Homeಕರ್ನಾಟಕಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

ಗೌರವಾನ್ವಿತ ಜಸ್ಟೀಸ್‌ ದಾಸ್ ವಿರುದ್ಧ ದ್ವೇಷ ಕಾರಿದ ಮತೀಯವಾದಿ ಸಂಘಟನೆ; ಕ್ರಮಕ್ಕೆ ಆಗ್ರಹ

ದಲಿತರಿಗೆ ಮೀಸಲಾತಿ ಹೆಚ್ಚಿಸುವಂತೆ ಶಿಫಾರಸ್ಸು ನೀಡಿರುವ ಜಸ್ಟೀಸ್‌ ಎಚ್.ಎನ್‌.ನಾಗಮೋಹನ್‌ ದಾಸ್‌ ವರದಿಯನ್ನು ಮತೀಯವಾದಿ ಸಂಘಟನೆ ವಿರೋಧಿಸಿದೆ.

- Advertisement -
- Advertisement -

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಸಮಿತಿಯು ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡುವಂತೆ ಸಲ್ಲಿಸಿರುವ ವರದಿಗೆ ಮತೀಯವಾದಿ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿ ವಿರೋಧ ವ್ಯಕ್ತಪಡಿಸಿದೆ.

ವಿಚಾರವಾದಿಗಳ ಹತ್ಯೆಗಳನ್ನು ನಡೆಸಿರುವ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆಯ ಸ್ಥಳೀಯ ಅವತರಣಿಕೆಯಾದ ಹಿಂದೂ ಜನಜಾಗೃತಿ ಜಾಗೃತಿ ವೇದಿಕೆಯ ರಾಜ್ಯ ವಕ್ತಾರ ಮೋಹನ್‌ಗೌಡ ನೀಡಿರುವ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಚಾರ್ಜ್‌‌ಶೀಟ್‌ನಲ್ಲಿ ಉಲ್ಲೇಖಗೊಂಡಿರುವ ಮೋಹನ್‌ಗೌಡ ಎಂಬ ವ್ಯಕ್ತಿಯು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಜಸ್ಟೀಸ್‌ ನಾಗಮೋಹನ್ ದಾಸ್ ಅವರನ್ನು ಹಿಂದೂ ವಿರೋಧಿ, ದೇಶದ್ರೋಹಿ” ಎಂದು ಜರಿದಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗೌರಿ ಹತ್ಯೆಯಲ್ಲಿ ಆರೋಪಿಯವಾಗಿರುವ ಕೆ.ಟಿ.ನವೀನ್‌ಕುಮಾರ್‌ ಮತ್ತು ಮೋಹನ್‌ಗೌಡನಿಗೂ ಇದ್ದ ಸಂಪರ್ಕವನ್ನು ಪ್ರಕರಣದ ಚಾರ್ಜ್‌‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಕೆ.ಟಿ.ನವೀನ್‌ಕುಮಾರ್‌ ಮತ್ತು ಕೊಲೆಯ ಷಡ್ಯಂತ್ರ ನಡೆಸಿದ ಗುಂಪಿಗೆ ಕೊಂಡಿಯಾಗಿದ್ದವನು ಮೋಹನ್‌ಗೌಡ ಎಂಬುದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಗೊಂಡಿದೆ (ಆದರೆ ಆರೋಪಿಯಲ್ಲ). ಕರಾಳ ಹಿನ್ನೆಲೆಯ ಮತೀಯವಾದಿಯು ಗೌರವಾನ್ವಿತ ಜಸ್ಟೀಸ್ ದಾಸ್ ಅವರ ವಿರುದ್ಧ ಹೇಳಿಕೆ ನೀಡಿದ್ದಾನೆ. ಇಂತಹ ಕೋಮುವಾದಿಗಳನ್ನು ಸರ್ಕಾರ ತಕ್ಷಣವೇ ಬಂಧಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಯಲ್ಲಿ ನವೆಂಬರ್‌ 1ರಂದು ಪ್ರಕಟವಾಗಿರುವ ವರದಿ ಹಿನ್ನೆಲೆಯಲ್ಲಿ ಮೋಹನ್‌ಗೌಡ ಹೇಳಿಕೆ ಹೊರಬಿದ್ದಿದೆ.

ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಚಿಂತನೆಗಳನ್ನು ಆಧರಿಸಿ, ಚಾರಿತ್ರಿಕ ಹಿನ್ನೆಲೆಗಳನ್ನು ಉಲ್ಲೇಖಿಸಿ ಮೀಸಲಾತಿ ಹೆಚ್ಚಳ ಕುರಿತಂತೆ ವರದಿಯನ್ನು ಜಸ್ಟೀಸ್ ದಾಸ್ ಅವರು ಸರ್ಕಾರಕ್ಕೆ ಸಲ್ಲಿಸಿದ್ದರು. ಅದರ ಅನ್ವಯ ಬಿಜೆಪಿ ಸರ್ಕಾರ ವರದಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ.

“ವೈದಿಕ ತತ್ವವು ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆಯನ್ನು ಬೆಳೆಸಿದೆ” ಎಂದಿರುವ ಜಸ್ಟೀಸ್ ದಾಸ್ ಅವರು ಸಾಮಾಜಿಕ ಅಸಮಾನತೆ ಮತ್ತು ಜಾತಿ ವ್ಯವಸ್ಥೆಯ ಮೂಲಗಳನ್ನು ದಾಖಲಿಸಿದ್ದಾರೆ. ‘ಜಾತಿಗಳ ಮೂಲ’ ಎಂಬ ಶೀರ್ಷಿಕೆಯ ಅಧ್ಯಾಯದಲ್ಲಿ, ಪ್ರತಿಜಾತಿಯು ಜನಾಂಗೀಯ ಗುಣವನ್ನು ಹೊಂದಿದೆ ಎಂದು ಬರೆದಿದ್ದಾರೆ.

“ಇವೆಲ್ಲವೂ ಬ್ರಾಹ್ಮಣರಿಂದ, ಉಪನಿಷತ್‌, ಮಹಾಭಾರತ ಮತ್ತು ರಾಮಾಯಣದಂತಹ ಮಹಾಕಾವ್ಯಗಳಿಂದಾಗಿ ಸಂಭವಿಸಿದವು…” ಎಂಬ ಸಾಲು ಇರುವುದಾಗಿ ‘ಡೆಕ್ಕನ್ ಹೆರಾಲ್ಡ್‌’ ವರದಿ ಮಾಡಿದೆ.

ಆಂಥ್ರೊಪೊಲಾಜಿಕಲ್ ಸರ್ವೆ ಆಫ್ ಇಂಡಿಯಾವನ್ನು ಉಲ್ಲೇಖಿಸಿರುವ ವರದಿಯು, “ಭಾರತವು 4,635 ಜನಾಂಗೀಯ ಸಮುದಾಯಗಳಿಗೆ ನೆಲೆಯಾಗಿದೆ. ಪ್ರತಿಯೊಂದು ಸಮುದಾಯಕ್ಕೂ ತನ್ನದೇ ಆದ ಆನುವಂಶಿಕ ಲಕ್ಷಣಗಳು, ಭಾಷೆಗಳು, ಆಹಾರ ಪದ್ಧತಿ ಇವೆ. ಸತ್ಯವೆಂದರೆ ಜಾತಿ ವ್ಯವಸ್ಥೆಯ ಆಗಮನದೊಂದಿಗೆ ಜನಾಂಗೀಯ ವ್ಯವಸ್ಥೆಯು ಶಿಥಿಲಗೊಂಡಿದೆ” ಎಂದಿದೆ.

