Homeಮುಖಪುಟನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

- Advertisement -
- Advertisement -

| ಎ.ಕೆ.ಸುಬ್ಬಯ್ಯ | ಹಿರಿಯ ಚಿಂತಕರು.

ನರೇಂದ್ರ ಮೋದಿಯ ವ್ಯಕ್ತಿಚಿತ್ರದ ಎದುರಾಗಿ ರಾಹುಲ್ ಗಾಂಧಿಯನ್ನು ನಿಲ್ಲಿಸೋಣ. ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿಗಿಂತ ಕೆಟ್ಟವನು ಎಂದು ಹೇಳಲು ಸಾಧ್ಯವೇ ಇಲ್ಲ. ಅಥವಾ ನರೇಂದ್ರ ಮೋದಿ ರಾಹುಲ್ ಗಾಂಧಿಯಷ್ಟು ಒಳ್ಳೆಯವನು ಎಂದು ಹೇಳಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ರಾಹುಲ್ ಗಾಂಧಿಯಿಂದ ನರೇಂದ್ರ ಮೋದಿ ಆಗಲು ಸಾಧ್ಯವಿಲ್ಲ. ನರೇಂದ್ರ ಮೋದಿಯಿಂದ ರಾಹುಲ್ ಗಾಂಧಿ ಆಗಲು ಸಾಧ್ಯವಿಲ್ಲ.

ನರೇಂದ್ರ ಮೋದಿಯ ಸ್ಥಾನದಲ್ಲಿ ರಾಹುಲ್ ಗಾಂಧಿ ಇದ್ದಿದ್ದರೆ ಗುಜರಾತ್ ಹತ್ಯಾಕಾಂಡ ನಡೆಯುತ್ತಿತ್ತೇ? ಅದರ ನಂತರ ಸಿಬಿಐ ಅನ್ನು ವಶ ಮಾಡಿಕೊಂಡು ಅದರ ಮೂಲಕ ಕ್ರಿಮಿನಲ್‍ಗಳನ್ನೆಲ್ಲಾ ಪಾರು ಮಾಡುವ ಮಟ್ಟಕ್ಕೆ ರಾಹುಲ್ ಗಾಂಧಿ ಹೋಗುತ್ತಿದ್ದರಾ? ಯಾವ ಕಾರಣದಿಂದಲೂ, ಯಾವ ದೃಷ್ಟಿಕೋನದಿಂದಲೂ ನರೇಂದ್ರ ಮೋದಿಯಷ್ಟು ದುಷ್ಟತನದಿಂದ ಕೂಡಿದ, ಕ್ರೋಧ, ಅಸೂಯೆ, ಪ್ರತಿಕಾರ ಮನೋಭಾವನೆಯಿಂದ ಕೂಡಿದ ಒಬ್ಬ ವ್ಯಕ್ತಿ ಆಗಲು ರಾಹುಲ್ ಗಾಂಧಿಗೆ ಸಾಧ್ಯವೇ ಇಲ್ಲ.

ರಾಹುಲ್ ಗಾಂಧಿ ಎಂದೊಡನೆ ಕುಟುಂಬ ರಾಜಕಾರಣ, ಅಪ್ಪು, ಪಪ್ಪು ಎಂದು ಗೇಲಿ ಮಾಡುತ್ತಾ ಆತನ ನೈತಿಕ ಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದ್ದಾರೆಂದುದನ್ನು ಬಿಟ್ಟರೆ, ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಲು ಬೇರೆನೂ ಇಲ್ಲದೇ ಇದನ್ನೇ ಪದೇ ಪದೇ ಹೇಳುತ್ತಿದ್ದಾರೆ ಎಂದರೆ ಏನು ಅರ್ಥ?


ಭ್ರಷ್ಟಾಚಾರ ವಿರೋಧಿ ನರೇಂದ್ರ ಮೋದಿ ಎಂದು ಹೇಳುತ್ತಿದ್ದಾರಲ್ಲ, ರಾಫೇಲ್ ಪ್ರಕರಣದಲ್ಲಿ ಮೋದಿ ಇಂದು ಬೆತ್ತಲಾಗಿ ಬೀದಿಯಲ್ಲಿ ನಿಂತಿದ್ದಾರಲ್ಲವೇ? ದೇಶದ ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರಲ್ಲವೇ? ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ, ಈ ಹಿಂದೆ ಯುಪಿಎ ಸಂದರ್ಭದಲ್ಲಿ ಜೈಲಿಗೆ ಹೋದ ಹಲವರು ಹೊರಗೆ ಬಂದರು. ಅವರು ರಾಬರ್ಟ್ ವಾದ್ರಾ ಸೇರಿದಂತೆ ಯಾರ್ಯಾರ ಮೇಲೆ ಆರೋಪವನ್ನು ಮಾಡಿದರೋ ಅವರ್ಯಾರೂ ಜೈಲಿಗೆ ಹೋಗಲಿಲ್ಲ.

