Homeಮುಖಪುಟನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

- Advertisement -
- Advertisement -

| ಎ.ಕೆ.ಸುಬ್ಬಯ್ಯ | ಹಿರಿಯ ಚಿಂತಕರು.

ನರೇಂದ್ರ ಮೋದಿಯ ವ್ಯಕ್ತಿಚಿತ್ರದ ಎದುರಾಗಿ ರಾಹುಲ್ ಗಾಂಧಿಯನ್ನು ನಿಲ್ಲಿಸೋಣ. ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿಗಿಂತ ಕೆಟ್ಟವನು ಎಂದು ಹೇಳಲು ಸಾಧ್ಯವೇ ಇಲ್ಲ. ಅಥವಾ ನರೇಂದ್ರ ಮೋದಿ ರಾಹುಲ್ ಗಾಂಧಿಯಷ್ಟು ಒಳ್ಳೆಯವನು ಎಂದು ಹೇಳಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ರಾಹುಲ್ ಗಾಂಧಿಯಿಂದ ನರೇಂದ್ರ ಮೋದಿ ಆಗಲು ಸಾಧ್ಯವಿಲ್ಲ. ನರೇಂದ್ರ ಮೋದಿಯಿಂದ ರಾಹುಲ್ ಗಾಂಧಿ ಆಗಲು ಸಾಧ್ಯವಿಲ್ಲ.

ನರೇಂದ್ರ ಮೋದಿಯ ಸ್ಥಾನದಲ್ಲಿ ರಾಹುಲ್ ಗಾಂಧಿ ಇದ್ದಿದ್ದರೆ ಗುಜರಾತ್ ಹತ್ಯಾಕಾಂಡ ನಡೆಯುತ್ತಿತ್ತೇ? ಅದರ ನಂತರ ಸಿಬಿಐ ಅನ್ನು ವಶ ಮಾಡಿಕೊಂಡು ಅದರ ಮೂಲಕ ಕ್ರಿಮಿನಲ್‍ಗಳನ್ನೆಲ್ಲಾ ಪಾರು ಮಾಡುವ ಮಟ್ಟಕ್ಕೆ ರಾಹುಲ್ ಗಾಂಧಿ ಹೋಗುತ್ತಿದ್ದರಾ? ಯಾವ ಕಾರಣದಿಂದಲೂ, ಯಾವ ದೃಷ್ಟಿಕೋನದಿಂದಲೂ ನರೇಂದ್ರ ಮೋದಿಯಷ್ಟು ದುಷ್ಟತನದಿಂದ ಕೂಡಿದ, ಕ್ರೋಧ, ಅಸೂಯೆ, ಪ್ರತಿಕಾರ ಮನೋಭಾವನೆಯಿಂದ ಕೂಡಿದ ಒಬ್ಬ ವ್ಯಕ್ತಿ ಆಗಲು ರಾಹುಲ್ ಗಾಂಧಿಗೆ ಸಾಧ್ಯವೇ ಇಲ್ಲ.

ರಾಹುಲ್ ಗಾಂಧಿ ಎಂದೊಡನೆ ಕುಟುಂಬ ರಾಜಕಾರಣ, ಅಪ್ಪು, ಪಪ್ಪು ಎಂದು ಗೇಲಿ ಮಾಡುತ್ತಾ ಆತನ ನೈತಿಕ ಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದ್ದಾರೆಂದುದನ್ನು ಬಿಟ್ಟರೆ, ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಲು ಬೇರೆನೂ ಇಲ್ಲದೇ ಇದನ್ನೇ ಪದೇ ಪದೇ ಹೇಳುತ್ತಿದ್ದಾರೆ ಎಂದರೆ ಏನು ಅರ್ಥ?


ಭ್ರಷ್ಟಾಚಾರ ವಿರೋಧಿ ನರೇಂದ್ರ ಮೋದಿ ಎಂದು ಹೇಳುತ್ತಿದ್ದಾರಲ್ಲ, ರಾಫೇಲ್ ಪ್ರಕರಣದಲ್ಲಿ ಮೋದಿ ಇಂದು ಬೆತ್ತಲಾಗಿ ಬೀದಿಯಲ್ಲಿ ನಿಂತಿದ್ದಾರಲ್ಲವೇ? ದೇಶದ ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರಲ್ಲವೇ? ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ, ಈ ಹಿಂದೆ ಯುಪಿಎ ಸಂದರ್ಭದಲ್ಲಿ ಜೈಲಿಗೆ ಹೋದ ಹಲವರು ಹೊರಗೆ ಬಂದರು. ಅವರು ರಾಬರ್ಟ್ ವಾದ್ರಾ ಸೇರಿದಂತೆ ಯಾರ್ಯಾರ ಮೇಲೆ ಆರೋಪವನ್ನು ಮಾಡಿದರೋ ಅವರ್ಯಾರೂ ಜೈಲಿಗೆ ಹೋಗಲಿಲ್ಲ.

