Homeಮುಖಪುಟನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

- Advertisement -
- Advertisement -

| ಎ.ಕೆ.ಸುಬ್ಬಯ್ಯ | ಹಿರಿಯ ಚಿಂತಕರು.

ನರೇಂದ್ರ ಮೋದಿಯ ವ್ಯಕ್ತಿಚಿತ್ರದ ಎದುರಾಗಿ ರಾಹುಲ್ ಗಾಂಧಿಯನ್ನು ನಿಲ್ಲಿಸೋಣ. ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿಗಿಂತ ಕೆಟ್ಟವನು ಎಂದು ಹೇಳಲು ಸಾಧ್ಯವೇ ಇಲ್ಲ. ಅಥವಾ ನರೇಂದ್ರ ಮೋದಿ ರಾಹುಲ್ ಗಾಂಧಿಯಷ್ಟು ಒಳ್ಳೆಯವನು ಎಂದು ಹೇಳಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ರಾಹುಲ್ ಗಾಂಧಿಯಿಂದ ನರೇಂದ್ರ ಮೋದಿ ಆಗಲು ಸಾಧ್ಯವಿಲ್ಲ. ನರೇಂದ್ರ ಮೋದಿಯಿಂದ ರಾಹುಲ್ ಗಾಂಧಿ ಆಗಲು ಸಾಧ್ಯವಿಲ್ಲ.

ನರೇಂದ್ರ ಮೋದಿಯ ಸ್ಥಾನದಲ್ಲಿ ರಾಹುಲ್ ಗಾಂಧಿ ಇದ್ದಿದ್ದರೆ ಗುಜರಾತ್ ಹತ್ಯಾಕಾಂಡ ನಡೆಯುತ್ತಿತ್ತೇ? ಅದರ ನಂತರ ಸಿಬಿಐ ಅನ್ನು ವಶ ಮಾಡಿಕೊಂಡು ಅದರ ಮೂಲಕ ಕ್ರಿಮಿನಲ್‍ಗಳನ್ನೆಲ್ಲಾ ಪಾರು ಮಾಡುವ ಮಟ್ಟಕ್ಕೆ ರಾಹುಲ್ ಗಾಂಧಿ ಹೋಗುತ್ತಿದ್ದರಾ? ಯಾವ ಕಾರಣದಿಂದಲೂ, ಯಾವ ದೃಷ್ಟಿಕೋನದಿಂದಲೂ ನರೇಂದ್ರ ಮೋದಿಯಷ್ಟು ದುಷ್ಟತನದಿಂದ ಕೂಡಿದ, ಕ್ರೋಧ, ಅಸೂಯೆ, ಪ್ರತಿಕಾರ ಮನೋಭಾವನೆಯಿಂದ ಕೂಡಿದ ಒಬ್ಬ ವ್ಯಕ್ತಿ ಆಗಲು ರಾಹುಲ್ ಗಾಂಧಿಗೆ ಸಾಧ್ಯವೇ ಇಲ್ಲ.

ರಾಹುಲ್ ಗಾಂಧಿ ಎಂದೊಡನೆ ಕುಟುಂಬ ರಾಜಕಾರಣ, ಅಪ್ಪು, ಪಪ್ಪು ಎಂದು ಗೇಲಿ ಮಾಡುತ್ತಾ ಆತನ ನೈತಿಕ ಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದ್ದಾರೆಂದುದನ್ನು ಬಿಟ್ಟರೆ, ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಲು ಬೇರೆನೂ ಇಲ್ಲದೇ ಇದನ್ನೇ ಪದೇ ಪದೇ ಹೇಳುತ್ತಿದ್ದಾರೆ ಎಂದರೆ ಏನು ಅರ್ಥ?


ಭ್ರಷ್ಟಾಚಾರ ವಿರೋಧಿ ನರೇಂದ್ರ ಮೋದಿ ಎಂದು ಹೇಳುತ್ತಿದ್ದಾರಲ್ಲ, ರಾಫೇಲ್ ಪ್ರಕರಣದಲ್ಲಿ ಮೋದಿ ಇಂದು ಬೆತ್ತಲಾಗಿ ಬೀದಿಯಲ್ಲಿ ನಿಂತಿದ್ದಾರಲ್ಲವೇ? ದೇಶದ ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರಲ್ಲವೇ? ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ, ಈ ಹಿಂದೆ ಯುಪಿಎ ಸಂದರ್ಭದಲ್ಲಿ ಜೈಲಿಗೆ ಹೋದ ಹಲವರು ಹೊರಗೆ ಬಂದರು. ಅವರು ರಾಬರ್ಟ್ ವಾದ್ರಾ ಸೇರಿದಂತೆ ಯಾರ್ಯಾರ ಮೇಲೆ ಆರೋಪವನ್ನು ಮಾಡಿದರೋ ಅವರ್ಯಾರೂ ಜೈಲಿಗೆ ಹೋಗಲಿಲ್ಲ.