ಪ್ರಾಣಿಬಲಿ, ಬಾಲ್ಯವಿವಾಹ, ವಿಧವಾ ವಿವಾಹ ನಿಷೇಧ, ಮರಣದ ಆಚರಣೆಗೆ ಸಂಬಂಧಿಸಿದ ವಿಧಿವಿಧಾನಗಳು, ಪಿತೃಪ್ರಭುತ್ವ ಮತ್ತು ಇತರ “ವೈದಿಕ ವಿಧಿಗಳು ಮತ್ತು ಆಚರಣೆಗಳು” ಕರ್ನಾಟಕಕ್ಕೆ ಬಂದವು ಎಂದು ವರದಿಯಲ್ಲಿ ಹೇಳಲಾಗಿದೆ. “ಇವುಗಳಲ್ಲಿ ಅತ್ಯಂತ ಮುಖ್ಯವಾದದ್ದು ಜಾತಿ ವ್ಯವಸ್ಥೆ” ಎಂದು ಉಲ್ಲೇಖಿಸಲಾಗಿದೆ. “ಭಾರತದಲ್ಲಿ, ಬುಡಕಟ್ಟು ಸಮುದಾಯಗಳ ಸಂಸ್ಕೃತಿಯನ್ನು ಜಾತಿ ಸಮುದಾಯಗಳಾಗಿ ಪರಿವರ್ತಿಸುವಲ್ಲಿ ಆರ್ಯನ್ ಸಂಸ್ಕೃತಿ ಪ್ರಮುಖ ಪಾತ್ರ ವಹಿಸಿದೆ” ಎಂದು ದಾಖಲಿಸಲಾಗಿದೆ.

“ಆರ್ಯನ್ನರು, ಪರ್ಷಿಯನ್ನರು, ಗ್ರೀಕರು, ತುರ್ಕರು, ಮಂಗೋಲಿಯನ್ನರು, ಯುರೋಪಿಯನ್ನರು ಮುಂತಾದ ಅನೇಕ ವಿದೇಶಿ ಆಕ್ರಮಣಕಾರರು ಬಂದು ಸ್ಥಳೀಯ ಜನರ ವಿರುದ್ಧ ಹೋರಾಡಿದರು. ಸ್ಥಳೀಯರು ಮತ್ತು ಹೊರಗಿನವರ ನಡುವೆ ಘರ್ಷಣೆಗಳು ನಡೆದವು. ಯುದ್ಧವನ್ನು ಗೆದ್ದವರು ಸ್ಥಳೀಯ ಮಹಿಳೆಯರೊಂದಿಗೆ ಸಂಬಂಧವನ್ನು ಬೆಳೆಸಿಕೊಂಡರು. ಪರಿಣಾಮವಾಗಿ ಮಿಶ್ರ ಜನಾಂಗದವರು ಹೊರಹೊಮ್ಮಿದರು. ಈ ಮಿಶ್ರ ಜನಾಂಗಗಳು ವಿಭಿನ್ನ ಗುಂಪುಗಳಾಗಿ ಮಾರ್ಪಟ್ಟವು” ಎಂದು ವಿವರಿಸಲಾಗಿದೆ.

‘ಜಾತಿ ಅಸಮಾನತೆ’ ಎಂಬ ಶೀರ್ಷಿಕೆಯ ಇನ್ನೊಂದು ಅಧ್ಯಾಯದಲ್ಲಿ ಜಸ್ಟೀಸ್ ದಾಸ್‌ ಸಮಿತಿಯು, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಬಹುತೇಕ ಕಡೆ ಉಲ್ಲೇಖಿಸಿದೆ. “ಶಿಕ್ಷಣ ಮತ್ತು ಜ್ಞಾನವನ್ನು ಬ್ರಾಹ್ಮಣರ ಏಕಸ್ವಾಮ್ಯವನ್ನಾಗಿ ಮಾಡಲಾಗಿದೆ” ಎಂದು ವಿಷಾದಿಸಿದೆ.

