಾಕೆ ಸ್ವೀಕರಿಸಿದರು ಎಂಬುದು ವಿಚಾರವಂತರೆಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಹತ್ತನೇ ತರಗತಿಯ ನೂತನ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬೌದ್ಧಧರ್ಮವನ್ನು ಸ್ವೀಕರಿಸಿದ್ದು ಏಕೆಂಬುದೇ ನಾಪತ್ತೆಯಾಗಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿತವಾದ ಸಮಾಜ ವಿಜ್ಞಾನ ಭಾಗ 2ರ ಪಠ್ಯಪುಸ್ತಕದಲ್ಲಿನ ‘ಗಾಂಧಿಯುಗ ಮತ್ತು ರಾಷ್ಟ್ರೀಯ ಹೋರಾಟ’ ಪಾಠದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ‌ಉಪಶೀರ್ಷಿಕೆಯಲ್ಲಿ ಪಠ್ಯವನ್ನು ನೀಡಲಾಗಿತ್ತು. ಈ ಭಾಗವನ್ನು ನೂತನ ಸಮಿತಿ ಉಳಿಸಿಕೊಳ್ಳಲಾಗಿದ್ದರೂ, ಕೆಲವು ಕಹಿಸತ್ಯಗಳು ಮಕ್ಕಳಿಗೆ ತಿಳಿಯದಂತೆ ಮರೆಮಾಚಿರುವುದು ಸ್ಪಷ್ಟವಾಗುತ್ತಿದೆ. ‘ಸ್ವಾತಂತ್ರ್ಯ ಹೋರಾಟ’ ಎಂದು ಪರಿಷ್ಕರಿಸಲಾಗಿರುವ ಪಾಠದಲ್ಲಿ ಅಂಬೇಡ್ಕರ್‌ ಅವರ ಕುರಿತು ವಿವರಣೆಗಳನ್ನು ಉಳಿಸಿಕೊಂಡಿದ್ದರೂ ಕೆಲವೆಡೆ ಕತ್ತರಿ ಪ್ರಯೋಗ ಮಾಡಿರುವುದು ನೂತನ ಪಠ್ಯದ ಹಾಳೆಗಳಿಂದ ಸ್ಪಷ್ಟವಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಹಿಂದಿನ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ಜಾತಿ ವ್ಯವಸ್ಥೆಯಿಂದ ಬೇಸತ್ತ ಇವರು (ಅಂಬೇಡ್ಕರ್‌) ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”- ಹೀಗೆ ಹಿಂದಿನ ಪಠ್ಯದಲ್ಲಿ ಸಾಲುಗಳಿವೆ.

ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ತಮ್ಮ ಇಳಿ ವಯಸ್ಸಿನಲ್ಲಿ ಇವರು ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”

ಹೀಗೆ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದ್ದು, “ಅಂಬೇಡ್ಕರ್‌ ಅವರು ಜಾತಿ ವ್ಯವಸ್ಥೆಯಿಂದ ಬೇಸತ್ತಿದ್ದು, ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದ್ದು” ಎಂಬ ಅಂಶಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಹಾಕಿದೆ.

ಇದನ್ನೂ ಓದಿರಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

“ನಾನು ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯುವುದಿಲ್ಲ” ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿ ಸೇರುವ ಮುನ್ನ ದಶಕದ ಮುಂಚೆಯೇ ಘೋಷಣೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕನ್ನಡಿಗರೇ ಆಗ್ಲಿ, ಕರ್ನಾಟಕ ಸರ್ಕಾರವೇ ಆಗ್ಲಿ ಈಗಲೇ ಇಚ್ಛೆತ್ತು ಕೊಳ್ಳದಿದ್ದರೆ ಇನ್ನು ಸಾವಿರಾರು ಸತ್ಯಗಳು ಸುಳ್ಳಾಗಿ, ಸುಳ್ಳುಗಲ್ಲೆಲ್ಲ ಸತ್ಯವಾಗುತ್ತವೆ

  2. ಸತ್ಯವನ್ನು ಎಂದು ಮರೆಮಾಚಲಗದು… ಚಕ್ರತೀರ್ಥ ಎಂಬ ವೆಕ್ತಿಯನ್ನು ಕೂಡಲೇ ಸಮಿತಿಯಿಂದ ತೆಗೆದು ಹಾಕಿ..

  3. ಅತೀ ಬುದ್ಧಿವಂತಿಕೆ ಧೂರ್ತ ಲಕ್ಷಣಂ

    ಎನ್ನುವ ಮಾತು ಅಕ್ಷರಶಃ ನಿಜ ಎನ್ನುವುದನ್ನು ಈಚಿನ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ವೈಖರಿ ನಿಜವಾಗಿಸಿದೆ.

    ರಾಜ್ಯ ಸರಕಾರವು ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ತೆಗೆದು ಕೊಳ್ಳಬಾರದು ಮತ್ತು ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು

  4. ಚಕ್ರತೀರ್ಥರ ಈ ಪರಿ ಪಠ್ಯ ವಿರೋಧಿ ದೋರಣೆ ಸಲ್ಲದು.ಮೂಲ ಪಠ್ಯ ಕಾಯ್ದು ಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...