Homeಕರ್ನಾಟಕಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

ಸಮಾಜ ವಿಜ್ಞಾನ: ‘ಅಂಬೇಡ್ಕರ್‌’ ಪಠ್ಯದಲ್ಲಿ ಕತ್ತರಿ ಪ್ರಯೋಗ ಮಾಡಿದ ‘ಚಕ್ರತೀರ್ಥ’ ಸಮಿತಿ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮವನ್ನು ಯಾಕೆ ಸ್ವೀಕರಿಸಿದರು ಎಂಬುದು ವಿಚಾರವಂತರೆಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಹತ್ತನೇ ತರಗತಿಯ ನೂತನ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಬೌದ್ಧಧರ್ಮವನ್ನು ಸ್ವೀಕರಿಸಿದ್ದು ಏಕೆಂಬುದೇ ನಾಪತ್ತೆಯಾಗಿದೆ.

ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸರ್ವಾಧ್ಯಕ್ಷತೆಯಲ್ಲಿ ರೂಪಿತವಾದ ಸಮಾಜ ವಿಜ್ಞಾನ ಭಾಗ 2ರ ಪಠ್ಯಪುಸ್ತಕದಲ್ಲಿನ ‘ಗಾಂಧಿಯುಗ ಮತ್ತು ರಾಷ್ಟ್ರೀಯ ಹೋರಾಟ’ ಪಾಠದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ‌ಉಪಶೀರ್ಷಿಕೆಯಲ್ಲಿ ಪಠ್ಯವನ್ನು ನೀಡಲಾಗಿತ್ತು. ಈ ಭಾಗವನ್ನು ನೂತನ ಸಮಿತಿ ಉಳಿಸಿಕೊಳ್ಳಲಾಗಿದ್ದರೂ, ಕೆಲವು ಕಹಿಸತ್ಯಗಳು ಮಕ್ಕಳಿಗೆ ತಿಳಿಯದಂತೆ ಮರೆಮಾಚಿರುವುದು ಸ್ಪಷ್ಟವಾಗುತ್ತಿದೆ. ‘ಸ್ವಾತಂತ್ರ್ಯ ಹೋರಾಟ’ ಎಂದು ಪರಿಷ್ಕರಿಸಲಾಗಿರುವ ಪಾಠದಲ್ಲಿ ಅಂಬೇಡ್ಕರ್‌ ಅವರ ಕುರಿತು ವಿವರಣೆಗಳನ್ನು ಉಳಿಸಿಕೊಂಡಿದ್ದರೂ ಕೆಲವೆಡೆ ಕತ್ತರಿ ಪ್ರಯೋಗ ಮಾಡಿರುವುದು ನೂತನ ಪಠ್ಯದ ಹಾಳೆಗಳಿಂದ ಸ್ಪಷ್ಟವಾಗುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಹಿಂದಿನ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ಜಾತಿ ವ್ಯವಸ್ಥೆಯಿಂದ ಬೇಸತ್ತ ಇವರು (ಅಂಬೇಡ್ಕರ್‌) ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”- ಹೀಗೆ ಹಿಂದಿನ ಪಠ್ಯದಲ್ಲಿ ಸಾಲುಗಳಿವೆ.

ರೋಹಿತ್‌ ಚಕ್ರತೀರ್ಥ ಸಮಿತಿಯ ಪಠ್ಯದಲ್ಲಿನ ಸಾಲುಗಳು

“ಆಧುನಿಕತೆ, ವೈಚಾರಿಕತೆ ಮತ್ತು ಪಾಶ್ಚಾತ್ಯ ವಿದ್ವಾಂಸರಿಂದ ಪ್ರೇರಣೆ ಪಡೆದರೂ ದೇಶೀಯ ಬೇರುಗಳ ಕಡೆಗೆ ಒಲವನ್ನು ತೋರಿದರು. ತಮ್ಮ ಇಳಿ ವಯಸ್ಸಿನಲ್ಲಿ ಇವರು ಹಿಂದೂ ಧರ್ಮವನ್ನು ತೊರೆದು ಭಾರತೀಯ ಸಂಸ್ಕೃತಿಯ ಭಾಗವಾಗಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದರು. ಮಾರ್ಕ್ಸ್‌ವಾದವು ಯಾವ ಬದಲಾವಣೆಯನ್ನು ರಕ್ತ ಮತ್ತು ಹಿಂಸೆಯಿಂದ ತರಬಹುದೋ ಅದನ್ನು ಬೌದ್ಧ ಧರ್ಮವು ಶಾಂತಿ ಮತ್ತು ಅಹಿಂಸಾತ್ಮಕವಾಗಿ ತರಬಲ್ಲದು ಎಂದು ಅವರು ನಂಬಿದ್ದರು. ಅವರ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ಇವರಿಗೆ ಮರಣೋತ್ತರವಾಗಿ ‘ಭಾರತರತ್ನ’ವನ್ನು ನೀಡಿ ಗೌರವಿಸಿದೆ.”