ಎಲ್ಲ ರಾಷ್ಟ್ರೀಯ ಪಕ್ಷಗಳೂ ದೇಶವನ್ನು ಆಳಿದ್ದಾರೆ. ಅಧಿಕಾರ ಅನುಭವಿಸಿದಂತಹ ಪಕ್ಷಗಳೇ ಇರುವುದು. ಇವರೆಲ್ಲರ ಪೈಕಿ ಇಡೀ ದೇಶ ಗುರುತಿಸುವಂತಹ ಒಬ್ಬ ರಾಷ್ಟ್ರ ನಾಯಕ ಅಂದ್ರೆ ಯಾರಿದಾರೆ? ಮೋದಿ, ಮೋದಿಯ ನಂತರ.. .. ರಾಹುಲ್ ಗಾಂಧಿ ಬಿಟ್ಟರೆ ಇನ್ಯಾರಾದರೂ ಕಣ್ಣಿಗೆ ಕಾಣುತ್ತಾರಾ? ಇದ್ದಾರೆ, ವಾಮಪಂಥೀಯರಿದಾರೆ. ಸದ್ಗುಣ ಸಂಪನ್ನರಿದಾರೆ. ಆದರೆ ಅವರು ಸಮಾಜದಲ್ಲಿ ಹೆಚ್ಚು ಚಲಾವಣೆ ಆಗುತ್ತಿಲ್ಲ. ಅವರು ಅವರನ್ನು ತಿದ್ದಿಕೊಂಡು, ಇಡೀ ಇಂಡಿಯಾದ ನೇತೃತ್ವವನ್ನು ತಮ್ಮದಾಗಿಸಿಕೊಳ್ಳುವಂತಹ ಪ್ರಯತ್ನವನ್ನೇ ಮಾಡುವುದಿಲ್ಲವಲ್ಲ. ಈ ರೀತಿ ನಾವು ತುಂಬ ಅಸಹಾಯಕರಾಗಿದ್ದೀವಿ. ಆ ದೃಷ್ಟಿಯಲ್ಲಿ ರಾಹುಲ್ ಗಾಂಧಿಯೇ ನಮಗೆ ಸ್ವೀಕಾರಾರ್ಹ.


ವ್ಯಕ್ತಿಚಿತ್ರವನ್ನು ತೆಗೆದುಕೊಂಡು ರಾಹುಲ್ ಗಾಂಧಿಯನ್ನು ಪದೇ ಪದೇ ಗೇಲಿ ಮಾಡೋದರ ಅರ್ಥ ರಾಹುಲ್ ಗಾಂಧಿ ಅಷ್ಟು ಸಣ್ಣವ ಅಂತಲ್ಲ. ರಾಹುಲ್ ಗಾಂಧಿಯನ್ನು ಸಣ್ಣದು ಮಾಡುವ ಪ್ರಯತ್ನ ಅದು. ಸಣ್ಣದು ಮಾಡುವುದರ ಹಿಂದೆ ಇರುವಂತದ್ದು ಭಯ, ರಾಹುಲ್ ಗಾಂಧಿಯ ಬಗ್ಗೆ ಇರುವ ಭಯ. ಇಷ್ಟೊಂದು ಸಣ್ಣ ವ್ಯಕ್ತಿಯ ಬಗ್ಗೆ ಭಯ ಏಕೆ? ಮೋದಿ ರಾಹುಲ್ ಗಾಂಧಿಯ ಭಜನೆ ಮಾಡದೇ ಯಾವುದಾದರೊಂದು ಭಾಷಣವನ್ನು ಅಂತ್ಯ ಮಾಡುತ್ತಾರಾ? ಒಬ್ಬ ಅಪ್ಪು, ಪಪ್ಪು, ಕೆಲಸಕ್ಕೆ ಬಾರದ ಸಣ್ಣ ವ್ಯಕ್ತಿಯ ಬಗ್ಗೆ ಯಾಕೆ ಭಯ ಪಡಬೇಕು? ಇದು ರಾಹುಲ್ ಗಾಂಧಿಯ ಬಗ್ಗೆ ಒಳಗೆ ಅಡಗಿಸಿಟ್ಟುಕೊಂಡಿರುವ ಭಯ. ಆದ್ದರಿಂದ ಇಡೀ ದೇಶದಲ್ಲಿ ನರೇಂದ್ರ ಮೋದಿಯ ವಿರುದ್ಧ ಗೆಲ್ಲಿಸಬೇಕಾದಂತಹ, ಸ್ವೀಕರಿಸಬೇಕಾದಂತಹ ಏಕೈಕ ವ್ಯಕ್ತಿ, ಎಲ್ಲ ಕೋನಗಳಿಂದ ರಾಹುಲ್ ಗಾಂಧೀ ಎಂದು ನನಗೆ ಅನಿಸುತ್ತದೆ.


ನಾನು ರಾಹುಲ್ ಗಾಂಧಿಯನ್ನು ಭಾರಿ ಪುರುಷೋತ್ತಮ ಎಂದು ಭಾವಿಸುತ್ತಿಲ್ಲ. ಮನುಷ್ಯನಲ್ಲಿ ಅಡಗಿರುವಂತಹ ಕೆಲವು ದೌರ್ಬಲ್ಯಗಳು ಅವನಲ್ಲಿಯೂ ಇವೆ. ಆದರೆ ನರೇಂದ್ರ ಮೋದಿಗೆ ಹೋಲಿಸಿದರೆ ರಾಹುಲ್ ಗಾಂಧಿ ಅಪರಂಜಿಯಾಗಿ ವಿಜೃಂಭಿಸುತ್ತಾನೆ. ಇದನ್ನು ಜನ ಆಳವಾಗಿ ಯೋಚನೆ ಮಾಡಿ, ಚಿಂತನೆ ಮಾಡಿ ಸರಿಕಂಡರೆ ಒಪ್ಪಿಕೊಳ್ಳಿ, ಇಲ್ಲವೆಂದರೆ ಬಿಟ್ಟುಬಿಡಿ. ಆದರೆ ಒಂದಂತೂ ನಿಜ, ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...