“ಸೇನೆ ಮತ್ತು ಆಡಳಿತವು ಕ್ಷತ್ರಿಯರಿಗೆ ಮೀಸಲಾಗಿತ್ತು. ವ್ಯಾಪಾರ ಮತ್ತು ವಾಣಿಜ್ಯವು ವೈಶ್ಯರಿಗೆ, ಶೂದ್ರರಿಗೆ ಕಠಿಣ, ಅಸಭ್ಯ ಮತ್ತು ಹೊಲಸು ಕೆಲಸಗಳನ್ನು ನೀಡಲಾಯಿತು. ಶೂದ್ರರನ್ನು ಸಾಮಾಜಿಕ ಕ್ರಮದ ಅತ್ಯಂತ ಕೆಳಮಟ್ಟದಲ್ಲಿ ಇರಿಸಲಾಯಿತು. ಚಾತುರ್ವರ್ಣವನ್ನು ಮೀರಿ, ಅಸ್ಪೃಶ್ಯ ವರ್ಗದ ಜನರನ್ನು ಸೃಷ್ಟಿಸಲಾಯಿತು. ಜಾತಿ ಆಧಾರಿತ ಅಸಮಾನತೆ ಸಮಾಜದಲ್ಲಿ ಸರ್ವವ್ಯಾಪಿಯಾಗಿದೆ. ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅಸಮಾನತೆ ಇದೆ” ಎಂದು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ವಿವರಿಸಲಾಗಿದೆ.

‘ಡೆಕ್ಕನ್‌ ಹೆರಾಲ್ಡ್‌’ ಮಾಡಿದ ವರದಿಯನ್ನು ಉಲ್ಲೇಖಿಸಿ ಮತೀಯವಾದಿ ಸಂಘಟನೆ ಹೇಳಿಕೆ ನೀಡಿದ್ದು, ಜಸ್ಟೀಸ್ ದಾಸ್ ಅವರನ್ನು ಹಿಂದೂ ವಿರೋಧಿ, ದೇಶದ್ರೋಹಿ ಎಂದು ಬಿಂಬಿಸಲು ಹೊರಟಿದೆ.

ಚಿಂತಕರಾದ ಶಿವಸುಂದರ್‌ ಅವರು ಹಿಂದೂ ಜನಜಾಗೃತಿ ಸಮಿತಿ ಹೇಳಿಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, “ಈ ಹಿಂದುತ್ವವಾದಿಗಳು ಬಿಜೆಪಿ ಸರ್ಕಾರದ ವಿರುದ್ಧ ಮೊದಲು ಹೋರಾಟ ಮಾಡಬೇಕು. ಸಚಿವ ಸಂಪುಟವು ಈ ವರದಿಯನ್ನು ಇಡಿಯಾಗಿ ಒಮ್ಮತದಿಂದ ಒಪ್ಪಿರುವುದಾಗಿ ಪದೇಪದೇ ಬಿಜೆಪಿ ಹೇಳಿಕೆ ನೀಡಿದೆ. ಕೇವಲ ಶಿಫಾರಸ್ಸನ್ನು ಮಾತ್ರ ಅವರು ಒಪ್ಪಿಕೊಂಡಿಲ್ಲ. ಅದಕ್ಕೆ ನೀಡಿರುವ ಕಾರಣಗಳನ್ನೂ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಈ ಕುರಿತು ಇವರು ಪ್ರಶ್ನಿಸಬೇಕು. ಕೇವಲ ಪತ್ರಿಕಾ ವರದಿಯನ್ನು ಆಧರಿಸಿ ಜಸ್ಟೀಸ್ ದಾಸ್ ಅವರನ್ನು ಟೀಕಿಸುತ್ತಿದ್ದಾರೆ. ಆದರೆ ವರದಿಯನ್ನು ಬಹಿರಂಗಪಡಿಸಲು ಸರ್ಕಾರವನ್ನು ಒತ್ತಾಯಿಸಬೇಕು” ಎಂದರು.