ಹೀಗೆ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದ್ದು, “ಅಂಬೇಡ್ಕರ್‌ ಅವರು ಜಾತಿ ವ್ಯವಸ್ಥೆಯಿಂದ ಬೇಸತ್ತಿದ್ದು, ಜಾತಿ ಮತ್ತು ಸಾಮಾಜಿಕ ಶ್ರೇಣೀಕರಣವನ್ನು ವಿರೋಧಿಸಿದ್ದ ಬೌದ್ಧಧರ್ಮವನ್ನು ಸ್ವೀಕರಿಸಿದ್ದು” ಎಂಬ ಅಂಶಗಳಿಗೆ ಚಕ್ರತೀರ್ಥ ಸಮಿತಿ ಕತ್ತರಿ ಹಾಕಿದೆ.

ಇದನ್ನೂ ಓದಿರಿ: ಜಿ.ರಾಮಕೃಷ್ಣ, ಲಂಕೇಶ್‌ರವರ ಜಾತಿ ಗೊತ್ತಿಲ್ಲ: ರೋಹಿತ್ ಚಕ್ರತೀರ್ಥ ಸಂದರ್ಶನ

“ನಾನು ಹಿಂದೂವಾಗಿ ಹುಟ್ಟಿದ್ದೇನೆ, ಆದರೆ ಹಿಂದೂವಾಗಿ ಸಾಯುವುದಿಲ್ಲ” ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧಧರ್ಮಕ್ಕೆ ಮರಳಿ ಸೇರುವ ಮುನ್ನ ದಶಕದ ಮುಂಚೆಯೇ ಘೋಷಣೆ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಕನ್ನಡಿಗರೇ ಆಗ್ಲಿ, ಕರ್ನಾಟಕ ಸರ್ಕಾರವೇ ಆಗ್ಲಿ ಈಗಲೇ ಇಚ್ಛೆತ್ತು ಕೊಳ್ಳದಿದ್ದರೆ ಇನ್ನು ಸಾವಿರಾರು ಸತ್ಯಗಳು ಸುಳ್ಳಾಗಿ, ಸುಳ್ಳುಗಲ್ಲೆಲ್ಲ ಸತ್ಯವಾಗುತ್ತವೆ

  2. ಸತ್ಯವನ್ನು ಎಂದು ಮರೆಮಾಚಲಗದು… ಚಕ್ರತೀರ್ಥ ಎಂಬ ವೆಕ್ತಿಯನ್ನು ಕೂಡಲೇ ಸಮಿತಿಯಿಂದ ತೆಗೆದು ಹಾಕಿ..

  3. ಅತೀ ಬುದ್ಧಿವಂತಿಕೆ ಧೂರ್ತ ಲಕ್ಷಣಂ

    ಎನ್ನುವ ಮಾತು ಅಕ್ಷರಶಃ ನಿಜ ಎನ್ನುವುದನ್ನು ಈಚಿನ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ವೈಖರಿ ನಿಜವಾಗಿಸಿದೆ.

    ರಾಜ್ಯ ಸರಕಾರವು ಇದನ್ನು ಪ್ರತಿಷ್ಠೆಯ ವಿಷಯವನ್ನಾಗಿ ತೆಗೆದು ಕೊಳ್ಳಬಾರದು ಮತ್ತು ಈ ನಿಟ್ಟಿನಲ್ಲಿ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು

  4. ಚಕ್ರತೀರ್ಥರ ಈ ಪರಿ ಪಠ್ಯ ವಿರೋಧಿ ದೋರಣೆ ಸಲ್ಲದು.ಮೂಲ ಪಠ್ಯ ಕಾಯ್ದು ಕೊಳ್ಳಬೇಕು.

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...