ಎಲ್ಲ ರಾಷ್ಟ್ರೀಯ ಪಕ್ಷಗಳೂ ದೇಶವನ್ನು ಆಳಿದ್ದಾರೆ. ಅಧಿಕಾರ ಅನುಭವಿಸಿದಂತಹ ಪಕ್ಷಗಳೇ ಇರುವುದು. ಇವರೆಲ್ಲರ ಪೈಕಿ ಇಡೀ ದೇಶ ಗುರುತಿಸುವಂತಹ ಒಬ್ಬ ರಾಷ್ಟ್ರ ನಾಯಕ ಅಂದ್ರೆ ಯಾರಿದಾರೆ? ಮೋದಿ, ಮೋದಿಯ ನಂತರ.. .. ರಾಹುಲ್ ಗಾಂಧಿ ಬಿಟ್ಟರೆ ಇನ್ಯಾರಾದರೂ ಕಣ್ಣಿಗೆ ಕಾಣುತ್ತಾರಾ? ಇದ್ದಾರೆ, ವಾಮಪಂಥೀಯರಿದಾರೆ. ಸದ್ಗುಣ ಸಂಪನ್ನರಿದಾರೆ. ಆದರೆ ಅವರು ಸಮಾಜದಲ್ಲಿ ಹೆಚ್ಚು ಚಲಾವಣೆ ಆಗುತ್ತಿಲ್ಲ. ಅವರು ಅವರನ್ನು ತಿದ್ದಿಕೊಂಡು, ಇಡೀ ಇಂಡಿಯಾದ ನೇತೃತ್ವವನ್ನು ತಮ್ಮದಾಗಿಸಿಕೊಳ್ಳುವಂತಹ ಪ್ರಯತ್ನವನ್ನೇ ಮಾಡುವುದಿಲ್ಲವಲ್ಲ. ಈ ರೀತಿ ನಾವು ತುಂಬ ಅಸಹಾಯಕರಾಗಿದ್ದೀವಿ. ಆ ದೃಷ್ಟಿಯಲ್ಲಿ ರಾಹುಲ್ ಗಾಂಧಿಯೇ ನಮಗೆ ಸ್ವೀಕಾರಾರ್ಹ.


ವ್ಯಕ್ತಿಚಿತ್ರವನ್ನು ತೆಗೆದುಕೊಂಡು ರಾಹುಲ್ ಗಾಂಧಿಯನ್ನು ಪದೇ ಪದೇ ಗೇಲಿ ಮಾಡೋದರ ಅರ್ಥ ರಾಹುಲ್ ಗಾಂಧಿ ಅಷ್ಟು ಸಣ್ಣವ ಅಂತಲ್ಲ. ರಾಹುಲ್ ಗಾಂಧಿಯನ್ನು ಸಣ್ಣದು ಮಾಡುವ ಪ್ರಯತ್ನ ಅದು. ಸಣ್ಣದು ಮಾಡುವುದರ ಹಿಂದೆ ಇರುವಂತದ್ದು ಭಯ, ರಾಹುಲ್ ಗಾಂಧಿಯ ಬಗ್ಗೆ ಇರುವ ಭಯ. ಇಷ್ಟೊಂದು ಸಣ್ಣ ವ್ಯಕ್ತಿಯ ಬಗ್ಗೆ ಭಯ ಏಕೆ? ಮೋದಿ ರಾಹುಲ್ ಗಾಂಧಿಯ ಭಜನೆ ಮಾಡದೇ ಯಾವುದಾದರೊಂದು ಭಾಷಣವನ್ನು ಅಂತ್ಯ ಮಾಡುತ್ತಾರಾ? ಒಬ್ಬ ಅಪ್ಪು, ಪಪ್ಪು, ಕೆಲಸಕ್ಕೆ ಬಾರದ ಸಣ್ಣ ವ್ಯಕ್ತಿಯ ಬಗ್ಗೆ ಯಾಕೆ ಭಯ ಪಡಬೇಕು? ಇದು ರಾಹುಲ್ ಗಾಂಧಿಯ ಬಗ್ಗೆ ಒಳಗೆ ಅಡಗಿಸಿಟ್ಟುಕೊಂಡಿರುವ ಭಯ. ಆದ್ದರಿಂದ ಇಡೀ ದೇಶದಲ್ಲಿ ನರೇಂದ್ರ ಮೋದಿಯ ವಿರುದ್ಧ ಗೆಲ್ಲಿಸಬೇಕಾದಂತಹ, ಸ್ವೀಕರಿಸಬೇಕಾದಂತಹ ಏಕೈಕ ವ್ಯಕ್ತಿ, ಎಲ್ಲ ಕೋನಗಳಿಂದ ರಾಹುಲ್ ಗಾಂಧೀ ಎಂದು ನನಗೆ ಅನಿಸುತ್ತದೆ.


ನಾನು ರಾಹುಲ್ ಗಾಂಧಿಯನ್ನು ಭಾರಿ ಪುರುಷೋತ್ತಮ ಎಂದು ಭಾವಿಸುತ್ತಿಲ್ಲ. ಮನುಷ್ಯನಲ್ಲಿ ಅಡಗಿರುವಂತಹ ಕೆಲವು ದೌರ್ಬಲ್ಯಗಳು ಅವನಲ್ಲಿಯೂ ಇವೆ. ಆದರೆ ನರೇಂದ್ರ ಮೋದಿಗೆ ಹೋಲಿಸಿದರೆ ರಾಹುಲ್ ಗಾಂಧಿ ಅಪರಂಜಿಯಾಗಿ ವಿಜೃಂಭಿಸುತ್ತಾನೆ. ಇದನ್ನು ಜನ ಆಳವಾಗಿ ಯೋಚನೆ ಮಾಡಿ, ಚಿಂತನೆ ಮಾಡಿ ಸರಿಕಂಡರೆ ಒಪ್ಪಿಕೊಳ್ಳಿ, ಇಲ್ಲವೆಂದರೆ ಬಿಟ್ಟುಬಿಡಿ. ಆದರೆ ಒಂದಂತೂ ನಿಜ, ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...