“ಜಾತಿ ವ್ಯವಸ್ಥೆಯ ಕುರಿತು ಜಸ್ಟೀಸ್ ದಾಸ್ ಅವರಷ್ಟೇ ಅಲ್ಲದೇ ಅನೇಕರು ಮಾತನಾಡಿದ್ದಾರೆ. ಇದು ಹೊಸ ವಿಚಾರವೇನೂ ಅಲ್ಲ. ಆರ್‌.ಎಸ್.ಎಸ್. ಮುಖ್ಯಸ್ಥರಾಗಿದ್ದ ಎಂ.ಎಸ್.ಗೋಳ್ವಲ್ಕರ್‌ ತಮ್ಮ ‘ಚಿಂತನೆಯ ಗೊಂಚಲು’ ಕೃತಿಯಲ್ಲಿ ಈ ಕುರಿತು ಪ್ರಸ್ತಾಪಿಸಿದ್ದಾರೆ. ಈ ದೇಶದಲ್ಲಿ ಜಾತಿ ವ್ಯವಸ್ಥೆ ಇರುವುದರಿಂದಲೇ ಹಿಂದೂ ಧರ್ಮ ಉಳಿದುಕೊಂಡಿದೆ. ಈಶಾನ್ಯ ಹಾಗೂ ವಾಯುವ್ಯ ಭಾರತದಲ್ಲಿ ಜಾತಿ ವ್ಯವಸ್ಥೆ ಕುಸಿದಿದ್ದರಿಂದಲೇ ಪರಧರ್ಮಗಳು ಪ್ರಭಾವ ಬೀರಿದವು. ಆದ್ದರಿಂದ ನಾವು ಭಾರತವನ್ನು ಕೇವಲ ನೂರಿನ್ನೂರು ವರ್ಷಗಳ ಹಿಂದಕ್ಕಲ್ಲ, ಸಾವಿರ ವರ್ಷಗಳ ಹಿಂದಕ್ಕೆ ಕೊಂಡೊಯ್ಯಬೇಕು ಎಂದು ಗೋಳ್ವಲ್ಕರ್‌ ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೂ ಜನಜಾಗೃತಿ ವೇದಿಕೆಯವರು ಗೋಳ್ವಲ್ಕರ್‌ರನ್ನು ವಿರೋಧಿಸಬೇಕು” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿರಿ: ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

“ಬಿಜೆಪಿ ಸರ್ಕಾರ ರೂಪಿಸಿರುವ ಶಿಕ್ಷಣ ನೀತಿಯ ಪೊಸಿಷನ್‌ ಪೇಪರ್‌ನಲ್ಲಿ ಜಾತಿ ವ್ಯವಸ್ಥೆ ಕುರಿತು ಉಲ್ಲೇಖಿಸಲಾಗಿದೆ. ಇತಿಹಾಸಕ್ಕೆ ಸಂಬಂಧಿಸಿದ ಪೇಪರ್‌ನಲ್ಲಿ ಜಾತಿ ವ್ಯವಸ್ಥೆಯು ಗುಪ್ತರ ಕಾಲದಲ್ಲಿ ಸ್ಥಿರಸಮಾಜವನ್ನು ತಂದುಕೊಟ್ಟಿತು ಎಂದು ಬರೆಯಲಾಗಿದೆ. ಗುಪ್ತರ ಕಾಲದಲ್ಲಿ ಸಾಮಾಜಿಕ ಸ್ಥಿರತೆ ಹುಟ್ಟಲು ಕಾರಣವೇನೆಂದರೆ- ವರ್ಣವ್ಯವಸ್ಥೆಯು ಜಾತಿ ವ್ಯವಸ್ಥೆಗೆ ರೂಪಾಂತರಗೊಂಡು ಸ್ಥಿರತೆ ಮತ್ತು ಶಾಂತಿ ಸಮೃದ್ಧಿ ಸಾಧ್ಯವಾಯಿತು ಎಂದು ಬರೆಯಲಾಗಿದೆ. ಇದನ್ನು ಹೇಳುತ್ತಿರುವವರಲ್ಲಿ ನಾಗಮೋಹನ್ ದಾಸ್ ಅವರು ಕೊನೆಯವರು. ಮೊದಲಿಗರು ಗೋಳ್ವಲ್ಕರ್‌. ಈ ಶ್ರೇಣಿಕೃತ ವ್ಯವಸ್ಥೆಯನ್ನು ವಿರೋಧಿಸಿದ ಬೌದ್ಧಧರ್ಮವನ್ನು ಸಾವರ್ಕರ್‌ ದೇಶದ್ರೋಹಿ ಧರ್ಮ ಎಂದು ಬರೆದಿದ್ದಾರೆ. Six Glorious Epochs of Indian History ಪುಸ್ತಕದಲ್ಲಿ 28 ಕಡೆ ಬುದ್ಧಧರ್ಮವನ್ನು ದೇಶದ್ರೋಹಿ ಎಂದು ನಿಂದಿಸಿದ್ದಾರೆ. ಬ್ರಾಹ್ಮಣ್ಯ ಹಾಗೂ ವೈದಿಕ ವ್ಯವಸ್ಥೆಯೇ ದೇಶವನ್ನು ಉಳಿಸುತ್ತೆ, ಬೌದ್ಧಧರ್ಮವು ಸಮಾಜದಲ್ಲಿ ಅಸ್ಥಿರತೆ ತರುತ್ತದೆ ಎಂದು ಸಾವರ್ಕರ್‌‌ ಹೇಳಿದ್ದಾರೆ. ಇವರು ವಿರೋಧಿಸುವುದಾದರೆ ಸಾವರ್ಕರ್‌‌ ವಿಚಾರಗಳನ್ನು ವಿರೋಧಿಸಬೇಕು” ಎಂದು ಒತ್ತಾಯಿಸಿದರು.

