Homeಮುಖಪುಟನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

- Advertisement -
- Advertisement -

| ಎ.ಕೆ.ಸುಬ್ಬಯ್ಯ | ಹಿರಿಯ ಚಿಂತಕರು.

ನರೇಂದ್ರ ಮೋದಿಯ ವ್ಯಕ್ತಿಚಿತ್ರದ ಎದುರಾಗಿ ರಾಹುಲ್ ಗಾಂಧಿಯನ್ನು ನಿಲ್ಲಿಸೋಣ. ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿಗಿಂತ ಕೆಟ್ಟವನು ಎಂದು ಹೇಳಲು ಸಾಧ್ಯವೇ ಇಲ್ಲ. ಅಥವಾ ನರೇಂದ್ರ ಮೋದಿ ರಾಹುಲ್ ಗಾಂಧಿಯಷ್ಟು ಒಳ್ಳೆಯವನು ಎಂದು ಹೇಳಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ರಾಹುಲ್ ಗಾಂಧಿಯಿಂದ ನರೇಂದ್ರ ಮೋದಿ ಆಗಲು ಸಾಧ್ಯವಿಲ್ಲ. ನರೇಂದ್ರ ಮೋದಿಯಿಂದ ರಾಹುಲ್ ಗಾಂಧಿ ಆಗಲು ಸಾಧ್ಯವಿಲ್ಲ.

ನರೇಂದ್ರ ಮೋದಿಯ ಸ್ಥಾನದಲ್ಲಿ ರಾಹುಲ್ ಗಾಂಧಿ ಇದ್ದಿದ್ದರೆ ಗುಜರಾತ್ ಹತ್ಯಾಕಾಂಡ ನಡೆಯುತ್ತಿತ್ತೇ? ಅದರ ನಂತರ ಸಿಬಿಐ ಅನ್ನು ವಶ ಮಾಡಿಕೊಂಡು ಅದರ ಮೂಲಕ ಕ್ರಿಮಿನಲ್‍ಗಳನ್ನೆಲ್ಲಾ ಪಾರು ಮಾಡುವ ಮಟ್ಟಕ್ಕೆ ರಾಹುಲ್ ಗಾಂಧಿ ಹೋಗುತ್ತಿದ್ದರಾ? ಯಾವ ಕಾರಣದಿಂದಲೂ, ಯಾವ ದೃಷ್ಟಿಕೋನದಿಂದಲೂ ನರೇಂದ್ರ ಮೋದಿಯಷ್ಟು ದುಷ್ಟತನದಿಂದ ಕೂಡಿದ, ಕ್ರೋಧ, ಅಸೂಯೆ, ಪ್ರತಿಕಾರ ಮನೋಭಾವನೆಯಿಂದ ಕೂಡಿದ ಒಬ್ಬ ವ್ಯಕ್ತಿ ಆಗಲು ರಾಹುಲ್ ಗಾಂಧಿಗೆ ಸಾಧ್ಯವೇ ಇಲ್ಲ.

ರಾಹುಲ್ ಗಾಂಧಿ ಎಂದೊಡನೆ ಕುಟುಂಬ ರಾಜಕಾರಣ, ಅಪ್ಪು, ಪಪ್ಪು ಎಂದು ಗೇಲಿ ಮಾಡುತ್ತಾ ಆತನ ನೈತಿಕ ಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದ್ದಾರೆಂದುದನ್ನು ಬಿಟ್ಟರೆ, ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಲು ಬೇರೆನೂ ಇಲ್ಲದೇ ಇದನ್ನೇ ಪದೇ ಪದೇ ಹೇಳುತ್ತಿದ್ದಾರೆ ಎಂದರೆ ಏನು ಅರ್ಥ?


ಭ್ರಷ್ಟಾಚಾರ ವಿರೋಧಿ ನರೇಂದ್ರ ಮೋದಿ ಎಂದು ಹೇಳುತ್ತಿದ್ದಾರಲ್ಲ, ರಾಫೇಲ್ ಪ್ರಕರಣದಲ್ಲಿ ಮೋದಿ ಇಂದು ಬೆತ್ತಲಾಗಿ ಬೀದಿಯಲ್ಲಿ ನಿಂತಿದ್ದಾರಲ್ಲವೇ? ದೇಶದ ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರಲ್ಲವೇ? ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ, ಈ ಹಿಂದೆ ಯುಪಿಎ ಸಂದರ್ಭದಲ್ಲಿ ಜೈಲಿಗೆ ಹೋದ ಹಲವರು ಹೊರಗೆ ಬಂದರು. ಅವರು ರಾಬರ್ಟ್ ವಾದ್ರಾ ಸೇರಿದಂತೆ ಯಾರ್ಯಾರ ಮೇಲೆ ಆರೋಪವನ್ನು ಮಾಡಿದರೋ ಅವರ್ಯಾರೂ ಜೈಲಿಗೆ ಹೋಗಲಿಲ್ಲ.