ಎಲ್ಲ ರಾಷ್ಟ್ರೀಯ ಪಕ್ಷಗಳೂ ದೇಶವನ್ನು ಆಳಿದ್ದಾರೆ. ಅಧಿಕಾರ ಅನುಭವಿಸಿದಂತಹ ಪಕ್ಷಗಳೇ ಇರುವುದು. ಇವರೆಲ್ಲರ ಪೈಕಿ ಇಡೀ ದೇಶ ಗುರುತಿಸುವಂತಹ ಒಬ್ಬ ರಾಷ್ಟ್ರ ನಾಯಕ ಅಂದ್ರೆ ಯಾರಿದಾರೆ? ಮೋದಿ, ಮೋದಿಯ ನಂತರ.. .. ರಾಹುಲ್ ಗಾಂಧಿ ಬಿಟ್ಟರೆ ಇನ್ಯಾರಾದರೂ ಕಣ್ಣಿಗೆ ಕಾಣುತ್ತಾರಾ? ಇದ್ದಾರೆ, ವಾಮಪಂಥೀಯರಿದಾರೆ. ಸದ್ಗುಣ ಸಂಪನ್ನರಿದಾರೆ. ಆದರೆ ಅವರು ಸಮಾಜದಲ್ಲಿ ಹೆಚ್ಚು ಚಲಾವಣೆ ಆಗುತ್ತಿಲ್ಲ. ಅವರು ಅವರನ್ನು ತಿದ್ದಿಕೊಂಡು, ಇಡೀ ಇಂಡಿಯಾದ ನೇತೃತ್ವವನ್ನು ತಮ್ಮದಾಗಿಸಿಕೊಳ್ಳುವಂತಹ ಪ್ರಯತ್ನವನ್ನೇ ಮಾಡುವುದಿಲ್ಲವಲ್ಲ. ಈ ರೀತಿ ನಾವು ತುಂಬ ಅಸಹಾಯಕರಾಗಿದ್ದೀವಿ. ಆ ದೃಷ್ಟಿಯಲ್ಲಿ ರಾಹುಲ್ ಗಾಂಧಿಯೇ ನಮಗೆ ಸ್ವೀಕಾರಾರ್ಹ.


ವ್ಯಕ್ತಿಚಿತ್ರವನ್ನು ತೆಗೆದುಕೊಂಡು ರಾಹುಲ್ ಗಾಂಧಿಯನ್ನು ಪದೇ ಪದೇ ಗೇಲಿ ಮಾಡೋದರ ಅರ್ಥ ರಾಹುಲ್ ಗಾಂಧಿ ಅಷ್ಟು ಸಣ್ಣವ ಅಂತಲ್ಲ. ರಾಹುಲ್ ಗಾಂಧಿಯನ್ನು ಸಣ್ಣದು ಮಾಡುವ ಪ್ರಯತ್ನ ಅದು. ಸಣ್ಣದು ಮಾಡುವುದರ ಹಿಂದೆ ಇರುವಂತದ್ದು ಭಯ, ರಾಹುಲ್ ಗಾಂಧಿಯ ಬಗ್ಗೆ ಇರುವ ಭಯ. ಇಷ್ಟೊಂದು ಸಣ್ಣ ವ್ಯಕ್ತಿಯ ಬಗ್ಗೆ ಭಯ ಏಕೆ? ಮೋದಿ ರಾಹುಲ್ ಗಾಂಧಿಯ ಭಜನೆ ಮಾಡದೇ ಯಾವುದಾದರೊಂದು ಭಾಷಣವನ್ನು ಅಂತ್ಯ ಮಾಡುತ್ತಾರಾ? ಒಬ್ಬ ಅಪ್ಪು, ಪಪ್ಪು, ಕೆಲಸಕ್ಕೆ ಬಾರದ ಸಣ್ಣ ವ್ಯಕ್ತಿಯ ಬಗ್ಗೆ ಯಾಕೆ ಭಯ ಪಡಬೇಕು? ಇದು ರಾಹುಲ್ ಗಾಂಧಿಯ ಬಗ್ಗೆ ಒಳಗೆ ಅಡಗಿಸಿಟ್ಟುಕೊಂಡಿರುವ ಭಯ. ಆದ್ದರಿಂದ ಇಡೀ ದೇಶದಲ್ಲಿ ನರೇಂದ್ರ ಮೋದಿಯ ವಿರುದ್ಧ ಗೆಲ್ಲಿಸಬೇಕಾದಂತಹ, ಸ್ವೀಕರಿಸಬೇಕಾದಂತಹ ಏಕೈಕ ವ್ಯಕ್ತಿ, ಎಲ್ಲ ಕೋನಗಳಿಂದ ರಾಹುಲ್ ಗಾಂಧೀ ಎಂದು ನನಗೆ ಅನಿಸುತ್ತದೆ.


ನಾನು ರಾಹುಲ್ ಗಾಂಧಿಯನ್ನು ಭಾರಿ ಪುರುಷೋತ್ತಮ ಎಂದು ಭಾವಿಸುತ್ತಿಲ್ಲ. ಮನುಷ್ಯನಲ್ಲಿ ಅಡಗಿರುವಂತಹ ಕೆಲವು ದೌರ್ಬಲ್ಯಗಳು ಅವನಲ್ಲಿಯೂ ಇವೆ. ಆದರೆ ನರೇಂದ್ರ ಮೋದಿಗೆ ಹೋಲಿಸಿದರೆ ರಾಹುಲ್ ಗಾಂಧಿ ಅಪರಂಜಿಯಾಗಿ ವಿಜೃಂಭಿಸುತ್ತಾನೆ. ಇದನ್ನು ಜನ ಆಳವಾಗಿ ಯೋಚನೆ ಮಾಡಿ, ಚಿಂತನೆ ಮಾಡಿ ಸರಿಕಂಡರೆ ಒಪ್ಪಿಕೊಳ್ಳಿ, ಇಲ್ಲವೆಂದರೆ ಬಿಟ್ಟುಬಿಡಿ. ಆದರೆ ಒಂದಂತೂ ನಿಜ, ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...