Homeಮುಖಪುಟನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

- Advertisement -
- Advertisement -

| ಎ.ಕೆ.ಸುಬ್ಬಯ್ಯ | ಹಿರಿಯ ಚಿಂತಕರು.

ನರೇಂದ್ರ ಮೋದಿಯ ವ್ಯಕ್ತಿಚಿತ್ರದ ಎದುರಾಗಿ ರಾಹುಲ್ ಗಾಂಧಿಯನ್ನು ನಿಲ್ಲಿಸೋಣ. ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿಗಿಂತ ಕೆಟ್ಟವನು ಎಂದು ಹೇಳಲು ಸಾಧ್ಯವೇ ಇಲ್ಲ. ಅಥವಾ ನರೇಂದ್ರ ಮೋದಿ ರಾಹುಲ್ ಗಾಂಧಿಯಷ್ಟು ಒಳ್ಳೆಯವನು ಎಂದು ಹೇಳಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ರಾಹುಲ್ ಗಾಂಧಿಯಿಂದ ನರೇಂದ್ರ ಮೋದಿ ಆಗಲು ಸಾಧ್ಯವಿಲ್ಲ. ನರೇಂದ್ರ ಮೋದಿಯಿಂದ ರಾಹುಲ್ ಗಾಂಧಿ ಆಗಲು ಸಾಧ್ಯವಿಲ್ಲ.

ನರೇಂದ್ರ ಮೋದಿಯ ಸ್ಥಾನದಲ್ಲಿ ರಾಹುಲ್ ಗಾಂಧಿ ಇದ್ದಿದ್ದರೆ ಗುಜರಾತ್ ಹತ್ಯಾಕಾಂಡ ನಡೆಯುತ್ತಿತ್ತೇ? ಅದರ ನಂತರ ಸಿಬಿಐ ಅನ್ನು ವಶ ಮಾಡಿಕೊಂಡು ಅದರ ಮೂಲಕ ಕ್ರಿಮಿನಲ್‍ಗಳನ್ನೆಲ್ಲಾ ಪಾರು ಮಾಡುವ ಮಟ್ಟಕ್ಕೆ ರಾಹುಲ್ ಗಾಂಧಿ ಹೋಗುತ್ತಿದ್ದರಾ? ಯಾವ ಕಾರಣದಿಂದಲೂ, ಯಾವ ದೃಷ್ಟಿಕೋನದಿಂದಲೂ ನರೇಂದ್ರ ಮೋದಿಯಷ್ಟು ದುಷ್ಟತನದಿಂದ ಕೂಡಿದ, ಕ್ರೋಧ, ಅಸೂಯೆ, ಪ್ರತಿಕಾರ ಮನೋಭಾವನೆಯಿಂದ ಕೂಡಿದ ಒಬ್ಬ ವ್ಯಕ್ತಿ ಆಗಲು ರಾಹುಲ್ ಗಾಂಧಿಗೆ ಸಾಧ್ಯವೇ ಇಲ್ಲ.

ರಾಹುಲ್ ಗಾಂಧಿ ಎಂದೊಡನೆ ಕುಟುಂಬ ರಾಜಕಾರಣ, ಅಪ್ಪು, ಪಪ್ಪು ಎಂದು ಗೇಲಿ ಮಾಡುತ್ತಾ ಆತನ ನೈತಿಕ ಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದ್ದಾರೆಂದುದನ್ನು ಬಿಟ್ಟರೆ, ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಲು ಬೇರೆನೂ ಇಲ್ಲದೇ ಇದನ್ನೇ ಪದೇ ಪದೇ ಹೇಳುತ್ತಿದ್ದಾರೆ ಎಂದರೆ ಏನು ಅರ್ಥ?


ಭ್ರಷ್ಟಾಚಾರ ವಿರೋಧಿ ನರೇಂದ್ರ ಮೋದಿ ಎಂದು ಹೇಳುತ್ತಿದ್ದಾರಲ್ಲ, ರಾಫೇಲ್ ಪ್ರಕರಣದಲ್ಲಿ ಮೋದಿ ಇಂದು ಬೆತ್ತಲಾಗಿ ಬೀದಿಯಲ್ಲಿ ನಿಂತಿದ್ದಾರಲ್ಲವೇ? ದೇಶದ ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರಲ್ಲವೇ? ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ, ಈ ಹಿಂದೆ ಯುಪಿಎ ಸಂದರ್ಭದಲ್ಲಿ ಜೈಲಿಗೆ ಹೋದ ಹಲವರು ಹೊರಗೆ ಬಂದರು. ಅವರು ರಾಬರ್ಟ್ ವಾದ್ರಾ ಸೇರಿದಂತೆ ಯಾರ್ಯಾರ ಮೇಲೆ ಆರೋಪವನ್ನು ಮಾಡಿದರೋ ಅವರ್ಯಾರೂ ಜೈಲಿಗೆ ಹೋಗಲಿಲ್ಲ.