ಎಲ್ಲ ರಾಷ್ಟ್ರೀಯ ಪಕ್ಷಗಳೂ ದೇಶವನ್ನು ಆಳಿದ್ದಾರೆ. ಅಧಿಕಾರ ಅನುಭವಿಸಿದಂತಹ ಪಕ್ಷಗಳೇ ಇರುವುದು. ಇವರೆಲ್ಲರ ಪೈಕಿ ಇಡೀ ದೇಶ ಗುರುತಿಸುವಂತಹ ಒಬ್ಬ ರಾಷ್ಟ್ರ ನಾಯಕ ಅಂದ್ರೆ ಯಾರಿದಾರೆ? ಮೋದಿ, ಮೋದಿಯ ನಂತರ.. .. ರಾಹುಲ್ ಗಾಂಧಿ ಬಿಟ್ಟರೆ ಇನ್ಯಾರಾದರೂ ಕಣ್ಣಿಗೆ ಕಾಣುತ್ತಾರಾ? ಇದ್ದಾರೆ, ವಾಮಪಂಥೀಯರಿದಾರೆ. ಸದ್ಗುಣ ಸಂಪನ್ನರಿದಾರೆ. ಆದರೆ ಅವರು ಸಮಾಜದಲ್ಲಿ ಹೆಚ್ಚು ಚಲಾವಣೆ ಆಗುತ್ತಿಲ್ಲ. ಅವರು ಅವರನ್ನು ತಿದ್ದಿಕೊಂಡು, ಇಡೀ ಇಂಡಿಯಾದ ನೇತೃತ್ವವನ್ನು ತಮ್ಮದಾಗಿಸಿಕೊಳ್ಳುವಂತಹ ಪ್ರಯತ್ನವನ್ನೇ ಮಾಡುವುದಿಲ್ಲವಲ್ಲ. ಈ ರೀತಿ ನಾವು ತುಂಬ ಅಸಹಾಯಕರಾಗಿದ್ದೀವಿ. ಆ ದೃಷ್ಟಿಯಲ್ಲಿ ರಾಹುಲ್ ಗಾಂಧಿಯೇ ನಮಗೆ ಸ್ವೀಕಾರಾರ್ಹ.


ವ್ಯಕ್ತಿಚಿತ್ರವನ್ನು ತೆಗೆದುಕೊಂಡು ರಾಹುಲ್ ಗಾಂಧಿಯನ್ನು ಪದೇ ಪದೇ ಗೇಲಿ ಮಾಡೋದರ ಅರ್ಥ ರಾಹುಲ್ ಗಾಂಧಿ ಅಷ್ಟು ಸಣ್ಣವ ಅಂತಲ್ಲ. ರಾಹುಲ್ ಗಾಂಧಿಯನ್ನು ಸಣ್ಣದು ಮಾಡುವ ಪ್ರಯತ್ನ ಅದು. ಸಣ್ಣದು ಮಾಡುವುದರ ಹಿಂದೆ ಇರುವಂತದ್ದು ಭಯ, ರಾಹುಲ್ ಗಾಂಧಿಯ ಬಗ್ಗೆ ಇರುವ ಭಯ. ಇಷ್ಟೊಂದು ಸಣ್ಣ ವ್ಯಕ್ತಿಯ ಬಗ್ಗೆ ಭಯ ಏಕೆ? ಮೋದಿ ರಾಹುಲ್ ಗಾಂಧಿಯ ಭಜನೆ ಮಾಡದೇ ಯಾವುದಾದರೊಂದು ಭಾಷಣವನ್ನು ಅಂತ್ಯ ಮಾಡುತ್ತಾರಾ? ಒಬ್ಬ ಅಪ್ಪು, ಪಪ್ಪು, ಕೆಲಸಕ್ಕೆ ಬಾರದ ಸಣ್ಣ ವ್ಯಕ್ತಿಯ ಬಗ್ಗೆ ಯಾಕೆ ಭಯ ಪಡಬೇಕು? ಇದು ರಾಹುಲ್ ಗಾಂಧಿಯ ಬಗ್ಗೆ ಒಳಗೆ ಅಡಗಿಸಿಟ್ಟುಕೊಂಡಿರುವ ಭಯ. ಆದ್ದರಿಂದ ಇಡೀ ದೇಶದಲ್ಲಿ ನರೇಂದ್ರ ಮೋದಿಯ ವಿರುದ್ಧ ಗೆಲ್ಲಿಸಬೇಕಾದಂತಹ, ಸ್ವೀಕರಿಸಬೇಕಾದಂತಹ ಏಕೈಕ ವ್ಯಕ್ತಿ, ಎಲ್ಲ ಕೋನಗಳಿಂದ ರಾಹುಲ್ ಗಾಂಧೀ ಎಂದು ನನಗೆ ಅನಿಸುತ್ತದೆ.


ನಾನು ರಾಹುಲ್ ಗಾಂಧಿಯನ್ನು ಭಾರಿ ಪುರುಷೋತ್ತಮ ಎಂದು ಭಾವಿಸುತ್ತಿಲ್ಲ. ಮನುಷ್ಯನಲ್ಲಿ ಅಡಗಿರುವಂತಹ ಕೆಲವು ದೌರ್ಬಲ್ಯಗಳು ಅವನಲ್ಲಿಯೂ ಇವೆ. ಆದರೆ ನರೇಂದ್ರ ಮೋದಿಗೆ ಹೋಲಿಸಿದರೆ ರಾಹುಲ್ ಗಾಂಧಿ ಅಪರಂಜಿಯಾಗಿ ವಿಜೃಂಭಿಸುತ್ತಾನೆ. ಇದನ್ನು ಜನ ಆಳವಾಗಿ ಯೋಚನೆ ಮಾಡಿ, ಚಿಂತನೆ ಮಾಡಿ ಸರಿಕಂಡರೆ ಒಪ್ಪಿಕೊಳ್ಳಿ, ಇಲ್ಲವೆಂದರೆ ಬಿಟ್ಟುಬಿಡಿ. ಆದರೆ ಒಂದಂತೂ ನಿಜ, ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...