ಕನ್ನಡಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಹರೀಶ್‌ ಭೈರಪ್ಪ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಗೌರವಾನ್ವಿತ ಜಸ್ಟೀಸ್ ನಾಗಮೋಹನ್ ಅವರ ವಿರುದ್ಧ ಈ ರೀತಿಯ ಹೇಳಿಕೆ ಕೊಡುವ ಪಾತಕಿಗಳನ್ನು ಸರ್ಕಾರ ಜೈಲಿಗೆ ಕಳುಹಿಸಬೇಕು. ನಾಗಮೋಹನ ದಾಸ್ ಅವರು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ, ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರಾಗಿ ಸೇವೆ ಸಲ್ಲಿಸಿ ನಾಡಿಗೆ ಘನತೆ ತಂದವರು. ಸರ್ಕಾರಗಳು ಆಯಾ ಕಾಲಕ್ಕೆ ಅನೇಕ ಜವಾಬ್ದಾರಿಗಳನ್ನು ದಾಸ್ ಅವರಿಗೆ ವಹಿಸಿವೆ. ಅವರು ನೀಡುವ ನ್ಯಾಯ ಹಾಗೂ ನಿಷ್ಪಕ್ಷಪಾತ ಸಲಹೆ, ಮಾರ್ಗದರ್ಶನಗಳನ್ನು ಸರ್ಕಾರಗಳು ಸ್ವೀಕರಿಸಿವೆ. ಸಂವಿಧಾನ ಓದು ಅಭಿಯಾನದ ಮೂಲಕ ನಾಡಿನ ಮಕ್ಕಳಲ್ಲಿ ಜಾತ್ಯತೀತತೆ, ಧರ್ಮನಿರಪೇಕ್ಷತೆ, ಸೌಹಾರ್ದತೆ, ಸಮಾನತೆ, ಬಹುತ್ವದ ಆಶಯಗಳು ಬೆಳೆಯಲು ಅವರು ಕಾರಣವಾಗಿದ್ದಾರೆ. ಇಂಥವರನ್ನು ದೇಶದ್ರೋಹಿ, ಹಿಂದೂ ವಿರೋಧಿ ಎನ್ನುವ ಮತೀಯವಾದಿಗಳ ವಿರುದ್ಧ ತುರ್ತಾಗಿ ಸರ್ಕಾರ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

“ದಾಸ್ ಅವರ ವ್ಯಕ್ತಿತ್ವದ ಕುರಿತು ಹಗುರವಾಗಿ ಮಾತನಾಡುವ ಹಿಂದುತ್ವ ಭಯೋತ್ಪಾದಕರನ್ನು ಕೂಡಲೇ ಬಂಧಿಸಿ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...