ಎಲ್ಲ ರಾಷ್ಟ್ರೀಯ ಪಕ್ಷಗಳೂ ದೇಶವನ್ನು ಆಳಿದ್ದಾರೆ. ಅಧಿಕಾರ ಅನುಭವಿಸಿದಂತಹ ಪಕ್ಷಗಳೇ ಇರುವುದು. ಇವರೆಲ್ಲರ ಪೈಕಿ ಇಡೀ ದೇಶ ಗುರುತಿಸುವಂತಹ ಒಬ್ಬ ರಾಷ್ಟ್ರ ನಾಯಕ ಅಂದ್ರೆ ಯಾರಿದಾರೆ? ಮೋದಿ, ಮೋದಿಯ ನಂತರ.. .. ರಾಹುಲ್ ಗಾಂಧಿ ಬಿಟ್ಟರೆ ಇನ್ಯಾರಾದರೂ ಕಣ್ಣಿಗೆ ಕಾಣುತ್ತಾರಾ? ಇದ್ದಾರೆ, ವಾಮಪಂಥೀಯರಿದಾರೆ. ಸದ್ಗುಣ ಸಂಪನ್ನರಿದಾರೆ. ಆದರೆ ಅವರು ಸಮಾಜದಲ್ಲಿ ಹೆಚ್ಚು ಚಲಾವಣೆ ಆಗುತ್ತಿಲ್ಲ. ಅವರು ಅವರನ್ನು ತಿದ್ದಿಕೊಂಡು, ಇಡೀ ಇಂಡಿಯಾದ ನೇತೃತ್ವವನ್ನು ತಮ್ಮದಾಗಿಸಿಕೊಳ್ಳುವಂತಹ ಪ್ರಯತ್ನವನ್ನೇ ಮಾಡುವುದಿಲ್ಲವಲ್ಲ. ಈ ರೀತಿ ನಾವು ತುಂಬ ಅಸಹಾಯಕರಾಗಿದ್ದೀವಿ. ಆ ದೃಷ್ಟಿಯಲ್ಲಿ ರಾಹುಲ್ ಗಾಂಧಿಯೇ ನಮಗೆ ಸ್ವೀಕಾರಾರ್ಹ.


ವ್ಯಕ್ತಿಚಿತ್ರವನ್ನು ತೆಗೆದುಕೊಂಡು ರಾಹುಲ್ ಗಾಂಧಿಯನ್ನು ಪದೇ ಪದೇ ಗೇಲಿ ಮಾಡೋದರ ಅರ್ಥ ರಾಹುಲ್ ಗಾಂಧಿ ಅಷ್ಟು ಸಣ್ಣವ ಅಂತಲ್ಲ. ರಾಹುಲ್ ಗಾಂಧಿಯನ್ನು ಸಣ್ಣದು ಮಾಡುವ ಪ್ರಯತ್ನ ಅದು. ಸಣ್ಣದು ಮಾಡುವುದರ ಹಿಂದೆ ಇರುವಂತದ್ದು ಭಯ, ರಾಹುಲ್ ಗಾಂಧಿಯ ಬಗ್ಗೆ ಇರುವ ಭಯ. ಇಷ್ಟೊಂದು ಸಣ್ಣ ವ್ಯಕ್ತಿಯ ಬಗ್ಗೆ ಭಯ ಏಕೆ? ಮೋದಿ ರಾಹುಲ್ ಗಾಂಧಿಯ ಭಜನೆ ಮಾಡದೇ ಯಾವುದಾದರೊಂದು ಭಾಷಣವನ್ನು ಅಂತ್ಯ ಮಾಡುತ್ತಾರಾ? ಒಬ್ಬ ಅಪ್ಪು, ಪಪ್ಪು, ಕೆಲಸಕ್ಕೆ ಬಾರದ ಸಣ್ಣ ವ್ಯಕ್ತಿಯ ಬಗ್ಗೆ ಯಾಕೆ ಭಯ ಪಡಬೇಕು? ಇದು ರಾಹುಲ್ ಗಾಂಧಿಯ ಬಗ್ಗೆ ಒಳಗೆ ಅಡಗಿಸಿಟ್ಟುಕೊಂಡಿರುವ ಭಯ. ಆದ್ದರಿಂದ ಇಡೀ ದೇಶದಲ್ಲಿ ನರೇಂದ್ರ ಮೋದಿಯ ವಿರುದ್ಧ ಗೆಲ್ಲಿಸಬೇಕಾದಂತಹ, ಸ್ವೀಕರಿಸಬೇಕಾದಂತಹ ಏಕೈಕ ವ್ಯಕ್ತಿ, ಎಲ್ಲ ಕೋನಗಳಿಂದ ರಾಹುಲ್ ಗಾಂಧೀ ಎಂದು ನನಗೆ ಅನಿಸುತ್ತದೆ.


ನಾನು ರಾಹುಲ್ ಗಾಂಧಿಯನ್ನು ಭಾರಿ ಪುರುಷೋತ್ತಮ ಎಂದು ಭಾವಿಸುತ್ತಿಲ್ಲ. ಮನುಷ್ಯನಲ್ಲಿ ಅಡಗಿರುವಂತಹ ಕೆಲವು ದೌರ್ಬಲ್ಯಗಳು ಅವನಲ್ಲಿಯೂ ಇವೆ. ಆದರೆ ನರೇಂದ್ರ ಮೋದಿಗೆ ಹೋಲಿಸಿದರೆ ರಾಹುಲ್ ಗಾಂಧಿ ಅಪರಂಜಿಯಾಗಿ ವಿಜೃಂಭಿಸುತ್ತಾನೆ. ಇದನ್ನು ಜನ ಆಳವಾಗಿ ಯೋಚನೆ ಮಾಡಿ, ಚಿಂತನೆ ಮಾಡಿ ಸರಿಕಂಡರೆ ಒಪ್ಪಿಕೊಳ್ಳಿ, ಇಲ್ಲವೆಂದರೆ ಬಿಟ್ಟುಬಿಡಿ. ಆದರೆ ಒಂದಂತೂ ನಿಜ, ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...